Thirthahalli: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು


Team Udayavani, Aug 21, 2024, 8:45 PM IST

Thirthahalli: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು

ತೀರ್ಥಹಳ್ಳಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಮುರಾರ್ಜಿ ವಸತಿ ಶಾಲೆಯ ಸಂಗೀತ ಶಿಕ್ಷಕ ಇಮ್ತಿಯಾಜ್ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಯ ವಿರುದ್ದ ಫೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

ಬುಧವಾರ ಇಲ್ಲಿನ ಪೋಲಿಸ್ ಠಾಣೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಪ್ರಮುಖರ ಸಮ್ಮುಖದಲ್ಲಿ ಈ ಘಟನೆಯ ಬಗ್ಗೆ ವಿವರಣೆ ನೀಡಿ, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮ್ಮೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸುತ್ತಿರುವುದಾಗಿ ಶಾಲೆಯ ಪ್ರಿನ್ಸಿಪಾಲರಿಗೆ ಲಿಖಿತ ದೂರು ನೀಡಿದ್ದು ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. 12 ವರ್ಷಗಳಿಂದ ಇಲ್ಲಿಯೆ ಕೆಲಸ ನಿರ್ವಹಿಸುತ್ತಿದ್ದ ಆತ ಮಹಿಳಾ ಸಿಬ್ಬಂದಿಗಳ ಜೊತೆಯಲ್ಲೂ ಕೆಟ್ಟದಾಗಿ ವರ್ತಿಸಿರುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ನಮ್ಮ ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲಾ ಎಂದೂ ತಿಳಿಸಿದರು.

ಈ ಘಟನೆ ಮಂಗಳವಾರ ಮಧ್ಯಾಹ್ನದ ವೇಳೆಗಷ್ಟೇ ನಮಗೆ ಮಾಹಿತಿ ದೊರೆತಿದ್ದು ತಲೆ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಆರೋಪಿಯ ಬೆನ್ನು ಹತ್ತಿದ ನಮ್ಮ ಸಿಬ್ಬಂದಿಗಳು ಅದೇ ದಿನ ರಾತ್ರಿ ಸಿನಿಮೀಯ ಘಟನೆಯ ರೀತಿಯಲ್ಲಿ ನೆಲಮಂಗಲದ ಸಮೀಪ ಅಲ್ಲಿನ ಡಿವೈಎಸ್‌ಪಿ ನೆರವಿನಿಂದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದೂ ಮೆಚ್ಚುಗೆ ವ್ಯಕ್ತಪಡಿಸಿದರು. ಸಂತ್ರಸ್ಥ ವಿಧ್ಯಾರ್ಥಿನಿಯರಿಗೆ ಸಾಂತ್ವನದ ಮಾತುಗಳನ್ನೂ ಹೇಳಲಾಗಿದೆ ಮತ್ತು ಮಫ್ತಿಯಲ್ಲಿ ಮಹಿಳಾ ಸಿಬ್ಬಂದಿಗಳನ್ನು ಕಾವಲಿಗೆ ನಿಯೋಜಿಸಲಾಗಿದೆ ಎಂದರು.

ಆರೋಪಿಯ ಪತ್ನಿ ಕೊಪ್ಪ ತಾಲೂಕಿನ ಬಾಳೆಹೊನ್ನೂರಿನಲ್ಲಿದ್ದು ಅಲ್ಲಿನ ಮನೆಯಿಂದ ಬಟ್ಟೆಯನ್ನು ಹೊಂದಿಸಿಕೊಂಡು ಚಿಕ್ಕಮಗಳೂರು ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ. ಚಿಕ್ಕಮಗಳೂರು ಬಸ್ ನಿಲ್ದಾಣದ ಸಿಸಿ ಟಿವಿಯಲ್ಲಿ ದೊರೆತ ಆತ ತೊಟ್ಟಿದ್ದ ಅಂಗಿಯ ಬಣ್ಣದ ಮಾಹಿತಿ ಪೋಲಿಸರಿಗೆ ಆರೋಪಿಯನ್ನು ಬಂಧಿಸುವಲ್ಲಿ ಸಹಕಾರಿಯಾಗಿದೆ ಎಂದೂ ವಿವರಿಸಿದರು.

ಡಿವೈಎಸ್‌ಪಿ ಗಜಾನನ ಸುತಾರ್ ಹಾಗೂ ಪೋಲಿಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯ ತಂಡದಲ್ಲಿ ಪಿಎಸ್‌ಐ ಶಿವನಗೌಡ, ಎಚ್‌ಸಿ ಲಿಂಗನಗೌಡ ಹಾಗೂ ಕಾನ್ಸ್ಟೇಬಲ್ ವೀರೇಂದ್ರ ಇದ್ದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆ ತಾಲೂಕಿನ ಘನತೆಗೆ ಮಸಿ ಬಳಿಯುವಂತಿದ್ದು ನಂದಿತಾ ಪ್ರಕರಣದಂತೆ ಉದ್ವಿಗ್ನ ಸ್ಥಿತಿಗೆ ತಲುಪುವ ಮುನ್ನ ಆರೋಪಿಯನ್ನು ಬಂಧಿಸಿರುವುದು ಪ್ರಶಂಸನೀಯವಾಗಿದೆ. ಇಂತಹ ಹೇಯಕೃತ್ಯಕ್ಕೆ ಕಾರಣನಾದ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದೂ ಆಗ್ರಹಿಸಿದರು.

ಡಿವೈಎಸ್‌ಪಿ ಗಜಾನನ ವಾಮನ ಸುತಾರ ಹಾಗೂ ಪೋಲಿಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ, ಬಿಜೆಪಿ ಪ್ರಮುಖರಾದ ಹೆದ್ದೂರು ನವೀನ್, ಮೋಹನಭಟ್, ಸೊಪ್ಪುಗುಡ್ಡೆ ರಾಘವೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.