Modi Poland Visit: ಪೋಲೆಂಡ್‌ಗೆ ಆಗಮಿಸಿದ ಪ್ರಧಾನಿ ಮೋದಿ; ಗುಜರಾತಿ ನೃತ್ಯ ಸ್ವಾಗತ, ಜೈಕಾರ

ಅನಿವಾಸಿ ಭಾರತೀಯರಿಂದ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ, ವಿವಿಧ ಘೋಷಣೆ

Team Udayavani, Aug 21, 2024, 9:56 PM IST

Poland

 ವಾರ್ಸಾ (ಪೋಲೆಂಡ್‌):  ಪ್ರಧಾನಿ ನರೇಂದ್ರ ಮೋದಿ ಪೋಲೆಂಡ್‌ ಹಾಗೂ ಉಕ್ರೇನ್‌ ದೇಶಗಳ ಅಧಿಕೃತ ಭೇಟಿಗಾಗಿ ಬುಧವಾರ ಸಂಜೆ ಪೋಲೆಂಡ್‌ನ ವಾರ್ಸಾ ಫ್ರೆಡರಿಕ್‌ ಚಾಪಿನ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದರು.  45 ವರ್ಷಗಳ ನಂತರ ಮಧ್ಯ ಯುರೋಪಿಯನ್ ದೇಶಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ನಾಯಕ (ಪ್ರಧಾನಿ) ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಭಾರತ ಮತ್ತು ಪೋಲೆಂಡ್ ತಮ್ಮ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವಾಗ ಪೋಲೆಂಡ್​ನ ವಾರ್ಸಾಗೆ ಅವರ ಭೇಟಿ ಮಹತ್ವ ಪಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ  ಪ್ರಧಾನಿ ಮೋದಿ, ಪೋಲೆಂಡ್‌ನಲ್ಲಿ ಬಂದಿಳಿದು ಇಲ್ಲಿನ ವಿವಿಧ ಕಾರ್ಯಕ್ರಮಗಳ ಎದುರು ನೋಡುತ್ತಿದ್ದೇನೆ. ಈ ಭೇಟಿಯು ಭಾರತ ಪೋಲೆಂಡ್ ಸ್ನೇಹ ಬಲಪಡಿಸುತ್ತದೆ ಮತ್ತು ಉಭಯ ರಾಷ್ಟ್ರಗಳ ಜನರಿಗೆ ಪ್ರಯೋಜನ  ಸಿಗಲಿದೆ ಎಂದು ಬರೆದಿದ್ದಾರೆ.

ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ: 
ಪೋಲೆಂಡ್​ನಲ್ಲಿ ಭಾರತೀಯ ವಲಸಿಗರು ಪ್ರಧಾನಿ ಮೋದಿ  ಆಗಮನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಪೋಲೆಂಡ್​ನ ಕಲಾವಿದರು ವಾರ್ಸಾ ಹೋಟೆಲ್​ನಲ್ಲಿ ಭಾರತೀಯ ಸಾಂಪ್ರದಾಯಿಕ ನೃತ್ಯದ ಮೂಲಕ ಮೋದಿಗೆ ಸ್ವಾಗತ ನೀಡಿದರು.
ವಾರ್ಸಾದ ಹೋಟೆಲ್ ಎದುರು ಮೋದಿ  ನೋಡಲು ಅನಿವಾಸಿ ಭಾರತೀಯರು ಸೇರಿದ್ದರು. ಮೋದಿ ಆಗಮಿಸುತ್ತಿದ್ದಂತೆ ಅವರು ಜೈಕಾರ ಹಾಕಿ ಸಂತಸ ವ್ಯಕ್ತಪಡಿಸಿದರು.

1979ರಲ್ಲಿ ಮೊರಾರ್ಜಿ ದೇಸಾಯಿ ನಂತರ 45 ವರ್ಷಗಳಲ್ಲಿ ಪೋಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ.  ರಕ್ಷಣಾ ಸಹಕಾರ ಮತ್ತು ಮಾಹಿತಿ ತಂತ್ರಜ್ಞಾನ, ಔಷಧೀಯ ಮತ್ತು ವಾಹನ ತಯಾರಿಕೆಯಲ್ಲಿ ಸಂಬಂಧಗಳ ಹೆಚ್ಚಿಸುವ ನಿರೀಕ್ಷೆಯಿದೆ.


