Triple talaq ನಿಷೇಧದಿಂದ ಲಿಂಗ ಸಮಾನತೆ: ಕೇಂದ್ರ
Team Udayavani, Aug 20, 2024, 6:30 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ನಿಷೇಧ ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರಕಾರವು, ಇದು ವಿವಾಹಿತ ಮುಸ್ಲಿಮ್ ಮಹಿಳೆಯರಿಗೆ ನ್ಯಾಯ ಮತ್ತು ಲಿಂಗ ಸಮಾನತೆಯನ್ನು ಕಲ್ಪಿಸಿಕೊಡುತ್ತದೆ ಎಂದು ಸುಪ್ರೀಂ ಕೋರ್ಟ್ಗೆ ಅಫಿದವಿತ್ ಸಲ್ಲಿಸಿದೆ.
ಕೇಂದ್ರ ಸರಕಾರವು 2019ರಲ್ಲಿ ಜಾರಿಗೆ ತಂದಿರುವ ಮಸ್ಲಿಮ್ ಮಹಿಳೆಯ ವಿವಾಹ ರಕ್ಷಣೆ ಹಕ್ಕುಗಳ ಕಾಯ್ದೆಯಡಿ ತ್ರಿವಳಿ ತಲಾಖ್ ನೀಡುವ ಪತಿಗೆ 3 ವರ್ಷಗಳ ವರೆಗೆ ಜೈಲು ಶಿಕ್ಷೆಯನ್ನು ವಿಧಿ ಸಬಹುದಾಗಿದೆ. ಈ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆ ಯಾಗಿರುವ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರಕಾರವು ಅಫಿದವಿತ್ ಸಲ್ಲಿಸಿದೆ. ನ್ಯಾಯಾಲಯವು 2017ರಲ್ಲಿ ತ್ರಿವಳಿ ತಲಾಖ್ ಅಸಾಂವಿಧಾನಿಕ ಎಂದು ಹೇಳಿದ್ದರೂ, ಮುಸ್ಲಿಮ್ ಸಮುದಾಯದಲ್ಲಿ ತ್ರಿವಳಿ ತಲಾಖ್ ಮೂಲಕ ನಡೆಯುವ ವಿಚ್ಛೇದನಗಳನ್ನು ಕಡಿಮೆಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸರಕಾರವೇ ಕೆಲವೊಂದು ಕ್ರಮಗಳನ್ನು ಕೈಗೊಂಡು, ಸಂತ್ರಸ್ತರ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೆಜ್ಜೆಯಿಡಬೇಕಾಗಿದೆ ಎಂದೂ ಕೇಂದ್ರ ಹೇಳಿದೆ.
ಅಲ್ಲದೆ ಅಪರಾಧಗಳನ್ನು ವ್ಯಾಖ್ಯಾನಿಸುವುದು ಮತ್ತು ಶಿಕ್ಷೆ ನಿಗದಿಪಡಿಸುವುದು ಸರಕಾರದ ಕರ್ತವ್ಯವಾಗಿದ್ದು, ಆ ಕೆಲಸವನ್ನು ಶಾಸಕಾಂಗ ಮಾಡಬೇಕು ಎಂದೂ ಅಫಿದವಿತ್ನಲ್ಲಿ ಕೇಂದ್ರ ಹೇಳಿದೆ.
ತ್ರಿವಳಿ ತಲಾಖ್ನಿಂದ ವಿಚ್ಛೇದನ ಪಡೆಯುತ್ತಿರುವ ವಿವಾಹಿತ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಸಂಸತ್ತು ಅವಿರೋಧವಾಗಿ ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಮದುವೆಯ ಬಂಧಕ್ಕೆ ತ್ರಿವಳಿ ತಲಾಖ್ ತೀವ್ರ ಹಾನಿಯನ್ನುಂಟು ಮಾಡುತ್ತದೆ ಎಂದು ಕೇಂದ್ರ ಹೇಳಿದೆ. ಜತೆಗೆ ಮದುವೆ ಎನ್ನುವುದು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಒಪ್ಪಲಾಗದು ಎಂದೂ ಕೇಂದ್ರ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.