Illegal Property: ಲೋಕಾಯುಕ್ತದಿಂದ ಸತತ 2 ಗಂಟೆ ಡಿ.ಕೆ.ಶಿವಕುಮಾರ್‌ ವಿಚಾರಣೆ

ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಆರೋಪ, ಮೊದಲ ಬಾರಿಗೆ ವಿಚಾರಣೆಗೆ ಹಾಜರು

Team Udayavani, Aug 23, 2024, 6:25 AM IST

DK-Shiva-Kumar

ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ ಗಳಿಸಿದ ಆರೋಪದಡಿ ಲೋಕಾಯುಕ್ತ ಪೊಲೀಸರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಗುರುವಾರ ಸತತವಾಗಿ 2 ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರ ನೋಟಿಸ್‌ನ ಹಿನ್ನೆಲೆಯಲ್ಲಿ ಶಿವಕುಮಾರ್‌ ಗುರುವಾರ ಮಧ್ಯಾಹ್ನ ಲೋಕಾಯುಕ್ತ ಕಚೇರಿಗೆ ವಕೀಲ ಟಿ.ಬಿ.ರಾಜಶೇಖರ್‌ ಅವರೊಂದಿಗೆ ಹಾಜರಾಗಿದ್ದರು.

ತನಿಖಾಧಿಕಾರಿ ಡಿವೈಎಸ್‌ಪಿ ಎಂ.ಎಚ್‌. ಸತೀಶ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಮುಂದಿಟ್ಟು ಹೇಳಿಕೆ ದಾಖಲಿಸಿಕೊಂಡರು. ಈ ಪ್ರಕರಣದಲ್ಲಿ ಡಿಕೆಶಿ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ಹಾಜರಾಗಿದ್ದಾರೆ. ಅವರು ಹಾಜರಾದ ಸ್ವಲ್ಪ ಹೊತ್ತಿನಲ್ಲಿ ಮಾಜಿ ಮೇಯರ್‌ ಸಂಪತ್‌ರಾಜ್‌ ಕೂಡ ಆಗಮಿಸಿದರು.

ಡಿಸಿಎಂ ವಿಚಾರಣೆ ಹೇಗಿತ್ತು?
ತನಿಖಾ ತಂಡವು ಕೇಳಬೇಕಿ ರುವ ಪ್ರಶ್ನೆಗಳನ್ನು ಮೊದಲೇ ಸಿದ್ಧತೆ ಮಾಡಿತ್ತು. ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಏನು ಹೇಳುತ್ತೀರಿ ಎಂಬಿತ್ಯಾದಿ ಒಂದೊಂದೇ ಪ್ರಶ್ನೆಗೆ ಡಿಸಿಎಂ ಉತ್ತರಿಸುತ್ತಾ ಹೋದರು. ಕೆಲವು ಪ್ರಶ್ನೆಗಳಿಗೆ ದಾಖಲೆಗಳೊಂದಿಗೆ ಅನಂತರ ಮಾಹಿತಿ ಕೊಡುವುದಾಗಿ ಹೇಳಿದ್ದಾರೆಂದು ತಿಳಿದು ಬಂದಿದೆ. ಲೋಕಾಯುಕ್ತ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಇನ್ನಷ್ಟೇ ಸಾಕ್ಷ್ಯ ಕಲೆ ಹಾಕಬೇಕಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಏನಿದು ಪ್ರಕರಣ?
2013ರಿಂದ 2018ರ ಅವಧಿಯಲ್ಲಿ ಆದಾಯಕ್ಕಿಂತ ಕೋಟ್ಯಂತರ ರೂ. ಅಧಿಕ ಮೌಲ್ಯದ ಆಸ್ತಿ ಸಂಪಾದಿಸಿರುವ ಆರೋಪದಡಿ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿತ್ತು. 2019ರ ಸೆಪ್ಟಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೊಟ್ಟ ಮಾಹಿತಿ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ಬಿಜೆಪಿ ರಾಜ್ಯ ಸರಕಾರವು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಕಾಂಗ್ರೆಸ್‌ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಡಿಕೆಶಿ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಲೋಕಾಯುಕ್ತ ಪೊಲೀಸರಿಗೆ ತನಿಖೆಯನ್ನು ವಹಿಸಿತ್ತು.

ಲೋಕಾಯುಕ್ತಕ್ಕೆ ಮಾಹಿತಿ ಕೊಡದ ಸಿಬಿಐ
ಶಿವಕುಮಾರ್‌ ವಿರುದ್ಧ ಸಿಬಿಐಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ಯನ್ನು ಲೋಕಾಯುಕ್ತಕ್ಕೆ ನೀಡಿರುವ ರಾಜ್ಯ ಸರಕಾರದ ನಡೆಯನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ. ಹಲವು ದಾಖಲೆಗಳನ್ನು ಈಗಾಗಲೇ ಕಲೆ ಹಾಕಿದ್ದು, ನಾವೇ ತನಿಖೆ ಮುಂದುವರಿಸಿ ಚಾರ್ಜ್‌ಶೀಟ್‌ ಹಾಕುವುದಾಗಿ ಸಿಬಿಐ ಪಟ್ಟು ಹಿಡಿದಿದೆ.

ಇತ್ತ ಡಿಸಿಎಂ ವಿರುದ್ಧ ಕಲೆ ಹಾಕಿರುವ ದಾಖಲೆ ನೀಡು ವಂತೆ ಲೋಕಾಯುಕ್ತ ಪೊಲೀಸರು ಸಿಬಿಐ ಬಳಿ ಕೇಳಿದರೂ ಸಿಬಿಐ ಇದುವರೆಗೆ ಯಾವುದೇ ಮಾಹಿತಿ ಒದಗಿಸಿಲ್ಲ. ಹೀಗಾಗಿ ಸಿಬಿಐ ಕಲೆ ಹಾಕಿರುವ ಸಾಕ್ಷ್ಯ ನೀಡಲು ಸೂಚಿಸುವಂತೆ ಲೋಕಾ ತನಿಖಾಧಿಕಾರಿಗಳು ಕೋರ್ಟ್‌ ಮೊರೆ ಹೋಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಲು ತಡೆ ತಂದಿಲ್ಲ.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.