ಗುಜರಾತಿ ನೃತ್ಯದ ಆಕರ್ಷಣೆ; ‘ಭಾರತ್ ಮಾತಾ ಕೀ ಜೈ’, ‘ಜೈ ಶ್ರೀರಾಮ್’ ಘೋಷಣೆ
ಸಂಜೆ ಪೋಲೆಂಡ್​ಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿಗೆ  ಗುಜರಾತಿ ನೃತ್ಯದ ಮೂಲಕ ಸ್ವಾಗತ ಕೋರಿದ್ದಾರೆ. ಬಳಿಕ ಅನಿವಾಸಿ ಭಾರತೀಯರು ಮೋದಿಯವರ ಕಾಣುತ್ತಿದ್ದಂತೆ ‘ಭಾರತ್ ಮಾತಾ ಕೀ ಜೈ’, ‘ಜೈ ಶ್ರೀರಾಮ್’ ಘೋಷಣೆಗಳ ಕೂಗಿ ತಮ್ಮ ಸಂಭ್ರಮ ವ್ಯಕ್ತಪಡಿಸಿದರು. ಈ ವೇಳೆ ನರೇಂದ್ರ ಮೋದಿ ಪೋಲೆಂಡ್‌ನಲ್ಲಿರುವ ಭಾರತೀಯ ಸಮುದಾಯದವರಿಗೆ ಆಟೋಗ್ರಾಫ್ ಹಾಕಿ, ಫೋಟೋಗೆ ಪೋಸ್ ಕೊಟ್ಟರು. ಕೆಲವರು ಮಹಿಳೆಯರು ಮೋದಿಯವರ ಕೈಗೆ ರಾಖಿಯನ್ನೂ ಕಟ್ಟಿದರು.

ನಮ್ಮ ರಾಜತಾಂತ್ರಿಕ ಸಂಬಂಧಗಳ 70 ವರ್ಷಗಳನ್ನು ನಾವು ಗುರುತಿಸುತ್ತಿರುವ ಸಂದರ್ಭದಲ್ಲಿ ಪೋಲೆಂಡ್‌ಗೆ ನನ್ನ ಭೇಟಿ ಬಂದಿದೆ. ಪೋಲೆಂಡ್ ಮಧ್ಯ ಯುರೋಪ್‌ನಲ್ಲಿ ಪ್ರಮುಖ ಆರ್ಥಿಕ ಪಾಲುದಾರ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ನಮ್ಮ ಪರಸ್ಪರ ಬದ್ಧತೆಯು ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ನನ್ನ ಸ್ನೇಹಿತ ಪ್ರಧಾನಿ ಡೊನಾಲ್ಡ್ ಟಸ್ಕ್ ರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಸ್ಮಾರಕಗಳಿಗೆ ಗೌರವ ನಮನ:
ವಾರ್ಸಾದಲ್ಲಿರುವ ಜಾಮ್‌ ಸಾಹೇಬ್‌ ನವಾನಗರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಈ ಸ್ಮಾರಕವು ನವಾನಗರದ (ಜಾಮ್‌ನಗರ) ಮಹಾರಾಜ  ಜಾಮ್‌ ಸಾಹೇಬ್‌ ದ್ವಿಗ್ವಿಜಯ ಸಿನ್ಹಾಜಿ ರಣಜಿತ್‌ಸಿನ್ಹಾಜಿ ಸವಿನೆನಪಿಗಾಗಿ ಕಟ್ಟಿಸಲಾಗಿದೆ. ೧೯೪೨ರ ಎರಡನೇ ಮಹಾಯುದ್ಧ ಸಂದರ್ಭದಲ್ಲಿ ನಿರಾಶ್ರಿತರಾಗಿದ್ದ ಪೊಲೀಶ್‌ ಮಕ್ಕಳಿಗೆ ವಸತಿ ವ್ಯವಸ್ಥೆ ಈ ಮಹಾರಾಜ ಕಲ್ಪಿಸಿದ್ದ ಅವರ ನೆನಪಿಗೆ ಸ್ಮಾರಕ ನಿರ್ಮಿಸಿದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Another suspected monkeypox case detected in Kerala: 2nd case in the country

Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್‌ ಪತ್ತೆ: ದೇಶದಲ್ಲಿ 2ನೇ ಪ್ರಕರಣ

Kolkata incident; CBI Report Concerned: Supreme court

Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Wholesale inflation at 4-month low: 1.31 per cent in August

Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್‌ನಲ್ಲಿ ಶೇ.1.31

Technical glitch in Jio network

Jio ನೆಟ್‌ವರ್ಕ್‌ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.