Karkal: ಚಲಿಸುತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು
Team Udayavani, Aug 21, 2024, 9:16 PM IST
ಕಾರ್ಕಳ: ನಿಟ್ಟೆ ಖಾಸಗಿ ಕಾಲೇಜಿನ ಕಾಲೇಜು ವಿದ್ಯಾರ್ಥಿ ಜನಿತ್ ಶೆಟ್ಟಿ (19) ಎಂಬವರು ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಿಟ್ಟೆ ಬಳಿ ಬುಧವಾರ ನಡೆದಿದೆ.
ವಿದ್ಯಾರ್ಥಿ ದ್ವಿತಿಯ ವರ್ಷದ ಬಿಎಸ್ಸಿನಲ್ಲಿ ವ್ಯಾಸಾಂಗ ಮಾಡುತಿದ್ದು ಬೆಳಗ್ಗೆ ಕಾರ್ಕಳದಿಂದ ಮಂಗಳೂರು ಕಡೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತಿದ್ದ . ಈ ವೇಳೆ ಚಲಿಸುತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ರಸ್ತೆಗೆ ಎಸೆಯಲ್ಪಟ್ಟಿದ್ದು ಇದೇ ವೇಳೆ ಹಿಂಬದಿಯ ಚಕ್ರ ಅವರ ಮೈ ಮೇಲೆ ಹರಿದು ಗಂಭೀರ ಗಾಯಗಳಾಗಿತ್ತು. ಗಾಯಾಳುವನ್ನು ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು. ಮೃತರು ತಾಯಿ, ತಂಗಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.