CSR Fund: ಶಾಲಾಭಿವೃದ್ಧಿಯ ಜತೆಯಲ್ಲಿ ನಿರ್ವಹಣೆಯೂ ಬಲುಮುಖ್ಯ


Team Udayavani, Aug 21, 2024, 6:00 AM IST

stede

ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ(ಸಿಎಸ್‌ಆರ್‌) ನಿಧಿಯಡಿಯಲ್ಲಿ ಅಭಿವೃದ್ಧಿ ಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ಶಿಕ್ಷಣ ಇಲಾಖೆ ರೂಪಿಸಿರುವ “ಸಮತ್ವ’ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಚಾಲನೆ ನೀಡಿದೆ.

ಶಿಕ್ಷಣ ಇಲಾಖೆಯ ಈ ಯೋಜನೆ ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಗಳ ಸುಧಾರಣೆಯ ನಿಟ್ಟಿನಲ್ಲಿ ಒಂದು ರಚನಾತ್ಮಕ ಹೆಜ್ಜೆಯಾಗಿದೆ. ಹಾಗೆಂದು ಸಿಎಸ್‌ಆರ್‌ ನಿಧಿಯನ್ನು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸುವುದು ಹೊಸ ಉಪಕ್ರಮವೇನಲ್ಲವಾದರೂ ಈ ಬಾರಿ ಸಿಎಸ್‌ಆರ್‌ ನಿಧಿಯನ್ನು ಶಾಲೆಗಳ ಅಭಿವೃದ್ಧಿಗೆ ಪೂರ್ಣ ಪ್ರಮಾಣದಲ್ಲಿ ಬಳಸಲು ಮುಂದಾಗಿರುವುದು ಸ್ವಾಗತಾರ್ಹ.

ಖಾಸಗಿಯವರ ಸಹಭಾಗಿತ್ವದಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರಿ ಶಾಲೆಗಳ ದತ್ತು, ಆರ್ಥಿಕ ನೆರವು ಸಹಿತ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಸರಕಾರ ರೂಪಿಸಿ ಅನುಷ್ಠಾನಗೊಳಿಸಿದ್ದು, ಭಾಗಶಃ ಯಶಸ್ಸನ್ನೂ ಕಂಡಿವೆ. ಇದರಿಂದ ಪ್ರೇರಿತವಾಗಿ ಶಿಕ್ಷಣ ಇಲಾಖೆ “ಸಮತ್ವ’ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯಡಿ ಕಂಪೆನಿಗಳು ಅಥವಾ ಉದ್ಯಮಿಗಳು ಅಪೇಕ್ಷಿಸುವ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

ತನ್ಮೂಲಕ ನಿಧಿಯನ್ನು ಒದಗಿಸುವ ಉದ್ಯಮಿಗಳು ಶಾಲಾಭಿವೃದ್ಧಿಯಲ್ಲಿ ಹೆಚ್ಚಿನ ಆಸ್ಥೆ ವಹಿಸಲು ಮತ್ತು ಶಾಲೆಯನ್ನು ಸುವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ಲಭಿಸಲಿದೆ. ಅಲ್ಲದೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಕಂಪೆನಿಗಳು ಮತ್ತು ಉದ್ಯಮಿಗಳಿಗೆ ಪ್ರೇರಣೆ ಲಭಿಸಲಿದ್ದು, ಮುಂಬರುವ ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲೆಗಳಿಗೆ ಕಾಯಕಲ್ಪ ಲಭಿಸುವ ನಿರೀಕ್ಷೆಯನ್ನು ಮೂಡಿಸಿದೆ.

ಇತ್ತೀಚಿನ ದಶಕಗಳಲ್ಲಿ ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿನ ಸರಕಾರಿ ಶಾಲೆಗಳಿಗೆ ಹೆಚ್ಚಿನ ಮೂಲಸೌಕರ್ಯಗಳು ಲಭಿಸುತ್ತಿದ್ದು, ಶಿಕ್ಷಕರಾದಿಯಾಗಿ ಸಿಬಂದಿಯೂ ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ಈ ಶಾಲೆಗಳು ಕೂಡ ಉತ್ತಮ ಫ‌ಲಿತಾಂಶ ಪಡೆಯುತ್ತಿವೆ. ಸಹಜವಾಗಿಯೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಈ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಸಾವಿರಾರು ಶಾಲೆಗಳಲ್ಲಿ ವಿದ್ಯಾರ್ಥಿಗಳ ಅಭಾವ ತಲೆದೋರಿದೆ.

