Kundapura: ಅಮೆರಿಕದಲ್ಲಿ ಟ್ರಿಪಲ್‌ ತಲಾಕ್‌; ಅಲ್ಲಿಗೆ ಹೋಗಲು ನಿರ್ದೇಶಕನ ಕೈಲಿ ದುಡ್ಡಿಲ್ಲ!

ಯಾಕೂಬ್‌ ಖಾದರ್‌ ಗುಲ್ವಾಡಿ ಅವರ ಕಷ್ಟ ಅರಿತು ಸಹಾಯ ಮಾಡಿದ ಸಚಿವ ಜಮೀರ್‌ ಮತ್ತು ಮುಖಂಡರು

Team Udayavani, Aug 23, 2024, 2:29 PM IST

4

ಕುಂದಾಪುರ: ಅಮೆರಿಕದ ವಾಷಿಂಗ್ಟನ್‌ ಡಿಸಿಯ ರಿಚ್‌ಮಂಡ್‌ನ‌ಲ್ಲಿ ನಡೆಯುವ 12ನೇ “ಅಕ್ಕ’ ವಿಶ್ವ ಕನ್ನಡ ಸಮ್ಮೇಳನದಲ್ಲಿ (ಅಮೇರಿಕ ಕನ್ನಡ ಕೂಟಗಳ ಆಗರ) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಯಾಕೂಬ್‌ ಖಾದರ್‌ ಗುಲ್ವಾಡಿ ನಿರ್ದೇಶನದ ಸೂಕ್ಷ್ಮ ಸಂವೇದನೆಯ ಸಿನಿಮಾ ‘ಟ್ರಿಪಲ್‌ ತಲಾಖ್‌’ ಪ್ರದರ್ಶನ ಮತ್ತು ಸಂವಾದ ಇದೇ ಆ.30,31ಮತ್ತು ಸೆ.1ರಂದು ನಡೆಯಲಿದೆ.

ಆದರೆ, ಹಣ ಕಾಸಿನ ಅಡಚಣೆಯಿಂದ ನಿರ್ದೇಶಕರಿಗೆ ಸಮ್ಮೇಳನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ವಿಚಾರ ತಿಳಿದು ಸಚಿವ ಜಮೀರ್‌ ಅಹಮದ್‌ ಸೇರಿ ಹಲವರು ನೆರವು ನೀಡಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದಾರೆ. ಅಕ್ಕ ಸಮಿತಿ ಸಿನೆಮಾ ಪ್ರದರ್ಶನಕ್ಕೆ ಅನುಮತಿ ನೀಡಿದರೂ ನಿರ್ದೇಶಕ ಗುಲ್ವಾಡಿ ಅವರಿಗೆ ಹಣಕಾಸಿನ ಅಡಚಣೆಯಿಂದ ಅಲ್ಲಿಗೆ ಹೋಗಲು ಸಾಧ್ಯವಾಗದ ಸ್ಥಿತಿ ಇದೆ. ಯಾಕೆಂದರೆ ಅವರು ಈಗಲೂ ಗುಜರಿ ಅಂಗಡಿ ವ್ಯಾಪಾರ ಮಾಡುತ್ತಿದ್ದಾರೆ.

ಈ ವಿಚಾರ ಗೊತ್ತಾಗಿ ರಾಜ್ಯ ಅಲ್ಪಸಂಖ್ಯಾಕರ ಆಯೋಗದ ಮಾಜಿ ಅಧ್ಯಕ್ಷ ಜಿ.ಎ.ಬಾವ, ಕರ್ನಾಟಕ ವಕ್ಫ್ ಮಂಡಳಿ ಸದಸ್ಯ ಯಾಕೂಬ್‌ ಯೂಸುಫ್‌, ಮಾಜಿ ಅಧ್ಯಕ್ಷ ಮೌಲಾನ ಶಾಫಿ ಸಹದಿ ಉಸ್ತಾದ್‌ ಅವರು ಕರ್ನಾಟಕ ಸರಕಾರದ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝಡ್‌. ಜಮೀರ್‌ ಅಹಮದ್‌ ಖಾನ್‌ ಅವರಿಗೆ ಮನವಿ ಮಾಡಿದರು. ಅವರು ಸ್ಪಂದಿಸಿ ಯಾಕುಬ್‌ ಅವರ ಅಮೆರಿಕ ಕಾರ್ಯಕ್ರಮದ ಖರ್ಚು ವೆಚ್ಚಗಳನ್ನು ಸ್ವತಃ ಭರಿಸಿದರು.

