CM Siddaramaiah ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Team Udayavani, Aug 20, 2024, 12:03 AM IST
ಉಡುಪಿ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿ ಕ್ಯೂಷನ್ಗೆ ಆದೇಶ ನೀಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಕಚೇರಿ ಎದುರಿನ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಕೆಲಕಾಲ ಉಡುಪಿ-ಮಣಿಪಾಲ ರಸ್ತೆ ತಡೆ ನಡೆಸಿ, ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಸಾಲು ಸಾಲು ಆರೋಪಗಳು ಬಂದರೂ ಯಾವುದನ್ನು ಒಪ್ಪಿ ಕೊಳ್ಳಲು ತಯಾರಿಲ್ಲ. ನ್ಯಾಯ, ನೀತಿಯ ಬಗ್ಗೆ ಮಾತನಾಡುವವರು ತಮ್ಮ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿಲ್ಲ ಏಕೆ? ಈಗ ಎಲ್ಲ ಕಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ರಾಜ್ಯದ ಉದ್ಧಾರ ಮಾಡುವ ಬದಲಿಗೆ ತಮ್ಮ ಕುಟುಂಬವನ್ನು ಉದ್ಧಾರ ಮಾಡಿಕೊಂಡಿದ್ದಾರೆ. ದುರಾಡಳಿತ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ತತ್ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಅವರು ತಮ್ಮ ಮೇಲೆ ಆರೋಪ ಬಂದ ಕೂಡಲೇ ರಾಜೀನಾಮೆ ನೀಡಬೇಕಿತ್ತು. ಆದರೆ ನೀಡಿಲ್ಲ. ಬಿಜೆಪಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.
ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಮೊಂಡುವಾದ ಬಿಟ್ಟು ತತ್ಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ರೇಶ್ಮಾ ಉದಯ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಶ್ಯಾಮಲಾ ಕುಂದರ್, ವಿಜಯ ಕುಮಾರ್ ಕೊಡವೂರು ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.