Violence against women: ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಸಮಾಜಕ್ಕೆ ಕಪ್ಪುಚುಕ್ಕೆ


Team Udayavani, Aug 20, 2024, 6:00 AM IST

Symoblic

ರಾಜ್ಯ ಮತ್ತು ದೇಶದಲ್ಲಿ ಮಹಿಳೆಯರ ಸುರಕ್ಷೆಯನ್ನು ಖಾತರಿಪಡಿಸುವ ಹಲವಾರು ಕಾನೂನುಗಳು, ಕಾರ್ಯಕ್ರಮಗಳು ಇದ್ದರೂ ಸ್ತ್ರೀಯರ ಮೇಲಿನ ದೌರ್ಜನ್ಯ ಎಲ್ಲೆ ಮೀರಿ ನಡೆಯುತ್ತಿರುವುದು ನಮ್ಮ ನಾಗರಿಕ ಸಮಾಜಕ್ಕೊಂದು ಕಪ್ಪುಚುಕ್ಕೆಯೇ ಸರಿ. ಕೆಲವು ದೌರ್ಜನ್ಯ ಪ್ರಕರಣಗಳಂತೂ “ಮನುಷ್ಯನೊಬ್ಬ ಹೀಗೂ ವರ್ತಿಸುತ್ತಾನೆಯೇ’ ಎಂದು ನಮ್ಮನ್ನು ನಾವು ಪ್ರಶ್ನಿಸುವಂತಿದೆ. ಜತೆಗೆ ಕಾನೂನು, ಕಾರ್ಯಕ್ರಮಗಳಿಂದ ಮಾತ್ರ ಇದನ್ನು ತಡೆಯುವುದು ಅಸಾಧ್ಯ, ಸ್ತ್ರೀ ಘನತೆಯನ್ನು ಗೌರವಿಸುವ ಪ್ರಜ್ಞೆಯನ್ನು ಶಿಕ್ಷಣದ ಮೂಲಕ ಸಮಾಜದಲ್ಲಿ ಮೂಡಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ಎಂಬ ತಿಳಿವಳಿಕೆಯನ್ನು ಹೊಂದಿ ಆ ನಿಟ್ಟಿನಲ್ಲಿ ಮುಂದಡಿ ಇರಿಸಬೇಕಾಗಿದೆ.

ಕೆಲವು ಅಂಕಿ-ಅಂಶಗಳನ್ನು ಗಮನಿಸುವುದಾದರೆ 2020-21ರಿಂದ ಈ ವರ್ಷದ ಜುಲೈವರೆಗೆ ಅಂದರೆ ಕಳೆದ 5 ವರ್ಷಗಳಲ್ಲಿ ನಮ್ಮ ರಾಜ್ಯದಲ್ಲಿಯೇ ಸುಮಾರು 10 ಸಾವಿರಕ್ಕೂ ಹೆಚ್ಚು ಸ್ತ್ರೀ ದೌರ್ಜನ್ಯ ಸಂಬಂಧಿ ದೂರುಗಳು ರಾಜ್ಯ ಮಹಿಳಾ ಆಯೋಗದ ಕದತಟ್ಟಿವೆ. ಇವುಗಳಲ್ಲಿ ಕೌಟುಂಬಿಕ ದೌರ್ಜನ್ಯ. ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ- ಹೀಗೆ ನಾನಾ ವಿಧ. ರಕ್ಷಣೆ ಕೋರಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳು ಅತೀ ಹೆಚ್ಚು ಸಂಖ್ಯೆಯಲ್ಲಿವೆ ಎಂಬುದಾಗಿ ಅಂಕಿಅಂಶಗಳು ಹೇಳುತ್ತಿವೆ. ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ನಡೆದ ತರಬೇತಿ ನಿರತ ವೈದ್ಯೆಯ ಮೇಲಿನ ನಿಕೃಷ್ಟ ಕೃತ್ಯ ದೇಶದಲ್ಲಿ ಹೋರಾಟದ ಕಿಚ್ಚನ್ನೇ ಹೊತ್ತಿಸಿದೆ. ದಿನಂಪ್ರತಿ ದಿನಪತ್ರಿಕೆ ತೆರೆದರೆ ಯಾವುದಾದರೂ ಒಂದು ಸ್ವರೂಪದ ಮಹಿಳಾ ದೌರ್ಜನ್ಯ ಪ್ರಕರಣದ ವರದಿ ಓದಿ ತಲೆತಗ್ಗಿಸುವಂತೆ ಮಾಡುತ್ತದೆ.

