Shimoga; ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು


Team Udayavani, Aug 23, 2024, 2:43 PM IST

ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.

ಜಿಲ್ಲೆಯ ಸಾ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ, ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ.

ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ. ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ತುಂಡಾದ ಕೈ ಮರು ಜೋಡಣೆ, ಹೇಗೆ ಸಾಧ್ಯ?

ಅಪಘಾತ ಅಥವಾ ದುರಂತದಲ್ಲಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ಷಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕ್ರಮ ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡು ಕೊಳ್ಳಬಹುದು. ಅವಘಡ ಸಂಭವಿಸಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೆ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ  ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾದ್ಯವಿದೆ.

ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ. ಘಟನೆ ನಡೆದಾಗ ಭಯಭೀತರಾಗಿ ತುಂಡಾದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ. ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ. ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.