Lingsugur; ತಾಯಿ, ಹೆಂಡತಿಯನ್ನು ಕೊಂದು ಆರೋಪಿ ಪರಾರಿ
Team Udayavani, Aug 23, 2024, 3:28 PM IST
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ತಾಯಿ ಹಾಗೂ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.
ದ್ಯಾಮಮ್ಮ (66) ಹಾಗೂ ಜ್ಯೋತಿ (23) ಕೊಲೆಯಾದವರು. ಕೊಲೆಗೈದ ಆರೋಪಿ ದುರಗಪ್ಪ ಎನ್ನಲಾಗಿದೆ.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾಗಿದ್ದ ದುರಗಪ್ಪ ಕುಟುಂಬದೊಂದಿಗೆ ಆಸ್ಪತ್ರೆಯ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದು, ನಿತ್ಯ ಕಲಹ ನಡೆಯುತ್ತಿತ್ತು. ಆರೋಪಿಯು ಮದ್ಯ ಸೇವಿಸಿ ತಾಯಿ ಹಾಗೂ ಹೆಂಡತಿಗೆ ಮನಸೋ ಇಚ್ಛೆ ಥಳಿಸುತ್ತಿದ್ದ. ಅದೇ ರೀತಿ ಜಗಳ ನಡೆದಾಗ ಹಲ್ಲೆ ಮಾಡಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ದುರಗಪ್ಪ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗೆ ಶೋಧ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ
Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.