Mangaluru; ಬಾಕಿ ಪ್ರಕರಣಗಳ ಬಗ್ಗೆ ರಾಜ್ಯಪಾಲರ ಮೌನ ಪ್ರಶ್ನಿಸಿದ ಹರೀಶ್ ಕುಮಾರ್
Team Udayavani, Aug 22, 2024, 12:02 AM IST
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ತರಾತುರಿಯಲ್ಲಿ ಅನುಮತಿ ನೀಡಿರುವ ರಾಜ್ಯಪಾಲರು, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಇನ್ನೂ ತನಿಖೆಗೆ ಆದೇಶ ನೀಡದಿರುವುದು ಯಾಕೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದರು.
ಕಾಂಗ್ರೆಸ್ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಮೂವರು ಖಾಸಗಿ ವ್ಯಕ್ತಿಗಳು ದೂರು ನೀಡಿದ್ದರು. ಆದರೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಾಸಿ ಕ್ಯೂಶನ್ಗೆ ಅನುಮತಿ ಕೊರಿ ಎಸ್ಐಟಿಯೇ ಮನವಿ ಸಲ್ಲಿಸಿತ್ತು. ಆದರೂ ರಾಜ್ಯಪಾಲರು ಯಾಕೆ ಅನು ಮತಿಸಿಲ್ಲ ಎಂದು ಕೇಳಿದರು.
ಆ.19ರಂದು ಶಾಂತಿಯುತ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಕಲ್ಲು ತೂರಾಟ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವುದು ತಪ್ಪು. ಐವನ್ ಡಿ’ಸೋಜಾ ಅವರು ಬಾಂಗ್ಲಾದೇಶ, ಶ್ರೀಲಂಕಾದಲ್ಲಿನ ಅರಾಜಕತೆಯನ್ನು ಉಲ್ಲೇಖಿಸಿದ್ದಾರಷ್ಟೆ. ಅಂತಹ ಘಟನೆಗೆ ಇಲ್ಲಿ ಅವಕಾಶ ನೀಡಬಾರದು ಎಂದಿದ್ದರು. ಆದರೆ ಅವರ ವಿರುದ್ಧ ಪ್ರತಿಭ ಟನೆ ನಡೆಸುವ ನೈತಿಕತೆ ಬಿಜೆಪಿಗಿಲ್ಲ ಎಂದರು.
ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ, ಶಾಹುಲ್ ಹಮೀದ್ ಕೆ.ಕೆ., ಎಂ. ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.