Vijayapura: ಭಾರಿ ಮಳೆಗೆ ರಸ್ತೆಗಳು ಜಲಾವೃತ; ಕೊಚ್ಚಿಹೋದ ಸೇತುವೆ
ನೆಲಕಚ್ಚಿದ ಲೋಗಾಂವ ರೈತನ ದ್ರಾಕ್ಷಿ ಬೆಳೆ
Team Udayavani, Aug 22, 2024, 1:26 PM IST
ವಿಜಯಪುರ: ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ವಿಜಯಪುರ ಜಿಲ್ಲೆಯಲ್ಲಿ ಹಳ್ಳಗಳು ತುಂಬಿ ಹರಿಯತೊಡಗಿದ್ದು, ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಹುಲಗಬಾಳ ಗ್ರಾಮದ ಹೊರಭಾಗದಲ್ಲಿನ ಅಡವಿ ಹುಲಗಬಾಳ ಗ್ರಾಮದಿಂದ ಅಡವಿ ಹುಲಗಬಾಳ ತಾಂಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಹಳ್ಳದ ಸೇತುವೆ ಜಲಾವೃತವಾಗಿ ಕೊಚ್ಚಿಕೊಂಡು ಹೋಗಿದ್ದು, ಸಂಪರ್ಕ ಕಡಿತವಾಗಿದೆ.
ಅಡವಿ ಹುಲಗಬಾಳ ಗ್ರಾಮದಿಂದ ತಾಂಡಾ ಮಧ್ಯೆ ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಈ ಹಿಂದೆ ಎರಡು ಬಾರಿ ಕೊಚ್ಚಿ ಹೋಗಿದ್ದ, ಇದೀಗ ಮತ್ತೊಮ್ಮೆ ಸೇತುವೆ ನೀರು ಪಾಲಾಗಿದೆ.
ಕೊಲ್ಹಾರ ತಾಲೂಕಿನಲ್ಲಿ ಭಾರಿ ಮಳೆ ಸುರಿದಿದ್ದು, ಬಹುತೇಕ ಹಳ್ಳಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.
ಕೊಲ್ಹಾರ ತಾಲೂಕಿನ ರೋಣಿಹಾಳ ಹಳ್ಳದ ಮೇಲೆ ಮಳೆಯ ನೀರು ಹರಿಯಲು ಆರಂಭಿಸಿದ್ದು, ಅಪಾಯವನ್ನು ಲೆಕ್ಕಿಸದೆ ಹಳ್ಳದ ಸೇತುವೆ ಮೆಲೆಯೇ ಜನರ ಓಡಾಟ ನಡೆಸಿದ್ದಾರೆ.
ರೋಣಿಹಾಳ ಹಳ್ಳ ಮಾತ್ರವಲ್ಲದೆ ಗರಸಂಗಿ, ಆಸಂಗಿ ಹಳ್ಳಗಳೂ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಅಪಾಯದ ಮಧ್ಯೆಯೂ ಜನರು ಹಳ್ಳ ದಾಟಿಕೊಂಡು ಓಡಾಟ ನಡೆಸಿದ್ದಾರೆ.
ದ್ರಾಕ್ಷಿ ಬೆಳೆ ಹಾನಿ
ಜಿಲ್ಲೆಯಲ್ಲಿ ಸುರಿದ ಭಾತಿ ಮಳೆಗೆ ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆ ನೆಲಕ್ಕೆ ಕುಸಿದು ಬೆಳೆ ಹಾನಿಯಾಗಿದೆ.
ರಾಜು ಹುನ್ನೂರ ಎಂಬ ರೈತರ ತೋಟದಲ್ಲಿ ದ್ರಾಕ್ಷಿ ಬೆಳೆ ಹಾಗೂ ಬೆಳೆಗೆ ಅಳವಡಿಸಿರುವ ಕಂಬಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಬೆಳೆ ಭಾರಿ ಮಳೆಯ ಹೊಡೆತಕ್ಕೆ ನೆಲಕಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.