Mysuru Dasara: ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಸಕಲ ತಯಾರಿ
ಸ್ವಾಗತ ಕಮಾನು ಅಳವಡಿಕೆ, ವೇದಿಕೆಗೆ ಆನೆಗಳ ಚಿತ್ತಾರ, ಸಿದ್ದತೆ ಪರಿಶೀಲಿಸಿದ ಅರಣ್ಯ ಇಲಾಖೆ ಎಪಿಸಿಸಿಎಫ್
Team Udayavani, Aug 20, 2024, 8:39 PM IST
ಹುಣಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಮುನ್ನುಡಿಯಾದ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿಯಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.
ಗಜಪಯಣಕ್ಕೆ ಚಾಲನೆ ನೀಡುವ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ಸಿಂಗರಿಸಲಾಗಿದ್ದು, ರಸ್ತೆಯುದ್ದಕ್ಕೂ ಸ್ವಾಗತ ಕಮಾನು ಅಳವಡಿಸಲಾಗಿದೆ. ಇನ್ನು ಕಾರ್ಯಕ್ರಮ ನಡೆಯುವ ವೇದಿಕೆಯ ಆನೆಗಳ ಚಿತ್ತಾರ ಬಿಡಿಸಿ ಅಲಂಕಾರಗೊಳಿಸಲಾಗಿದೆ. ಜರ್ಮನ್ ಟೆಂಟ್ನ ವೇದಿಕೆ ಹಾಗೂ ವಿಐಪಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ 3,500 ಮಂದಿಗೆ ಊಟದ ಪ್ಯಾಕೆಟ್ ವ್ಯವಸ್ಥೆ ಹಾಗೂ 900 ಮಂದಿ ವಿಐಪಿಗಳಿಗೆ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ.
ಹಿರಿಯ ಅಧಿಕಾರಿಗಳ ಪರಿಶೀಲನೆ:
ವೀರನಹೊಸಹಳ್ಳಿಗೆ ಎಪಿಸಿಸಿಎಫ್ ಕುಮಾರ್ ಪುಷ್ಕರ್, ಪ್ರಾಜೆಕ್ಟ್ ಟೈಗರ್ ಹೆಡ್ ರಮೇಶ್ಕುಮಾರ್, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿಪ್ರಿಯಾ, ಡಿಸಿಎಫ್ಗಳಾದ ಡಾ.ಐ.ಬಿ.ಪ್ರಭುಗೌಡ, ಡಾ.ಪಿ.ಎ.ಸೀಮಾ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸಿದ್ದತೆ ಕುರಿತು ಪರಿಶೀಲಿಸಿದರು. ಈ ವೇಳೆ ಆರ್.ಎಫ್.ಒಗಳಾದ ಸಂತೋಷ್ಕುಮಾರ್, ಅಭಿಷೇಕ್, ಪಶುವೈದ್ಯ ಡಾ.ಮುಜೀಬ್ ರೆಹಮಾನ್ ಮತ್ತಿತರರಿದ್ದರು.
ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತ್ಯೇಕವಾಗಿ ವೇದಿಕೆ, ಊಟದ ವ್ಯವಸ್ಥೆ ಕಲ್ಪಿಸಿರುವ ಶಾಲೆ, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಗಜಪಯಣದಲ್ಲಿ ಭಾಗವಹಿಸುವ ಅಭಿಮನ್ಯು ಸೇರಿ ಮೊದಲ ಹಂತದ 9 ಆನೆಗಳು ಮಂಗಳವಾರ ಸಂಜೆ ವೇಳೆಗೆ ವೀರನಹೊಸಹಳ್ಳಿಗೆ ಬಂದಿಳಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.