Kolhar:ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ ಮರಿಗಳು;ಅರಣ್ಯ ಇಲಾಖೆ ಸಿಬಂದಿಯಿಂದ ಚಿರತೆಗಾಗಿ ಶೋಧ
Team Udayavani, Aug 20, 2024, 8:34 PM IST
ಕೊಲ್ಹಾರ: ತಾಲೂಕಿನ ನಾಗರದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಕಾಣಿಸಿಕೊಂಡ ಕಾರಣದಿಂದ ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
ರೈತ ಮಹಿಳೆ ಪ್ರೇಮಾ ಸಂಜು ನಾವಿ ಅವರ ಹೇಳಿಕೆಯ ಮೇರೆಗೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಸವನಗೌಡ ಬಿರಾದಾರ ಹಾಗೂ ಬಸವರಾಜ ಕೊಣ್ಣೂರ ಸೇರಿದಂತೆ ಅವರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿರತೆ ಮರಿಗಳ ಹೆಜ್ಜೆ ಗುರುತು ಪರಿಶೀಲನೆ ಮಾಡಿದ ಬಳಿಕ ಚಿರತೆ ಇರುವುದು ಖಚಿತ ಪಡಿಸಿಕೊಂಡ ಹಿನ್ನೆಲೆ ಚಿರತೆಯ ಹುಡುಕಾಟಕ್ಕೆ ನಾವು ಎಂಟು ಸಿಬ್ಬಂದಿಗಳನ್ನು ನೇಮಿಸಿದ್ದೇವೆ. ಭಾನುವಾರ ಸಂಜೆಯಿಂದಲೇ ನಮ್ಮ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ನಾವು ಹುಡುಕಾಟ ನಡಿಸಿದ್ದೇವೆ. ಆದರೆ ಇದುವರೆಗೆ ಎಲ್ಲಿಯೂ ಕೂಡಾ ಚಿರತೆ ಪ್ರಾಣ ಹಾನಿ ಮಾಡಿರುವುದು ನಮಗೆ ಕಂಡು ಬಂದಿಲ್ಲ. ಚಿರತೆ ಮಧ್ಯಾಹ್ನದ ವೇಳೆ ತಿರುಗಾಡುವುದು ಕಡಿಮೆ, ಸಾಯಂಕಾಲ ಹಾಗೂ ಮುಂಜಾನೆಯ ಸಂದರ್ಭದಲ್ಲಿ ತಿರುಗಾಡುತ್ತದೆ. ಅದಕ್ಕಾಗಿ ನಾವು ಇಂದಿನಿಂದ ಸಾಯಂಕಾಲ ಹಾಗೂ ಮುಂಜಾನೆ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾ ಸಹಾಯದಿಂದ ಚಿರತೆಯ ಹುಡುಕಾಟ ನಡೆಸುವುದಾಗಿ ತಿಳಿಸಿದ್ದಾರೆ.
ನಾಗರದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನನ್ನ ಪತ್ನಿ ಪ್ರೇಮಾ ಮೆಕ್ಕೆ ಜೋಳಕ್ಕೆ ನೀರು ಹಾಯಿಸಲು ಹೋಗಿದ್ದರು. 10:30 ರ ಸುಮಾರಿಗೆ ಎರಡು ಚಿರತೆ ಮರಿ ಕಾಣಿಸಿಕೊಂಡಿದ್ದನ್ನು ನೋಡಿ ನನ್ನ ಪತ್ನಿ ಗಾಬರಿಯಿಂದ ಜಮೀನು ಬಿಟ್ಟು ಓಡಿ ಬಂದಿದ್ದಾಳೆ.
-ಸಂಜು ನಾವಿ -ನಾಗರದಿನ್ನಿ ಗ್ರಾಮದ ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.