MGM ಕಾಲೇಜಿನಲ್ಲಿ ಎಐ ರಾಷ್ಟ್ರೀಯ ಸಮ್ಮೇಳನ: ಎಐ ಬಳಕೆ ಅನಿವಾರ್ಯ: ಡಾ| ಪಿ. ಗಿರಿಧರ ಕಿಣಿ


Team Udayavani, Aug 23, 2024, 12:44 AM IST

MGM ಕಾಲೇಜಿನಲ್ಲಿ ಎಐ ರಾಷ್ಟ್ರೀಯ ಸಮ್ಮೇಳನ: ಎಐ ಬಳಕೆ ಅನಿವಾರ್ಯ: ಡಾ| ಪಿ. ಗಿರಿಧರ ಕಿಣಿ

ಉಡುಪಿ: ಪ್ರಸ್ತುತ ಸ್ವಾಭಾವಿಕ ಬುದ್ಧಿಯನ್ನು ಕೃತಕ ಬುದ್ಧಿಮತ್ತೆ ಮೀರಿಸುವಂತಿದೆ. ಈ ಸವಾಲಿನ ನಡುವೆಯೂ ಹವಾಮಾನ ಬದಲಾಣೆ ಹಾಗೂ ಆರೋಗ್ಯ ಕ್ಷೇತ್ರದ ಹಲವು ಸಮಸ್ಯೆಗಳಿಗೆ ಕೃತಕ ಬುದ್ಧಿಮತ್ತೆ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಆದರೂ ಎಐ ಅನುಷ್ಠಾನ ಮತ್ತು ಉಪಯೋಗದಲ್ಲಿ ಎಚ್ಚರವೂ ಅಗತ್ಯ ಎಂದು ಮಾಹೆ ಕುಲಸಚಿವ ಡಾ| ಪಿ. ಗಿರಿಧರ ಕಿಣಿ ಹೇಳಿದರು.

ಎಂಜಿಎಂ ಕಾಲೇಜಿನ ಕಂಪ್ಯೂಟರ್‌ ಸೈನ್ಸ್‌ ವಿಭಾಗದಿಂದ ಐಕ್ಯೂಎಸಿ ಸಹಯೋಗದಲ್ಲಿ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ “ಆರ್ಟಿಫಿಶಿಯಲ್‌ ಇಂಟೆಲಿಜೆನ್ಸಿ : ಫ‌Åಮ್‌ ಥಿಯರಿ ಟು ಇಂಪ್ಯಾಕ್ಟ್’ ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೃತಕ ಬುದ್ಧಿಮತ್ತೆ ಪ್ರಸ್ತುತ ನಮ್ಮ ಜೀವನದ ಅವಿಭಾಜ್ಯ ಅಂಗದಂತಾಗಿದೆ. ಜಾಗತಿಕವಾಗಿ ಎದ್ದಿರುವ ಹಲವು ಸವಾಲುಗಳಿಗೆ ಇದರ ಮೂಲಕ ಉತ್ತರ ಕಂಡುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಎಐ/ಎಂಎಲ್‌ ತಜ್ಞ ಜಯರಾಮ್‌ ಬಿ.ಕೆ. ಅವರು ಎಐ ಅಪ್ಲಿಕೇಶನ್‌ ವಿಕಾಸದ ಬಗ್ಗೆ ಮಾಹಿತಿ ನೀಡಿ, ಎಐಯ ಪ್ರಸ್ತುತತೆ, ಬಳಸಲು ಇರುವ ಸವಾಲು ಹಾಗೂ ಎಚ್ಚರಿಕೆ ಸಹಿತ ಅನೇಕ ಅಂಶಗಳನ್ನು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ಮಂಜಯ್ಯಡಿ.ಎಚ್‌., ಎಜಿಇ ಕಾರ್ಯದರ್ಶಿ ಬಿ.ಪಿ. ವರದರಾಯ ಪೈ, ಟಿ.ಮೋಹನ್‌ದಾಸ್‌ ಪೈ ಕೌಶಲಾಭಿವೃದ್ಧಿ ಕೇಂದ್ರ ನಿರ್ದೇಶಕ ಟಿ. ರಂಗ ಪೈ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಪಿಯು ಕಾಲೇಜಿನ ಪ್ರಾಂಶುಪಾಲೆ ಪ್ರೊ| ಮಾಲತಿ ದೇವಿ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ ಎಸ್‌. ನಾಯ್ಕ, ಐಕ್ಯೂಎಸಿ ಸಂಯೋಜಕಿ ಪ್ರೊ| ಶೈಲಜಾ ಎಚ್‌., ಸಹಾಯಕ ಪ್ರಾಧ್ಯಾಪಿಕೆ ಡಾ| ಜ್ಯೋತಿ ಅಲ್ಫಾನ್ಸೋ ಉಪಸ್ಥಿತರಿದ್ದರು.