ಈ ಹಿಂದೆಯೂ ಪ್ರದರ್ಶನ
2018ರಲ್ಲಿ ಅಮೇರಿಕಾದ ಡಲ್ಲಾಸ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಕೂಡ ಇವರ ನಿರ್ಮಾಣದ ರಾಷ್ಟ್ರ ಪ್ರಶಸ್ತಿ ಪಡೆದ ‘ರಿಸರ್ವೇಶನ್‌’ ಸಿನಿಮಾದ ಪ್ರದರ್ಶನ ನಡೆದಿತ್ತು. 2016ರಲ್ಲಿ ನ್ಯೂಯಾರ್ಕ್‌ ನ್ಯೂಜೆರ್ಸಿಯಲ್ಲಿ, 2014ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿ ನಡೆದ ಸಮ್ಮೇಳನದ ಬಹುಭಾಷ ಕವಿಗೋಷ್ಟಿಯ ಭಾಗವಹಿಸುವ ಮೂಲಕ ಸತತ ನಾಲ್ಕು ಸಮ್ಮೇಳನಗಳಲ್ಲಿ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.

ಹಣಕಾಸಿನ ಅಡಚಣೆ
ನನ್ನ ಸಾಧನೆಯ ಹಿಂದೆ ಹಲವು ಗೆಳೆಯರ ಸಹಕಾರವಿದೆ. ಈ ಬಾರಿಯ ಅಕ್ಕ ಸಮ್ಮೇಳನದಲ್ಲಿ ನನ್ನ ಸಿನಿಮಾ ಪ್ರದರ್ಶನಕ್ಕೆ ಸಮಿತಿ ಅವಕಾಶ ಮಾಡಿಕೊಟ್ಟರೂ ಹಣಕಾಸಿನ ಕಾರಣದಿಂದ ಭಾಗವಹಿಸುವ ಸ್ಥಿತಿಯಲ್ಲಿ ಇರಲಿಲ್ಲ. ಸಚಿವ ಜಮೀರ್‌ ಖಾನ್‌ ಅವರ ನೆರವಿನಿಂದ ಅಮೆರಿಕ ಕಾರ್ಯಕ್ರಮದ ಖರ್ಚು ವೆಚ್ಚಗಳನ್ನು ಭರಿಸುವಂತಾಗಿದೆ. ಸಾಮಾನ್ಯ ಕಲಾವಿದನಾದ ನನ್ನ ಸಹಾಯಕ್ಕೆ ಬಂದ ಸಚಿವರಿಗೆ ಧನ್ಯವಾದಗಳು.
-ಯಾಕೂಬ್‌ ಖಾದರ್‌ ಗುಲ್ವಾಡಿ

ರಿಸರ್ವೇಷನ್‌ಗೆ ಚಿತ್ರಕ್ಕೆ ರಜತ ಕಮಲ ಪ್ರಶಸ್ತಿ ಬಂದಿತ್ತು
2006ರಲ್ಲಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರಗಳ ಮೂಲಕ ಸಿನಿಮಾ ರಂಗ ಪ್ರವೇಶಿಸಿದ ಯಾಕೂಬ್‌ ಖಾದರ್‌ ಗುಲ್ವಾಡಿ ಕನ್ನಡದ ನಿರ್ದೇಶಕ ಡಾ| ಗಿರೀಶ ಕಾಸರವಳ್ಳಿಯವರ “ಗುಲಾಬಿ ಟಾಕೀಸ್‌’ ನಿರ್ದೇಶಕ ನಿಖೀಲ್‌ ಮಂಜು ಲಿಂಗೇಗೌಡ ಅವರ ‘ಹಜ್‌ ಮತ್ತು ಗೆರೆಗಳು’ ಡಾ| ನಾಗತಿಹಳ್ಳಿ ಚಂದ್ರಶೇಖರ ಅವರ “ಇಷ್ಟಕಾಮ್ಯ’ ಮತ್ತು ‘ಇಂಡಿಯ ವರ್ಸಸ್‌ ಇಂಗ್ಲೆಂಡ್‌’ ಸಿನೆಮಾಗಳಿಗೆ ವಸ್ತ್ರ ವಿನ್ಯಾಸ, ಕಲಾ ನಿರ್ದೇಶನ, ನಟನೆಯ ಮೂಲಕ ಕೆಲಸ ಮಾಡಿದ್ದರು. 2016 ರಲ್ಲಿ ತನ್ನದೆ ‘ಗುಲ್ವಾಡಿ ಟಾಕೀಸ್‌’ ಸಂಸ್ಥೆಯ ಮೂಲಕ ಮೊದಲ ಬಾರಿಗೆ ಕುಂದಾಪ್ರ ಕನ್ನಡದಲ್ಲಿ ‘ರಿಸರ್ವೇಶನ್‌’ ಎಂಬ ಸಿನಿಮಾ ಮಾಡಿದ್ದು ರಾಷ್ಟ್ರ ಪ್ರಶಸ್ತಿ (ರಜತ ಕಮಲ) ಪಡೆದಿದ್ದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.