Cauvery Water: ತಿಂಗಳೊಳಗೆ ಬರಲಿದೆ ಕಾವೇರಿ 5ನೇ ಹಂತದ ನೀರು


Team Udayavani, Aug 21, 2024, 10:59 AM IST

Cauvery  Water: ತಿಂಗಳೊಳಗೆ ಬರಲಿದೆ ಕಾವೇರಿ 5ನೇ ಹಂತದ ನೀರು

ಬೆಂಗಳೂರು: ರಾಜಧಾನಿ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಹರಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕೈಗೊಂಡಿರುವ 5ನೇ ಹಂತದ ಯೋಜ ನೆಯ ಕಾಮಗಾರಿ ಮುಕ್ತಾಯಗೊಂಡಿದೆ.

ಇದೀಗ ಅಂತಿಮ ಹಂತದಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಿ ಕೊಳವೆ ಪರೀಕ್ಷೆ (ಟೆಸ್ಟಿಂಗ್‌) ಕಾರ್ಯ ಭರದಿಂದ ಸಾಗಿದೆ. ಕಾವೇರಿ 5ನೇ ಹಂತದ ಯೋಜನೆಯ ಕಾಮಗಾ ರಿಯು ಕೊನೆಗೂ ಮುಕ್ತಾಯಗೊಂಡಿದ್ದು, ಕೊಳವೆಗಳ ಟೆಸ್ಟಿಂಗ್‌ ಕಾರ್ಯ ಮುಗಿಯುತ್ತಿದ್ದಂತೆ 110 ಹಳ್ಳಿಗಳಿಗೆ ಕಾವೇರಿ ಹರಿದು ಬರಲಿದ್ದಾಳೆ. ಸೆಪ್ಟೆಂಬರ್‌ 2ನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಯೋಜನೆಗೆ ಚಾಲನೆ ನೀಡುವ ಸಾಧ್ಯತೆಗಳಿವೆ. ಇನ್ನೂ ಸೂಕ್ತ ದಿನಾಂಕ ನಿಗದಿಯಾಗಿಲ್ಲ. ಸದ್ಯ ಕಿಲೋಮೀಟರ್‌ ಲೆಕ್ಕದಲ್ಲಿ ಪ್ರತಿದಿನ ಜಲಮಂಡಳಿ ಅಧಿಕಾರಿಗಳು ಹಂತ-ಹಂತ ವಾಗಿ ನೀರಿನ ಕೊಳವೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕೊಳವೆ ಟೆಸ್ಟಿಂಗ್‌ ಹೇಗೆ?: ನಗರದ ಟಿ.ಕೆ.ಹಳ್ಳಿಯಲ್ಲಿರುವ ಮೊದಲ ಪಂಪಿಂಗ್‌ ಸ್ಟೇಷನ್‌ನಿಂದ ಹಾರೋಹಳ್ಳಿಯ 2ನೇ ಪಂಪಿಂಗ್‌ ಸ್ಟೇಷನ್‌ವರೆಗೆ ಕಾವೇರಿ ನೀರು ಹರಿಸಲಾಗಿದೆ. ಹಾರೋಹಳ್ಳಿಯಿಂದ ತಾತಗುಣಿ ಯಲ್ಲಿರುವ 3ನೇ ಪಂಪಿಂಗ್‌ ಸ್ಟೇಷನ್‌ಗೆ ನೀರು ಹರಿಸುವ ಕೆಲಸ ನಡೆಯುತ್ತಿದೆ. ಕಾವೇರಿ ನದಿಯಿಂದ ಪಂಪಿಂಗ್‌ ಸ್ಟೇಷನ್‌ಗಳಿಗೆ ಸಂಪರ್ಕಿಸಿ ರುವ ಬೃಹತ್‌ ಆಕಾರದ ಕೊಳವೆಗಳಲ್ಲಿ ಏನಾದರೂ ಸಮಸ್ಯೆ ಇದೆಯಾ ಅಥವಾ ಸರಾಗವಾಗಿ ನೀರು ಹರಿದು ಹೋಗಲಿವೆಯಾ ಎಂಬುದನ್ನು ಪರೀಕ್ಷಿಸುವ ಉದ್ದೇಶದಿಂದ ಪ್ರಾಯೋಗಿಕವಾಗಿ ಕೈಗೊಂಡಿದ್ದ ನೀರು ಹರಿಸುವ ಕಾರ್ಯ ಮುಕ್ತಾಯಗೊಂಡಿದೆ. ಇದೀಗ ಹೆಚ್ಚಿನ ಒತ್ತಡದಲ್ಲಿ ವೇಗವಾಗಿ (ಪ್ರಜರ್‌) ನೀರನ್ನು ಹರಿಸಿ ಕೊಳವೆಗಳಲ್ಲಿ ಸೋರಿಕೆ ಇವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಬಹುತೇಕ ಕಡೆ ಕೊಳವೆಗಳು ಸರಿಯಾಗಿವೆ: 110 ಹಳ್ಳಿಗಳಿಗೆ ಅಳವಡಿಸಿರುವ ನೂರಾರು ಕಿಲೋ ಮೀಟರ್‌ ಉದ್ದದ ಕೊಳವೆಗಳನ್ನು ಹಂತ-ಹಂತವಾಗಿ ಪರೀಕ್ಷಿಸಲಾಗುತ್ತಿದೆ. ಬಹುತೇಕ ಕಡೆ ಕೊಳವೆಗಳಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ. ನೀರು ಹರಿಸಲು ಯೋಗ್ಯವಾಗಿದೆ ಎಂದು ಎಂಜಿನಿಯರ್‌ ಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ನೀರಿನ ಕೊಳವೆಗಳಿಗೆ ಅಳವಡಿಸಿರುವ ವಾಲ್ಸ್‌ಗಳು ಸಡಿಲಗೊಂಡಿವೆಯೇ, ನೀರು ಹರಿಯುವಿಕೆ ಸರಾಗ ವಾಗಿವೆಯೇ, ಪೈಪ್‌ ಹಾನಿಯಾದ ಕೆಲವು ಕಡೆ ಅನ್ನು ಕೂಡಲೇ ರಿಪೇರಿ ಪಡಿಸುವುದು ಸೇರಿದಂತೆ ತಾಂತ್ರಿಕ (ಟೆಕ್ನಿಕಲ್‌) ವಿಚಾರಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಪರಿಶೀಲನೆ ಅಂತಿಮ ಹಂತದಲ್ಲಿದೆ. ಲೋಪ ಗಳು ಕಂಡು ಬಂದಲೆಲ್ಲ ಅದನ್ನು ಕೂಡಲೇ ಬಗೆಹರಿ ಸಲಾಗಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