ಇದೇ ಕಾರಣಕ್ಕಾಗಿ ಈಗಾಗಲೇ ನೂರಾರು ಸಂಖ್ಯೆಯಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚಲಾಗಿದ್ದರೆ, ಭಾರೀ ಸಂಖ್ಯೆಯ ಶಾಲೆಗಳು ಕನಿಷ್ಠ ಮೂಲಸೌಕರ್ಯಗಳನ್ನೂ ಹೊಂದಿರದೆ ಸೊರಗಿವೆ. ಗ್ರಾಮೀಣ ಪ್ರದೇಶಗಳಲ್ಲಿನ ಇನ್ನಷ್ಟು ಸರಕಾರಿ ಶಾಲೆಗಳು ಬಾಗಿಲು ಹಾಕುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆ, ಗ್ರಾಮೀಣ ಭಾಗದ ಶಾಲೆಗಳ ಪುನಶ್ಚೇತನಕ್ಕೆ ಮುಂದಾಗಿದೆ.

ಸರಕಾರದ ಆಶಯ, ಉದ್ದೇಶಗಳೆಲ್ಲವೂ ಸ್ತುತ್ಯಾರ್ಹವಾದರೂ ಇವೆಲ್ಲವನ್ನೂ ಈಡೇರಿಸುವಲ್ಲಿ ಮತ್ತು ಹೀಗೆ ಅಭಿವೃದ್ಧಿ ಪಡಿಸಲಾದ ಶಾಲೆಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವಲ್ಲಿ ಎಷ್ಟು ಬದ್ಧತೆಯನ್ನು ತೋರಲಿದೆ ಎಂಬುದು ಸದ್ಯದ ಪ್ರಶ್ನೆ. ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಲ್ಲಿಗೆ ಶಿಕ್ಷಣ ಇಲಾಖೆ ಅಥವಾ ಸರಕಾರದ ಜವಾಬ್ದಾರಿ ಕೊನೆಗೊಳ್ಳದು.

ಸಮತ್ವ ಯೋಜನೆಯಡಿ ಅಭಿವೃದ್ಧಿಗೊಂಡ ಸರಕಾರಿ ಶಾಲೆಗಳ ಸ್ಥಿತಿಗತಿಯ ಬಗೆಗೆ ಶಿಕ್ಷಣ ಇಲಾಖೆ ಸದಾ ನಿಗಾ ಇರಿಸಬೇಕು. ಈ ಶಾಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರ ಜತೆಯಲ್ಲಿ ಅಗತ್ಯ ಸಂಖ್ಯೆಯ ಶಿಕ್ಷಕರು ಮತ್ತು ಸಿಬಂದಿಯ ನೇಮಕಾತಿ, ವಿದ್ಯಾರ್ಥಿಗಳ ಪ್ರವೇಶಾತಿ, ಹಾಜರಾತಿ, ಫ‌ಲಿತಾಂಶ, ಶಿಕ್ಷಣದ ಗುಣಮಟ್ಟ ಇವೆಲ್ಲದರ ಬಗೆಗೆ ಶಿಕ್ಷಣ ಇಲಾಖೆ ಪದೇ ಪದೆ ಪರಿಶೀಲನೆ ನಡೆಸಿ, ತನ್ನ ನಿರೀಕ್ಷಿತ ಉದ್ದೇಶ, ಗುರಿಯನ್ನು ಸಾಧಿಸಬೇಕು.

ಇದೇ ವೇಳೆ ಸ್ಥಳೀಯರು ಕೂಡ ಈ ಶಾಲೆಗಳ ಸುವ್ಯವಸ್ಥಿತ ನಿರ್ವಹಣೆಗೆ ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಬೇಕು. ಸರಕಾರಿ ಶಾಲೆಗಳ ಉಳಿವಿಗೆ ಸಾಮೂಹಿಕ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಇದು ಸಾಧ್ಯವಾದರೆ ಸರಕಾರದ ಉದ್ದೇಶ ಈಡೇರಲು ಸಾಧ್ಯ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.