Mangaluru-Bengaluru ರೈಲು ಸಂಚಾರ ಪುನರಾರಂಭ
Team Udayavani, Aug 20, 2024, 11:44 PM IST
ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡ ಕುಸಿದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು ಮಂಗಳವಾರದಿಂದ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಂಡಿದೆ.
ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಸ್ಥಗಿತ ಮಾಡಿ, ರೈಲು ಮಾರ್ಗದ ಮಣ್ಣು ತೆರವು ಕಾಮಗಾರಿ ಆರಂಭಿಸಲಾಗಿತ್ತು.
ಸೋಮವಾರ ಸಂಜೆ ವೇಳೆಗೆ ಮಣ್ಣು ತೆರವು ಪೂರ್ಣಗೊಂಡು ರೈಲು ಮಾರ್ಗ ಸಂಚಾರಕ್ಕೆ ಸಿದ್ಧವಾಗಿತ್ತು. ಮಂಗಳವಾರದಿಂದ ಮಂಗಳೂರು-ಬೆಂಗಳೂರು ನಡುವೆ ರೈಲುಗಳು ನಿಗಧಿತ ಸಮಯದಂತೆ ಸಂಚಾರ ಆರಂಭಿಸಿವೆ.
ಗುಡ್ಡ ಕುಸಿತ ಪ್ರದೇಶದಲ್ಲಿ ಮಣ್ಣು ಕುಸಿತ ತಡೆಗೆ ಸುರಕ್ಷತಾ ಕೆಲಸಗಳು ಮುಂದುವರಿದಿವೆ ಎಂದು ರೈಲ್ವೇ ಮೂಲಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.