Mavinakatte: ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Team Udayavani, Aug 20, 2024, 11:12 AM IST
ಪುಂಜಾಲಕಟ್ಟೆ : ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ (ಆ.20ರಂದು) ಸಂಭವಿಸಿದೆ.
ಇಲ್ಲಿನ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ಆತ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಆತ ಉಜಿರೆಯ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು, ಕಾಲೇಜಿನಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.