Hubli; ರಾಜ್ಯ ಸರ್ಕಾರದಿಂದ ಬ್ಲ್ಯಾಕ್‌ ಮೇಲ್‌ ತಂತ್ರ: ಪ್ರಲ್ಹಾದ ಜೋಶಿ


Team Udayavani, Aug 23, 2024, 1:17 PM IST

Hubli; ರಾಜ್ಯ ಸರ್ಕಾರದಿಂದ ಬ್ಲ್ಯಾಕ್‌ ಮೇಲ್‌ ತಂತ್ರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಮನೋಭಾವ ಕಾಂಗ್ರೆಸ್‌ನದ್ದಾಗಿದೆ ಎಂದು ಹರಿಹಾಯ್ದರು.

ಕುಮಾರಸ್ವಾಮಿ ವಿರುದ್ಧ ಗಣಿ ಪರವಾನಿಗೆ ಪ್ರಕರಣ 2008ರದ್ದು. 2013ರಿಂದ 18ರ ವರೆಗೆ ಹಾಗೂ ಈಗ ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಆಗ ಕುಮಾರಸ್ವಾಮಿ ವಿರುದ್ಧ ಏಕೆ ತನಿಖೆ ಮಾಡಲಿಲ್ಲ. 2018-19 ರಲ್ಲಿ ಕುಮಾರಸ್ವಾಮಿ ಜೊತೆ ಕೈಜೋಡಿಸಿ ಮೈತ್ರಿ ಸರ್ಕಾರ ಮಾಡಿದ್ದರು. ಆಗ ಸುಮ್ಮನೆ ಇದ್ದಿದ್ದು ಯಾಕೆ? ತಮಗೆ ಬೇಕಾದಾಗ ಏನೇ ಆದರೂ ಸರಿ, ಬೇಡವಾದಾಗ ತಪ್ಪು ಎಂಬುದು ಯಾವ ನೀತಿ ಎಂದು ಪ್ರಶ್ನಿಸಿದರು.

ಸಾವಿರಾರು ಸೈಟ್ ಮತ್ತು ಸಾವಿರಾರು ಕೋಟಿ ಅವ್ಯವಹಾರ ಮುಡಾ ಪ್ರಕರಣದಲ್ಲಿ ನಡೆದಿದೆ. ಅದನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ರಾಜ್ಯಪಾಲರ ಆದೇಶ ಪಾಲನೆ ಮಾಡುತ್ತಿಲ್ಲ. ನ್ಯಾಯಾಂಗ ತನಿಖೆ ಹಲ್ಲು ಕಿತ್ತ ಹಾವು. ಅದರ ವರದಿ ಸರ್ಕಾರ ಒಪ್ಪಬಹುದು ಬಿಡಬಹುದು. ಅವರದ್ದೆ ಕೆಂಪಣ್ಣ ಆಯೋಗ ನೀಡಿರುವ ವರದಿ ಈಗ ಎಲ್ಲಿದೆ. ಸಿದ್ದರಾಮಯ್ಯನವರೇ ನಿಮ್ಮ ಶ್ರೀಮತಿ ಅವರ ಕೈಯಿಂದ ನೀವು ಬರೆಸಿದ್ದ ಪತ್ರಕ್ಕೆ ವೈಟನರ್ ಹಚ್ಚಿದರವರು ಯಾರು? ಅದನ್ನು ಮೊದಲು ಹೇಳಿ ಎಂದು ಆಗ್ರಹಿಸಿದರು.

