TVK ಪಕ್ಷದ ಧ್ವಜ ಅನಾವರಣಗೊಳಿಸಿದ ನಟ ವಿಜಯ್-2026ರ ಚುನಾವಣೆಯಲ್ಲಿ ಸ್ಪರ್ಧೆ
ತಮಿಳುನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯಬೇಕಾಗಿದೆ
Team Udayavani, Aug 22, 2024, 11:55 AM IST
ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ ಅವರು ಗುರುವಾರ (ಆಗಸ್ಟ್ 22) ಬೆಳಗ್ಗೆ ತಮ್ಮ ರಾಜಕೀಯ ಪಕ್ಷವಾದ “ತಮಿಳಗ ವೇಟ್ರಿ ಕಳಗಂ”(Tamizhaga Vetri Kazahagam)ನ ಧ್ವಜದ ಚಿಹ್ನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.
ನಟ ವಿಜಯ್ ಅವರು ಪಣಿಯೂರ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಧ್ವಜವನ್ನು ಬಿಡುಗಡೆಗೊಳಿಸಿ, ಬಳಿಕ ತಮ್ಮ ಪಕ್ಷದ ಅಧಿಕೃತ ಹಾಡನ್ನು(Song) ಬಿಡುಗಡೆಗೊಳಿಸಿದರು.
ಕುಂಕುಮ ಮತ್ತು ಹಳದಿ ಬಣ್ಣದ ಧ್ವಜದಲ್ಲಿ ಆನೆ ಮತ್ತು ನವಿಲು ಚಿತ್ರ ಧ್ವಜದಲ್ಲಿ ಇದ್ದು ಮಧ್ಯದಲ್ಲಿ ನಕ್ಷತ್ರಗಳು ಇವೆ. 2024ರ ಫೆಬ್ರುವರಿಯಲ್ಲಿ ತಮಿಳಗ ವೇಟ್ರಿ ಕಳಗಂ ಪಕ್ಷವನ್ನು ಸ್ಥಾಪಿಸಿರುವುದಾಗಿ ನಟ ವಿಜಯ್ ಘೋಷಿಸುವ ಮೂಲಕ ತಮಿಳುನಾಡಿನ ರಾಜಕೀಯ ಪ್ರವೇಶಿಸಿದ್ದರು.
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಅಲ್ಲದೇ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಿಜಯ್ ಅವರ ತಮಿಳಗ ವೇಟ್ರಿ ಕಳಗಂ ಯಾವುದೇ ರಾಜಕೀಯ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿಲ್ಲ.
ಧ್ವಜ ಬಿಡುಗಡೆಗೊಳಿಸಿ ಮಾತನಾಡಿದ ವಿಜಯ್, ನೀವೆಲ್ಲರೂ ನಮ್ಮ ಮೊದಲ ಸಭೆಯ ಬಗ್ಗೆ ಕಾತುರರಾಗಿದ್ದೀರಿ ಎಂಬುದು ತಿಳಿದಿದೆ. ಸಿದ್ಧತೆಗಳು ನಡೆಯುತ್ತಿದ್ದು, ಆ ಬಗ್ಗೆ ಶೀಘ್ರವೇ ಮಾಹಿತಿ ನೀಡುತ್ತೇನೆ. ಅದಕ್ಕೂ ಮೊದಲು ನಮ್ಮ ಪಕ್ಷದ ಧ್ವಜವನ್ನು ಇಂದು ಬಿಡುಗಡೆಗೊಳಿಸಿದ್ದೇನೆ. ತಮಿಳುನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯಬೇಕಾಗಿದೆ ಎಂದರು.
ತಮಿಳುನಾಡಿನ ಅಭಿವೃದ್ಧಿಗಾಗಿ ಪಣ ತೊಟ್ಟಿರುವುದಾಗಿ ಭರವಸೆ ನೀಡಿರುವ ನಟ ವಿಜಯ್, ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ಖಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.