ನೀರಿನ ಸಂಪರ್ಕ ಪಡೆಯಲು ಹಿಂದೇಟು: ಕಾವೇರಿ 5ನೇ ಹಂತದ ಯೋಜನೆಯ ಮೂಲಕ ಒಟ್ಟು 775 ಎಂಎಲ್‌ಡಿ ಕಾವೇರಿ ನೀರನ್ನು ಬೆಂಗಳೂರಿನ 110 ಹಳ್ಳಿಗಳಿಗೆ ಹರಿಸುವ ಸಾಮರ್ಥ್ಯವಿದೆ. 110 ಹಳ್ಳಿಗಳಲ್ಲಿ 3.50 ಲಕ್ಷ ಕಡೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಅವಕಾಶಗಳಿದ್ದರೂ, ಇದುವರೆಗೆ ಕೇವಲ 55 ಸಾವಿರ ಪ್ರದೇಶಗಳಲ್ಲಿ ಮಾತ್ರ ಕಾವೇರಿ 5ನೇ ಹಂತದ ಯೋಜನೆಯ ಸಂಪರ್ಕ ಅಳವಡಿಸಲಾಗಿದೆ. ಹೀಗಾಗಿ 775 ಎಂಎಲ್‌ಡಿ ಕಾವೇರಿ ನೀರು ತರಿಸಿದರೆ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಪೂರೈಕೆ ಮಾಡಲು ಜಲಮಂಡಳಿಯು ನಿರ್ಧರಿಸಿದೆ.

ಕಾವೇರಿ ನೀರಿನ ಸೌಲಭ್ಯ ಪಡೆಯುವ ಅವಕಾಶಗಳಿದ್ದರೂ 3 ಲಕ್ಷ ಕುಟುಂಬಗಳು ಬೋರ್‌ ವೆಲ್‌ ನೀರನ್ನೇ ಆಶ್ರಯಿಸಲು ಹೆಚ್ಚಿನ ಒಲವು ತೋರುತ್ತಿದೆ. ಈ ಪ್ರದೇಶಗಳಿಗೆ ಸರ್ಕಾರವು ಉಚಿತವಾಗಿ ಬೋರ್‌ವೆಲ್‌ ನೀರನ್ನು ಹರಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

5ನೇ ಹಂತದ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯ ಅಂತಿಮ ಹಂತದಲ್ಲಿ ಪರೀಕ್ಷಿಸುವ ಕಾರ್ಯಗಳು ನಡೆಸಲಾಗುತ್ತಿದೆ. ಆ ವೇಳೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಅದನ್ನು ಬಗೆಹರಿಸಲಾಗುವುದು. ಶೀಘ್ರದಲ್ಲೇ ಯೋಜನೆಗೆ ಚಾಲನೆ ನೀಡಲು ಸಿದ್ಧತೆಗಳು ಭರದಿಂದ ಸಾಗಿದೆ. ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌, ಜಲಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.