J&K Assembly Poll: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ -ಎನ್‌ಸಿ ಮೈತ್ರಿ

ಮೈತ್ರಿ ಘೋಷಿಸಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ

Team Udayavani, Aug 22, 2024, 5:54 PM IST

Cong-NC

ಶ್ರೀನಗರ (ಜಮ್ಮು-ಕಾಶ್ಮೀರ) :  ಆರ್ಟಿಕಲ್‌ 370 ರದ್ದಾದ ಬಳಿಕ ಮೊದಲ ಬಾರಿ ವಿಧಾನಸಭಾ ಚುನಾವಣೆ (Assembly Election) ಎದುರಿಸುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸೆ. 18 ರಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷವು  ಕಾಂಗ್ರೆಸ್‌ (Congress)ನೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (National Conference)  ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ತಿಳಿಸಿದ್ದಾರೆ.

ಶ್ರೀನಗರಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿಯವರೊಂದಿಗೆ ಮಾತುಕತೆ ಬಳಿಕ ಮೈತ್ರಿ ಘೋಷಿಸಿದ ಫಾರೂಕ್ ಅಬ್ದುಲ್ಲಾ, “ನ್ಯಾಷನಲ್ ಕಾಂಗ್ರೆಸ್ -ಕಾಂಗ್ರೆಸ್ ಮೈತ್ರಿಯು ದೇಶದಲ್ಲಿ ವಿಭಜಕ ಶಕ್ತಿಗಳ ಸೋಲಿಸುವ ಗುರಿ  ಹೊಂದಿದೆ” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನ್ಯಾಷನಲ್‌ ಕಾನ್ಫರೆನ್ಸ್‌  ಅಧ್ಯಕ್ಷ  ಫಾರೂಕ್ ಅಬ್ದುಲ್ಲಾ ಮತ್ತು  ಉಪಾಧ್ಯಕ್ಷ ಒಮರ್ ಅಬ್ದುಲ್ಲಾರನ್ನು ಶ್ರೀನಗರದ  ಗುಪ್ಕರ್ ರಸ್ತೆಯ ನಿವಾಸದಲ್ಲಿ ಬುಧವಾರ ತಡ ರಾತ್ರಿ ಭೇಟಿಯಾಗಿ ಮೈತ್ರಿ ಕುರಿತು ವಿಸ್ತೃತವಾಗಿ ಚರ್ಚಿಸಿದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಪಕ್ಷವು ಕಾಶ್ಮೀರ ಕಣಿವೆ ಭಾಗದಲ್ಲಿ12 ಸ್ಥಾನಕ್ಕೆ ಸ್ಪರ್ಧಿಸಲು ಆಸಕ್ತಿ ವಹಿಸಿದ್ದು, ನ್ಯಾಷನಲ್‌ ಕಾನ್ಫರೆನ್ಸ್‌ಗೆ   ಜಮ್ಮು ವಿಭಾಗದಲ್ಲಿ 12 ಸ್ಥಾನಗಳ ಬಿಟ್ಟುಕೊಡಲು ಉತ್ಸುಕವಾಗಿದೆ.  ಸೀಟುಗಳ ಹಂಚಿಕೆ ಬಗ್ಗೆ ಮತ್ತೊಂದು ಸುತ್ತಿನ ಮಾತುಕತೆ ಬಳಿಕ ಅಂತಿಮ ನಿರ್ಧಾರಕ್ಕೆ ಬರಲಿದೆ. ಎರಡು ಪಕ್ಷಗಳು ಮೈತ್ರಿಗಾಗಿ ಸ್ಥಳೀಯ ಮಟ್ಟದಲ್ಲಿ ಚರ್ಚೆ ನಡೆಸುತ್ತಿವೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಎನ್‌ಸಿ ನಾಯಕರೊಬ್ಬರ ಪ್ರಕಾರ, ಪಕ್ಷಗಳು ಮೈತ್ರಿ ಬಗ್ಗೆ ಮತ್ತು ಅವುಗಳ ನಡುವೆ ಸೀಟು ಹಂಚಿಕೆಯ ಬಗ್ಗೆ ಮೂರು ಸುತ್ತಿನ ಚರ್ಚೆಗಳ ನಡೆಸಿವೆ. ಇಂಡಿಯಾ ಬ್ಲಾಕ್‌ನ ಭಾಗವಾಗಿ ಎರಡು ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. ಕಾಶ್ಮೀರ ಕಣಿವೆಯಲ್ಲಿ ಸ್ಪರ್ಧಿಸಿದ ಮೂರು ಸೀಟುಗಳಲ್ಲಿ ಎನ್‌ಸಿ ಒಂದು ಕಳೆದುಕೊಂಡರೆ, ಜಮ್ಮುವಿನ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಸೋತಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಸೆ. 18, ಸೆ. 25 ಮತ್ತು ಅಕ್ಟೋಬರ್ 1 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಫಲಿತಾಂಶ ಹೊರ ಬೀಳಿಲಿದೆ.

ನಾಯಕರ ಗೌರವ ಉಳಿಸಿದಾಗ ಮೈತ್ರಿ ಸಂಭವಿಸುತ್ತದೆ: ರಾಹುಲ್‌ ಗಾಂಧಿ

ಶ್ರೀನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರ ಗೌರವವನ್ನು ಉಳಿಸಿಕೊಂಡಾಗ ಮೈತ್ರಿ ಸಂಭವಿಸುತ್ತದೆ. ವಿಧಾನಸಭಾ ಚುನಾವಣೆಗೆ ಮೈತ್ರಿ ಇರುತ್ತದೆ. ಅದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಗೌರವವನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಜಮ್ಮು ರಾಜ್ಯವು ಸಾಂಸ್ಕೃತಿಕ ಇತಿಹಾಸ ಹೊಂದಿರುವ ರಾಜ್ಯ, ಮಾತೆ ವೈಷ್ಣೋದೇವಿ ಭೂಮಿ, ಇಲ್ಲಿನ ಜನರ ಜೀವನಶೈಲಿ, ಯೋಚನಾ ಶೈಲಿ ವಿಭಿನ್ನ. ಇಲ್ಲಿನ ಸಂಸ್ಕೃತಿ, ಇತಿಹಾಸ, ಭಾಷೆಗಳ ರಕ್ಷಿಸುವ ಅಗತ್ಯವಿದೆ. ಆದರೆ ಬಿಜೆಪಿ ವಿಭಿನ್ನವಾಗಿ ಯೋಚಿಸುವ ಪಕ್ಷ. ಅವರು ಇಡೀ ದೇಶವನ್ನು ನಾಗಪುರದ ಆಣತಿಯಂತೆ ನಡೆಸುತ್ತಾರೆ ಎಂದು ದೂರಿದರು.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.