ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ


Team Udayavani, Aug 21, 2024, 6:11 PM IST

ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ

ಕಾರವಾರ: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ ಒತ್ತಾಯಿಸಿದರು.

ಇಲ್ಲಿನ ಪತ್ರಿಕಾಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ. ಅವರ ಮೇಲೆ ಆಪಾದನೆ ಬಂದಿದೆ. ರಾಜ್ಯದಲ್ಲಿ 135 ಸ್ಥಾನ ಪಡೆದಿರುವ ಕಾಂಗ್ರೆಸ್‌ ಒಳ್ಳೆಯ ಆಡಳಿತ ನೀಡಲಿ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಆರೋಪದಿಂದ ಮುಕ್ತರಾದ ನಂತರ ಮತ್ತೆ ಆಡಳಿತ ನಡೆಸಲಿ ಎಂದರು.

ಕಾಂಗ್ರೆಸ್‌ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ್ದು ಸರಿಯಲ್ಲ. ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿಯೇ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ಮಾಡಿದ್ದು ಅಕ್ಷಮ್ಯ ಅಪರಾಧ. ಸಿಎಂ ವಿರುದ್ಧ ಆರೋಪ ಕೇಳಿಬಂದಿದೆ. ಅದನ್ನು ಅವರು ಎದುರಿಸಬೇಕು. ವಿರೋಧ ಪಕ್ಷದ ಯಾವ ಪ್ರಶ್ನೆಗೂ ಉತ್ತರಿಸದೇ
ಸಿದ್ದರಾಮಯ್ಯ ಫಲಾಯನ ಮಾಡಬಾರದು ಎಂದರು.

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ಸದಾನಂದ ಭಟ್‌ ಮಾತನಾಡಿ ಸಿದ್ದರಾಮಯ್ಯ 14 ಬಜೆಟ್‌ ಮಂಡಿಸಿದವರು. ಅರ್ಥಿಕ ಖಾತೆ ಅವರ ಬಳಿಯೇ ಇದೆ. ಆದರೂ ಅವರಿಗೆ ವಾಲ್ಮೀಕಿ ನಿಗಮದ ಹಗರಣ ಗೊತ್ತಾಗಲಿಲ್ಲ ಎಂಬುದು ಸೋಜಿಗ. ಮುಡಾ ಹಗರಣ ಸಹ ಅವರ ಕೊರಳಿಗೆ ಬಿದ್ದಿದೆ. ಈ ವಿಚಾರದಲ್ಲಿ ರಾಜ್ಯಪಾಲರ ವಿರುದ್ಧ ಸಚಿವ ಸಂಪುಟ ನಿರ್ಣಯ ಮಾಡಿದ್ದು ಸರಿಯಲ್ಲ. ಇದು
ಸಂವಿಧಾನಕ್ಕೆ ತೋರಿದ ಅಗೌರವ ಎಂದರು.

ಸಿಎಂ ಸಿದ್ದರಾಮಯ್ಯ ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಬೆಳೆದವರು. ಹೆಗಡೆಯವರ ರಾಜಕೀಯ ಮೌಲ್ಯ
ಅನುಸರಿಸಬೇಕು. ಆರೋಪ ಕೇಳಿಬಂದಾದ ರಾಜೀನಾಮೆ ನೀಡಿದ ಅನೇಕ ಉದಹಾರಣೆಗಳಿವೆ. ಹಾಗೆಯೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಅಪರಾಧ ಸಾಬೀತಾಗದಿದ್ದರೆ ಮತ್ತೆ ಅಧಿಕಾರಕ್ಕೆ ಬರಲಿ. ತಾವು ಇಲ್ಲದೆ ಇದ್ದರೆ ಕಾಂಗ್ರೆಸ್‌ ಇರಲ್ಲ ಎಂಬುದನ್ನು ಬಿಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣ ಬಳಸಿಕೊಂಡರು. ನಾವು ರಾಜೀನಾಮೆ ಕೇಳಿದರೆ, ಇಡೀ
ಪ್ರಕರಣವನ್ನು ಮತ್ತೂಂದೆಡೆಗೆ ತಿರುಗಿಸಿದರು ಎಂದು ಆರೋಪಿಸಿದರು.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ನ ಸಚಿವ ಕೃಷ್ಣ ಭೈರೇಗೌಡ, ಜಮೀರ್‌ ಅಹಮ್ಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯ ಐವನ್‌
ಡಿಸೋಜಾ ಅವರು ಮಾತನಾಡಿದ್ದು ಅಕ್ಷಮ್ಯ. ಇವರಿಗೆಲ್ಲ ರಾಜ್ಯಪಾಲ ಹುದ್ದೆಯ ಮಹತ್ವವೇ ತಿಳಿದಿಲ್ಲ ಎಂಬುದು ಅವರ ಹೇಳಿಕೆಗಳಿಂದ ಸಾಬೀತಾಗಿದೆ ಎಂದರು. ಜಗದೀಶ್‌ ನಾಯಕ, ಸುಭಾಷ್‌ ಗುನಗಿ, ಕಿಶನ್‌‌, ಬಿಜೆಪಿ ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.

ಹತ್ತು ದಿನದ ನಂತರವೂ ಸಿಎಂ ಮಾತಿಗೆ ಬದ್ಧರಾಗಿರಲಿ
ಬಿಜೆಪಿ ಆರೋಪ ಮಾಡಿದೆ. ಅದಕ್ಕೆ ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಪ್ರಕರಣ ಹೈಕೋರ್ಟ್‌ ನಲ್ಲಿದೆ. ಹತ್ತು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್‌ ಸಿಕ್ಕಿದೆ. ಈಗ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದಿದ್ದಾರೆ. ಹತ್ತು ದಿನಗಳ ನಂತರ ಬರುವ ತೀರ್ಮಾನವನ್ನೂ ಅವರು ಒಪ್ಪಿಕೊಳ್ಳಬೇಕು. ಸತ್ಯಮೇವ ಜಯತೆ ಎಂಬ ಮಾತಿಗೆ ಬದ್ಧರಾಗಿರಬೇಕು ಎಂದು ಬಿಜೆಪಿ ವಕ್ತಾರ ಸದಾನಂದ ಭಟ್‌ ಹೇಳಿದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.