ಸಿಎಂ ಬಿಜೆಪಿಯ ಯಾವುದೇ ಭ್ರಷ್ಟಾಚಾರವನ್ನಾದರು ತನಿಖೆ ಮಾಡಲಿ. ಅವರು ಜಾತಿ ನೆರಳಿನಲ್ಲಿದ್ದಾರೆ. ಆದರೆ ರಾಜ್ಯಪಾಲರ ಜಾತಿ ಬಗ್ಗೆ ಮಾತನಾಡಿದರೆ ಮರುಪ್ರಶ್ನೆ ಮಾಡುತ್ತಾರೆ. ಅಂಬೇಡ್ಕರರಿಗೆ ಅಪಮಾನ ಮಾಡಿರುವ, ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಾರ್ಟಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅಂಬೇಡ್ಕರ್ ಅವರ ಸಮಾಧಿಗೆ ಜಾಗ ಕೊಡಲಿಲ್ಲ, ಅವರನ್ನು ಚುನಾವಣೆಯಲ್ಲಿ ಸೋಲಿಸದವರಿಗೆ ಪ್ರಶಸ್ತಿ ನೀಡಿದ್ದು ಕಾಂಗ್ರೆಸ್. ದೇವರಾಜ್ ಅರಸ್‌ಗೆ ಅಪಮಾನ ಮಾಡಿದವರು ಕಾಂಗ್ರೆಸ್‌ನವರು. ಸಿದ್ದರಾಮಯ್ಯ ನಿಮ್ಮ ಬೆನ್ನು ಮೊದಲು ನೋಡಿಕೊಳ್ಳಿ. ನೀವು ಇರುವ ಪಕ್ಷ ದಲಿತರಿಗೆ ಎಷ್ಟು ಅಪಮಾನ ಮಾಡಿದೆ ಅಂತ ಎಂದರು.

ಕುಮಾರಸ್ವಾಮಿ ಅವರನ್ನು ಮುಗಿಸಿರುವ ಅನುಭವ ಕಾಂಗ್ರೆಸ್‌ಗಿದೆ. ಹೀಗಾಗಿ ಅವರನ್ನು ಮುಗಿಸುವ ಮಾತುಗಳನ್ನಾಡುತ್ತಿದ್ದಾರೆ ಎಂದು ಸಚಿವ ದಿನೇಶ ಗುಂಡೂರಾವ್ ಅವರು ಕುಮಾರಸ್ವಾಮಿ ಮುಗಿಸಲು ಬಿಜೆಪಿ ಹೊರಟಿದೆ ಎಂಬ ಹೇಳಿಕೆಗೆ ಟಾಂಗ್ ಕೊಟ್ಟರು.

ನಾವ್ಯಾಕೆ ಕುಮಾರಸ್ವಾಮಿ ಅವರನ್ನು ಮುಗಿಸೋಣ. ಈ ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಧಿಕಾರದಿಂದ ಕೆಳಗಿಳಿಸಿದ್ದು ಕಾಂಗ್ರೆಸ್.‌ ಹೀಗಾಗಿ ಅವರನ್ನು ಮತ್ತು ಜೆಡಿಎಸ್ ಮುಗಿಸುವ ಮಾತುಗಳನ್ನಾಡುತ್ತಿದ್ದಾರೆ. ನಿಮಗೆ ಬೇಕಾದಾಗ ಒಂದು ರೀತಿ ಮಾತಾಡುತ್ತೀರಿ. ಬೇಡವಾದಾಗ ಮತ್ತೊಂದು ರೀತಿ ಮಾತಾಡುತ್ತೀರಿ. ಇದು ನಿಮ್ಮ ವರ್ತನೆ ಎಂದರು.

ಬಿಸಿಎಎಸ್‌ಗೆ ಅನುಮತಿ: ನಗರದ ವಿಮಾನ ನಿಲ್ದಾಣಕ್ಕೆ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಾರ್ಯಾಲಯ ಆರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯವು ಅನುಮತಿ ನೀಡಿದೆ. ಇದರಿಂದ ರಾಜ್ಯದ ವಿವಿಧ ವಿಮಾನ ನಿಲ್ದಾಣ ಭದ್ರತೆ ದೃಷ್ಟಿಯಿಂದ ಕಾರ್ಯ ನಿರ್ವಹಣೆ ಮಾಡಲಿದೆ. ಬೆಂಗಳೂರು, ಮಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ ಎಂದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.