Telangana: 7 ಗಂಟೆಗಳ ಕಾಲ ವಿದ್ಯುತ್ ಕಡಿತ; ತಾನೇ ಕಂಬವೇರಿ ಸಮಸ್ಯೆ ಸರಿಪಡಿಸಿದ ವ್ಯಕ್ತಿ.!
Team Udayavani, Aug 21, 2024, 2:32 PM IST
ತೆಲಂಗಾಣ: ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾದ ಹಿನ್ನೆಲ್ಲೆ ವ್ಯಕ್ತಿಯೊಬ್ಬ ಸಮಸ್ಯೆಯನ್ನು ಸರಿಪಡಿಸಲು ವಿದ್ಯುತ್ ಕಂಬಕ್ಕೆ ಹತ್ತಿ ಅಪಾಯಕಾರಿ ಸಾಹಸಕ್ಕೆ ಮುಂದಾದ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಗ್ರಾಮದಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸಲಾಗಿತ್ತು. ನಿವಾಸಿಗಳು ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ನೀಡಿದ ಬಳಿಕ ಕೆಲ ಗಂಟೆಗಳವರೆಗೂ ಕಾದುಕೂತಿದ್ದಾರೆ. ಆದರೆ ಕರೆಂಟ್ ಬರದಿದ್ದಾಗ ಗ್ರಾಮಸ್ಥರು ಪರದಾಡಿದ್ದಾರೆ.
ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಒಬ್ಬ ವ್ಯಕ್ತಿ ಏನೇ ಆಗಲಿ ಇದನ್ನು ತಾವೇ ಸರಿಪಡಿಸಿಕೊಳ್ಳಬೇಕೆಂದು ವಿದ್ಯುತ್ ಕಂಬಕ್ಕೇರಿದ್ದಾನೆ. ಅಪಾಯದ ಹೊರತಾಗಿಯೂ ವಿದ್ಯುತ್ ಕಂಬಕ್ಕೇರಿ ಅಲ್ಲಿ ಏನೋ ಮಾಡಿದ ಬಳಿಕ ಗ್ರಾಮದಲ್ಲಿ ಕರೆಂಟ್ ಬಂದಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಾವೆಲ್ಲ ಪರದಾಡುವ ಸ್ಥಿತಿ ಬಂದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಹಾಗೂ ಇಲಾಖೆಯವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಬಗ್ಗೆ ಕೆಲ ರಾಜಕೀಯ ಮುಖಂಡರು ಕೂಡ ಟ್ವೀಟ್ ಮಾಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.