ಕಂಪ್ಯೂಟರ್‌ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ ಪೈ ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರಾಧ್ಯಾಪಿಕೆ ಸುಷ್ಮಾ ಬಂಗೇರ ಯು. ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ರೇಖಾ ಎನ್‌. ಚಂದ್ರ ನಿರೂಪಿಸಿ, ಕಾರ್ಯಕ್ರಮದ ಸಂಯೋಜಕಿ ಹಾಗೂ ಪ್ರಾಧ್ಯಾಪಿಕೆ ಪ್ರವಿತ್ರಾ ಕೆ. ವಂದಿಸಿದರು.

ಶುಕ್ರವಾರ ಸಮಾರೋಪ
ಅಮೆರಿಕ, ಯು.ಕೆ., ಆಸ್ಟ್ರೇಲಿಯಾ, ಸಿಂಗಾಪುರ, ಯುಎಸ್‌ಎ, ಒಮನ್‌, ಕಾಂಬೋಡಿಯಾ, ಕೆನಡಾ ಸಹಿತ ವಿದೇಶಗಳಿಂದ ಹಾಗೂ ಕರ್ನಾಟಕ, ಮಹಾರಾಷ್ಟ್ರ, ಗೋವಾ, ತಮಿಳನಾಡು, ಮಧ್ಯಪ್ರದೇಶ, ಒಡಿಶಾ, ಗುಜರಾತ್‌, ಪಂಜಾಬ್‌, ಅಸ್ಸಾಂ ಮೊದಲಾದ ರಾಜ್ಯದ ಪ್ರತಿನಿಧಿಗಳು ಆನ್‌ಲೈನ್‌ ಹಾಗೂ ಆಫ್ಲೈನ್‌ನಲ್ಲಿ ಭಾಗವಹಿಸಿದ್ದಾರೆ. 40ಕ್ಕೂ ಅಧಿಕ ಸಂಶೋಧನ ಪ್ರಬಂಧ ಮಂಡನೆಯಾಗಲಿದ್ದು, ಇದರಲ್ಲಿ 20 ಪ್ರಬಂಧಗಳನ್ನು ವಿದ್ಯಾರ್ಥಿಗಳು ಮಂಡಿಸಲಿದ್ದಾರೆ. ಆ.23ರ ಮಧ್ಯಾಹ್ನ 2.30ರಿಂದ ಸಮಾರೋಪ ನಡೆಯಲಿದೆ. ಮಾಹೆ ಇಂಟರ್‌ನ್ಯಾಶನಲ್‌ ರಿಲೇಶನ್‌ ನಿರ್ದೇಶಕ ಡಾ| ಕರುಣಾಕರ ಕೊಟೆಗಾರ್‌ ಎ. ಮುಖ್ಯ ಅತಿಥಿಯಾಗಿರುವರು.

ವಿವಿಧ ಗೋಷ್ಠಿಗಳು
ಎಐ ಫಾರ್‌ ವೈರ್‌ಲೆಸ್‌, ದಿ ಫ್ಯೂಚರ್‌ ಆಪ್‌ ಕ್ರಿಯೇಟಿವಿಟಿ ವಿಷಯ ಮಂಡನೆ ನಡೆದಿದೆ. ಆ.23ರಂದು ಪ್ರಬಂಧ ಮಂಡನೆ, ಜನರೇಟಿವ್‌ ಎಐ ವಿಷಯದಲ್ಲಿ ಗೋಷ್ಠಿ ನಡೆಯಲಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.