ಕೆಲವು ವಾರಗಳ ಹಿಂದೆ ಉತ್ತರ ಭಾರತದಲ್ಲಿ ಅಶ್ಲೀಲ ಲೈಂಗಿಕ ವೀಡಿಯೋಗಳನ್ನು ವೀಕ್ಷಿಸುವ ಚಟವಿದ್ದ ಬಾಲಕನೊಬ್ಬ ತನ್ನ ಸಹೋದರಿಯ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣ ವರದಿಯಾಗಿತ್ತು. ಕಾನೂನು, ಯೋಜನೆಗಳ ಮೂಲಕ ಸ್ತ್ರೀದೌರ್ಜನ್ಯವನ್ನು ತಡೆಯಲು ಪ್ರಯತ್ನಿಸುವುದರ ಜತೆಗೆ ಬಾಲ್ಯದಿಂದಲೇ ಈ ವಿಷಯವಾಗಿ ಶಿಕ್ಷಣ ಒದಗಿಸುವುದು, ಸ್ತ್ರೀ ಘನತೆ ಯನ್ನು ಗೌರವಿಸುವ ಮೌಲ್ಯವನ್ನು ಕಲಿಸಿಕೊಡುವುದು ಅಗತ್ಯವಾಗಿ ಆಗಬೇಕು ಎಂಬುದಕ್ಕೆ ಈ ಪ್ರಕರಣ ಪುಷ್ಟಿ ಒದಗಿಸುತ್ತದೆ. ನಾಗರಿಕ ನಡವಳಿಕೆ ಯಾವುದು, ಅನಾಗರಿಕ ವರ್ತನೆ ಯಾವುದು ಎಂಬ ಎಚ್ಚರವನ್ನು ಮಕ್ಕಳಿಗೆ ಬಾಲ್ಯದಿಂದಲೇ ತಿಳಿಸುವ ಕೆಲಸವಾಗಬೇಕಾಗಿದೆ.

ವಿಚಿತ್ರ ಮತ್ತು ವಿಪರ್ಯಾಸದ ವಿಷಯ ಎಂದರೆ ಮಹಿಳಾ ಆಯೋಗದ ಅಂಕಿಅಂಶಗಳು ಒದಗಿಸುವ ವಿವರಗಳ ಪ್ರಕಾರ ವಿದ್ಯಾವಂತರು ಮತ್ತು ಉದ್ಯೋ ಗಸ್ಥರು ಹೆಚ್ಚಿರುವ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಇತರ ನಗರ ಪ್ರದೇಶ ಗಳಲ್ಲಿಯೇ ದೌರ್ಜನ್ಯ ಪ್ರಕರಣಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತಿವೆ. ಸ್ತ್ರೀಯ ಘನತೆಯನ್ನು ಗೌರವಿಸುವ ಮೌಲ್ಯವನ್ನು ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಬೆಳೆಸುವುದರ ಅಗತ್ಯವನ್ನು ಇದು ಸಾರಿಹೇಳುತ್ತದೆ.

ಸ್ತ್ರೀಯರು ಕೂಡ ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರಕ್ಕೆ ಮುಂದಾಗುವುದು ಸಲ್ಲದು, ಅದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎನ್ನುವುದನ್ನು ಮರೆಯಕೂಡದು. ಒಂದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದಕ್ಕೆ ಪೂರಕವಾಗಿದೆ. ಈ ಪ್ರಕರಣದಲ್ಲಿ ನಡುರಾತ್ರಿ ಪಾರ್ಟಿ ಮುಗಿಸಿ ಬಂದ ಯುವತಿ ಅಪರಿಚಿತ ಬೈಕ್‌ ಚಾಲಕನ ಬಳಿ ಡ್ರಾಪ್‌ ಕೇಳಿ ದೌರ್ಜನ್ಯಕ್ಕೆ ಒಳಗಾಗಿದ್ದಳು. ಇಂತಹ ಅಪಾಯಕ್ಕೆ ಆಹ್ವಾನ ನೀಡುವ ವರ್ತನೆಯಿಂದ ಸ್ತ್ರೀಯರು ದೂರವಿರುವುದು ಯೋಗ್ಯ.

ಕಾನೂನು, ಯೋಗ್ಯವಾದ ಮೌಲ್ಯಗಳನ್ನು ಬೆಳೆಸುವುದು ಮತ್ತು ಸ್ತ್ರೀಯರ ಘನತೆಯುಕ್ತ ನಡವಳಿಕೆಯ ಮೂಲಕ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆ ಆಗಿರುವ ಮಹಿಳಾ ದೌರ್ಜನ್ಯ ಕೊನೆಗೊಳ್ಳಲಿ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.