Mangaluru: ಸಾಲ ತೀರಿಸಲು ನಕಲಿ ನೋಟು ಮುದ್ರಣ, ಪ್ರೆಸ್ ಮಾಲೀಕ ಸೇರಿ ನಾಲ್ವರ ಬಂಧನ
Team Udayavani, Aug 22, 2024, 9:07 AM IST
ಮಂಗಳೂರು: ಪ್ರೆಸ್ ಮಾಲೀಕರೊಬ್ಬರು ಸಾಲ ತೀರಿಸಲು ಯೂಟ್ಯೂಬ್ ನೋಡಿಕೊಂಡು 500 ರೂ. ಮುಖಬೆಲೆಯ ನಕಲಿ ನೋಟು ಮುದ್ರಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿದಂತೆ ಒಟ್ಟು ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ವಿ.ಪ್ರಿಯೇಶ್(38), ಪ್ರೆಸ್ ಮಾಲೀಕ ವಿನೋದ್ ಕುಮಾರ್ ಕೆ.(33), ಅಬ್ದುಲ್ ಖಾದರ್ ಎಸ್.ಎ(58) ಮತ್ತು ಕಡಬದ ಆಯೂಬ್ ಖಾನ್ (51) ಎನ್ನಲಾಗಿದೆ.
500 ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಅದನ್ನು ಚಲಾವಣೆ ಮಾಡಲು ಮಂಗಳೂರಿಗೆ ಬಂದಿದ್ದು ಈ ವೇಳೆ ಹಂಪನಕಟ್ಟೆಯ ಲಾಡ್ಜ್ ಒಂದರಲ್ಲಿ ತಂಗಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ 2,13,500 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ (ಸಿಸಿಬಿ) ಗೀತಾ ಡಿ ಕುಲಕರ್ಣಿ ಕಾಸರಗೋಡಿನಲ್ಲಿ ನಕಲಿ ನೋಟು ಮುದ್ರಿಸಿ ಅದನ್ನು ಮಂಗಳೂರು ನಗರದಲ್ಲಿ ಚಲಾವಣೆ ಮಾಡಲು ನಾಲ್ವರ ತಂಡ ನಗರದ ಹಂಪನಕಟ್ಟೆಯಲ್ಲಿರುವ ಲಾಡ್ಜ್ ಒಂದರಲ್ಲಿ ತಂಗಿದ್ದರು ಈ ಕುರಿತು ಮಾಹಿತಿ ಪಡೆದುಕೊಂಡ ನಮ್ಮ ತಂಡ ಲಾಡ್ಜ್ ಮೇಲೆ ದಾಳಿ ನಡೆಸಿ ಪ್ರೆಸ್ ಮಾಲೀಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರ ಬಳಿಯಿದ್ದ ನಾಲ್ಕು ಮೊಬೈಲ್ ಫೋನ್ ಹಾಗೂ 9,030 ರೂಪಾಯಿ ನಗದು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: Starbucks CEO: ಕಚೇರಿ ತಲುಪಲು ನಿತ್ಯ 1600 ಕಿ.ಮೀ. ಪಯಣಿಸುವ ಸ್ಟಾರ್ ಬಕ್ಸ್ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.