Video: 25 ಕೆಜಿ ಚಿನ್ನ ಧರಿಸಿ ತಿಮ್ಮಪ್ಪನ ದರ್ಶನ ಪಡೆಯಲು ಬಂದ ಕುಟುಂಬ, ನೋಡಿ ದಂಗಾದ ಭಕ್ತರು
Team Udayavani, Aug 23, 2024, 1:55 PM IST
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ ಇಲ್ಲೊಂದು ಕುಟುಂಬ ಒಂದಲ್ಲ ಎರಡಲ್ಲ ಬರೋಬ್ಬರಿ ಇಪ್ಪತೈದು ಕೆಜಿ ಚಿನ್ನಾಭರಣ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಬಂದಿದ್ದಾರೆ, ಇವರನ್ನು ಕಂಡು ಅಲ್ಲಿದ್ದ ಭಕ್ತರೂ ಒಮ್ಮೆ ದಂಗಾಗಿದ್ದಾರೆ.
ಹೌದು
ತಿರುಪತಿ ತಿಮ್ಮಪ್ಪ ದೇವಸ್ಥಾನ ಅತೀ ಹೆಚ್ಚು ಭಕ್ತರನ್ನು ಹೊಂದಿರುವ ದೇವಸ್ಥಾನ ಇಲ್ಲಿನ ದೇವಸ್ಥಾನಕ್ಕೆ ದೇಶದ ನಾನಾ ಭಾಗದಿಂದ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿ ತಮ್ಮ ಇಷ್ಟಾರ್ಥ ಸೇವೆಗಳನ್ನು ನೀಡಿ ಧನ್ಯರಾಗುತ್ತಾರೆ. ಅಲ್ಲದೆ ಇನ್ನೂ ಕೆಲ ಭಕ್ತರು ಹರಕೆ ರೂಪದಲ್ಲಿ ಚಿನ್ನ, ಬೆಳ್ಳಿ, ವಜ್ರ ಹೀಗೆ ತಮ್ಮ ತಮ್ಮ ಅನುಕೂಲಕ್ಕೆ ತಕ್ಕಂತೆ ಹರಕೆಗಳನ್ನು ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲೊಂದು ಪುಣೆ ಮೂಲದ ಕುಟುಂಬವೊಂದು ತಮ್ಮ ಕೊರಳಿಗೆ ಸುಮಾರು ಇಪ್ಪತೈದು ಕೆಜಿ ತೂಕದ ಚಿನ್ನದ ಆಭರಣಗಳನ್ನು ಧರಿಸಿಕೊಂಡು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಇದೆ ಆಗಸ್ಟ್ 22 ರಂದು ಬಂದಿದ್ದು ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಒಂದು ಮಗು ಸೇರಿ ನಾಲ್ವರಿದ್ದ ಸದಸ್ಯರಲ್ಲಿ ಇಬ್ಬರು ಪುರುಷರ ಕೊರಳಿನಲ್ಲಿ ಕೆಜಿಗಟ್ಟಲೆ ಚಿನ್ನದ ಆಭರಣ ಕಂಡುಬಂದಿದೆ, ಅಲ್ಲದೆ ಮಹಿಳೆಯೂ ಚಿನ್ನದ ಬಣ್ಣದ ಸೀರೆ ಉಟ್ಟಿದ್ದು ಇದೂ ಕೂಡಾ ಚಿನ್ನದ ಲೇಪನದಿಂದ ಕೂಡಿದುದಾಗಿದೆ ಎಂದು ಹೇಳಲಾಗಿದೆ.
ವಿಡಿಯೋ ವೈರಲ್:
ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಬಂದ ಕುಟುಂಬವನ್ನು ಕಂಡು ಅಲ್ಲಿದ್ದ ಇತರ ಭಕ್ತರು ದಂಗಾಗಿದ್ದಾರೆ, ಅಲ್ಲದೆ ಇಬ್ಬರು ಪುರುಷರು ಕೊರಳಿನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಧರಿಸಿರುವುದನ್ನು ಅಲ್ಲಿಯ ಭಕ್ತರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ,
VIDEO | Andhra Pradesh: Devotees from Pune wearing 25 kg of gold visited Tirumala’s Venkateswara Temple earlier today.
(Full video available on PTI Videos – https://t.co/n147TvqRQz) pic.twitter.com/k38FCr30zE
— Press Trust of India (@PTI_News) August 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.