Mangaluru ಮಗು ಅದಲು ಬದಲು ಆರೋಪ; ಸಿಒಡಿ ತನಿಖೆಗೆ ಪೋಷಕರ ಆಗ್ರಹ
Team Udayavani, Aug 23, 2024, 12:42 AM IST
ಮಂಗಳೂರು: ನನ್ನ ಪತ್ನಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಮೂರು ದಿನ ಕಳೆದ ಬಳಿಕ ಮಗುವಿಗೆ ಕಣ್ಣಿಲ್ಲ ಎಂದು ವೈದ್ಯರು ಹೇಳಿದ್ದು, ನಮಗೆ ಆಘಾತವಾಗಿದೆ. ಈ ಬಗ್ಗೆ ವೈದ್ಯರು, ಮೇಲಧಿಕಾರಿಗಳು ಸೂಕ್ತ ಕಾರಣ ನೀಡದೆ ನುಣುಚಿಕೊಳ್ಳುತ್ತಿದ್ದು, ಇದರಿಂದ ನಮ್ಮ ಮಗು ಅದಲು ಬದಲಾಗಿದೆ ಸಹಿತ ಹಲವು ಸಂಶಯಗಳು ಮೂಡಿವೆ. ಈ ಪ್ರಕರಣವನ್ನು ಸಿಒಡಿ ತನಿಖೆಗೆ ಒಳಪಡಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ನಾಗರಾಜ್ ಅವರು ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ್, ಲೇಡಿ ಗೋಷನ್ ಆಸ್ಪತ್ರೆ ವೈದ್ಯರಲ್ಲಿ ವೈದ್ಯ ಕೀಯ ವರದಿ ಕೇಳಿದಾಗ ಕೊಡುತ್ತಿಲ್ಲ. ನಮ್ಮ ಜೀವಕ್ಕೆ ತೊಂದರೆ ಆಗುವ ಭಯ ಕಾಡುತ್ತಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ತುಳುನಾಡ ರಕ್ಷಣ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಮಾತನಾಡಿ, ಈ ಪ್ರಕರಣದ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖ ಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಜತೆ ಮಾತುಕತೆ ನಡೆಸಲಾಗಿದ್ದು, ಉನ್ನತ ಮಟ್ಟದ ತನಿಖೆ ಭರವಸೆ ನೀಡಿದ್ದಾರೆ. ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು. ವಿಳಂಬ ವಾದರೆ ತುಳುನಾಡ ರಕ್ಷಣ ವೇದಿಕೆ ನೇತೃತ್ವದಲ್ಲಿ ಧರಣಿ ನಡೆಸುವುದಾಗಿ ತಿಳಿಸಿದರು. ಮಗುವಿನ ತಾಯಿಯ ಗೆಳತಿ ನಿಶ್ಮಿತಾ, ಮಗುವಿನ ಮಾವ ಸಂತೋಷ್, ತುಳುನಾಡ ರಕ್ಷಣ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.