Karkala; ಬೋಳಕೋಡಿಯಲ್ಲಿ ಬೆಳ್ಮಣ್ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಕೂಟ
Team Udayavani, Aug 20, 2024, 5:25 PM IST
ಬೆಳ್ಮಣ್: ಕಬಡ್ಡಿ ನಮ್ಮ ಮಣ್ಣಿನ ಕ್ರೀಡೆಯಾಗಿದ್ದು ಇದೀಗ ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಿರುವುದು ಹೆಮ್ಮೆಯ ವಿಚಾರ ಎಂದು ಬೋಳ ಮಾರಗುತ್ತು ಸುಭಾಶ್ ಶೆಟ್ಟಿ ಹೇಳಿದರು
ಅವರು ಮಂಗಳವಾರ (ಆ.20) ಬೋಳಕೋಡಿಯ ನಿಟ್ಟೆ ಶಂಕರ ಅಡ್ಯಂತಾಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೆಳ್ಮಣ್ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನೆಯಲ್ಲಿ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಬೋಳ ಗ್ರಾಮ ಪಂಚಾಯತ್ ಸದಸ್ಯ ರಘುವೀರ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಪಂದ್ಯಾಟದ ಮಾರ್ಗದರ್ಶಕ ಕಲ್ಯಾ ವಸಂತ್, ಬೋಳಪರಾರಿ ವಿಕಾಸ್ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಬಾಲಾಜಿ ಶೆಟ್ಟಿ, ಶಿಕ್ಷಣ ಸಂಯೋಜಕ ಪ್ರಕಾಶ್, ಬೋಳ ಕುಸಲ್ದ ಜವನೆರ್ ತಂಡದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಬೋಳ ಕೋಡಿ ಶಾಲೆಯ ಮುಖ್ಯ ಶಿಕ್ಷಕ ಎ.ಆರ್.ಲಕ್ಕೊಂಡ, ಶಿಕ್ಷಕರಿದ್ದರು. ಸಚ್ಚೇರಿಪೇಟೆ ಸುಧೀರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಟದಲ್ಲಿ ಬಾಲಕರ 9 ಹಾಗೂ ಬಾಲಕಿಯರ 8 ತಂಡಗಳಿದ್ದವು. ಬಾಲಕರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ಪ್ರಥಮ ಸ್ಥಾನ ಗಳಿಸಿದರೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟೆ ದ್ವಿತೀಯ ಸ್ಥಾನ ಪಡೆಯಿತು.
ಬಾಲಕಿಯರ ವಿಭಾಗದಲ್ಲಿ ಎನ್.ಎಸ್.ಎ.ಎಂ ಹಿರಿಯ ಪ್ರಾಥಮಿಕ ಶಾಲೆ ಬೋಳಕೋಡಿ ಪ್ರಥಮ ಸ್ಥಾನ ಗಳಿಸಿದರೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ದ್ವಿತೀಯ ಸ್ಥಾನ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.