Kolkata: ಹತ್ಯೆಯ ಹಿಂದಿನ ದಿನ ವೈದ್ಯೆಯನ್ನೇ ದುರುಗುಟ್ಟಿ ನೋಡುತಿದ್ದ ಆರೋಪಿ… ದೃಶ್ಯ ಸೆರೆ
Team Udayavani, Aug 23, 2024, 10:14 AM IST
ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು ಇದೀಗ ಸಿಬಿಐ ಪ್ರಕರಣದ ತನಿಖೆಯನ್ನೂ ನಡೆಸುತ್ತಿದೆ. ಈ ವಿಚಾರದಲ್ಲಿ ದಿನಕ್ಕೊಂದು ಅಚ್ಚರಿಯ ಸಂಗತಿಗಳು ಹೊರಬೀಳುತ್ತಿವೆ.
ಈ ನಡುವೆ ತನಿಖಾ ಸಂಸ್ಥೆಗೆ ಹೊಸ ಸಿಸಿಟಿವಿ ದೃಶ್ಯಾವಳಿಯೊಂದು ಸಿಕ್ಕಿದ್ದು ಇದರಲ್ಲಿ ಆರೋಪಿ ಸಂಜಯ್ ರಾಯ್ ಕುರಿತ ಭಯಾನಕ ಮಾಹಿತಿಯೊಂದು ಲಭ್ಯವಾಗಿದೆ ಮಾಹಿತಿಯ ಪ್ರಕಾರ, ಆರೋಪಿ ಸಂಜಯ್ ಅತ್ಯಾಚಾರ ಮತ್ತು ಕೊಲೆಗೆ ಒಂದು ದಿನ ಮೊದಲು ವೈದ್ಯೆಯ ಬಳಿಯೇ ಇದ್ದ ಅಲ್ಲದೆ ಆಕೆಯನ್ನು ದಿಟ್ಟಿಸಿಕೊಂಡು ನೋಡುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೃಶ್ಯದಲ್ಲೇನಿದೆ…
ತನಿಖಾ ಸಂಸ್ಥೆ ಮಾಹಿತಿಯಂತೆ ಕೃತ್ಯ ನಡೆಯುವ ಒಂದು ದಿನದ ಮೊದಲು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಸಂಜಯ್ ವಾರ್ಡ್ ನಲ್ಲೆ ಇದ್ದ ಎನ್ನಲಾಗಿದ್ದು ಅದೇ ಸಮಯದಲ್ಲಿ ಟ್ರೈನಿ ವೈದ್ಯೆ ಸೇರಿದಂತೆ ಇತರ ನಾಲ್ವರು ಕಿರಿಯ ವೈದ್ಯರು ಸಹ ಅಲ್ಲಿದ್ದರು ಎಂದು ಸಿಸಿಟಿವಿ ದೃಶ್ಯಾವಳಿಗಳು ಖಚಿತಪಡಿಸಿದೆ. ಅಲ್ಲದೆ ಸಂಜಯ್ ಟ್ರೈನಿ ವೈದ್ಯೆಯನ್ನೇ ದಿಟ್ಟಿಸಿಕೊಂಡು ನೋಡುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ತನಿಖಾ ಅಧಿಕಾರಿಗಳು ನಾಲ್ವರು ಕಿರಿಯ ವೈದ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ, ಅಲ್ಲದೆ ಸಂತ್ರಸ್ತೆ ಆಗಸ್ಟ್ 9 ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸೆಮಿನಾರ್ ಹಾಲ್ಗೆ ಹೋಗಿದ್ದರು ಎಂಬುದಕ್ಕೆ ಪುರಾವೆಗಳಿವೆ. 2:30 ಕ್ಕೆ ವೈದ್ಯೆಯ ಜೊತೆ ಕೊನೆಯ ಬಾರಿ ಸಂಭಾಷಣೆ ನಡೆಸಿದ್ದು ಇದಾದ ಬಳಿಕ ಸಂತ್ರಸ್ತ ವೈದ್ಯೆ ರೆಸ್ಟ್ ರೂಂ ಗೆ ತೆರಳಿದ್ದಾಗಿ ಹೇಳಲಾಗಿದೆ.
ಇತ್ತ ಸಿಸಿಟಿವಿ ದೃಶ್ಯಾವಳಿಯ ಪ್ರಕಾರ ಆರೋಪಿ ಸಂಜಯ್ ರಾಯ್ ಮುಂಜಾನೆ 4 ಗಂಟೆಗೆ ಆಸ್ಪತ್ರೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಈ ಸಮಯದಲ್ಲಿ ಅಪರಾಧ ಎಸಗಿರಬಹುದು ಎಂದು ಹೇಳಲಾಗಿದೆ.
ಪಶ್ಚಾತಾಪವೇ ಇಲ್ಲದಂತಿದ್ದ ಆರೋಪಿ:
ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿದ್ದರೂ ಆರೋಪಿ ಸಂಜಯ್ ಗೆ ಇದು ಯಾವುದರ ಪಶ್ಚಾತಾಪವೇ ಇಲ್ಲದಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ತಾನು ತಪ್ಪು ಎಸಗಿದ್ದರೂ ಅದರ ಪರಿವೇ ಇಲ್ಲದಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ: Tripura Floods: ಮೃತರ ಸಂಖ್ಯೆ 20ಕ್ಕೆ ಏರಿಕೆ… 450 ಪರಿಹಾರ ಶಿಬಿರಗಳಲ್ಲಿ 65,400 ಮಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.