Kolkata Doctor Case:ತಡರಾತ್ರಿ ಎಫ್ ಐಆರ್ ದಾಖಲಿಸಿದ್ದೇಕೆ? ಸುಪ್ರೀಂಕೋರ್ಟ್ ಕೆಂಡಾಮಂಡಲ
ಅಪರಾಧ ಕೃತ್ಯದ ಸ್ಥಳದ ಕುರುಹುಗಳನ್ನು ನಾಶಗೊಳಿಸುವ ಪ್ರಯತ್ನ ಇದಾಗಿದೆ
Team Udayavani, Aug 20, 2024, 12:27 PM IST
ನವದೆಹಲಿ: ಕೋಲ್ಕತಾದ ಪ್ರತಿಷ್ಠಿತ ಆರ್ ಜಿ ಕರ್(RG Kar Hospital) ಆಸ್ಪತ್ರೆಯಲ್ಲಿ ಸಂಭವಿಸಿದ ವೈದ್ಯೆ ಮೇಲಿನ ಅ*ತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್(Supreme court) ಸೋಮವಾರ ವಿಚಾರಣೆ ನಡೆಸಿದ್ದು, ಸಿಜೆಐ( CJI) ಡಿವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪರ್ಡಿವಾಲಾ, ಜಸ್ಟೀಸ್ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಆರ್ ಜಿ ಕರ್ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ವಿಫಲವಾದ ಪಶ್ಚಿಮಬಂಗಾಳ ಸರ್ಕಾರಕ್ಕೆ ಚಾಟಿ ಬೀಸಿ, ಮಹಿಳಾ ವೈದ್ಯರ ರಕ್ಷಣೆ ಕುರಿತು ಕಳವಳ ವ್ಯಕ್ತಪಡಿಸಿದೆ.
ಆರ್ ಜಿ ಕರ್ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಏನು ಮಾಡುತ್ತಿದ್ದರು? ವೈದ್ಯೆಯ ಘಟನೆಯನ್ನು ಆತ್ಮಹತ್ಯೆ ಎಂದು ಹೇಗೆ ಹೇಳಿದ್ದರು? ತಡರಾತ್ರಿವರೆಗೂ ಎಫ್ ಐಆರ್ ದಾಖಲಿಸಲಿಲ್ಲ ಯಾಕೆ? ಎಂದು ಪ್ರಶ್ನಿಸಿದೆ.
ಕೋಲ್ಕತಾ ಆರ್ ಜಿ ಕರ್ ಆಸ್ಪತ್ರೆಗೆ ಸಾವಿರಾರು ಜನರು ನುಗ್ಗಿ ದಾಂಧಲೆ ನಡೆಸಿರುವುದರ ಹಿಂದೆ ಅಪರಾಧ ಕೃತ್ಯದ ಸ್ಥಳದ ಕುರುಹುಗಳನ್ನು ನಾಶಗೊಳಿಸುವ ಪ್ರಯತ್ನ ಇದಾಗಿದೆ ಎಂದು ಸುಪ್ರೀಂಕೋರ್ಟ್ ಅನುಮಾನ ವ್ಯಕ್ತಪಡಿಸಿದೆ.
ವೈದ್ಯರು ಪ್ರತಿಭಟನಾ ನಿರತರಾದ ಸಂದರ್ಭದಲ್ಲಿ ಸಾವಿರಾರು ಜನರು ಆಸ್ಪತ್ರೆಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಸಂದರ್ಭದಲ್ಲಿ ಪೊಲೀಸರು ಏನು ಮಾಡುತ್ತಿದ್ದರು ಎಂದು ಸುಪ್ರೀಂಕೋರ್ಟ್ ಪೀಠ ಪ್ರಶ್ನಿಸಿದೆ.
ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ತರಬೇತಿಯಲ್ಲಿದ್ದ ವೈದ್ಯೆ ಮೇಲಿನ ಅ*ತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ Suo motu(ಸ್ವಯಂ ಆಗಿ) ನೆಲೆಯಲ್ಲಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.
ಆರ್ ಜಿ ಕರ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಕೋಣೆಯಲ್ಲಿ ಆಗಸ್ಟ್ 9ರಂದು ಅ*ತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು. ವೈದ್ಯೆಯ ಮೃತದೇಹ ಪತ್ತೆಯಾದ ನಂತರ ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗತೊಡಗಿತ್ತು. ಮರುದಿನ ಕೋಲ್ಕತಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಸೇವಕನೊಬ್ಬನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.