ಕುಳಗೇರಿ ಕ್ರಾಸ್: ಕಾಲುವೆ ನೆಲಸಮ ಮಾಡಿ ನಿವೇಶನ ನಿರ್ಮಾಣ
Team Udayavani, Aug 23, 2024, 5:51 PM IST
ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್: ನೀರಾವರಿ ಉದ್ಧೇಶಕ್ಕಾಗಿ ಸುಮಾರು 40 ವರ್ಷಗಳ ಹಿಂದೆ ರೈತರ ಅನುಕೂಲ ಕ್ಕಾಗಿ ನಿರ್ಮಿಸಲಾದ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆ ನೆಲಸಮ ಮಾಡಿ ಭೂಸ್ವಾಧಿಧೀನ ಮಾಡಿಕೊಂಡು ನಿವೇಶನ ನಿರ್ಮಿಸಿದ್ದಾರೆ. ಕಾಲುವೆ ಮುಚ್ಚಿ ಕಟ್ಟಡ ನಿರ್ಮಿಸುತ್ತಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.
ಮಲಪ್ರಭಾ ಎಡದಂಡೆ 39ರ ಹಂಚು ಕಾಲುವೆ ಮುಚ್ಚಲಾಗಿದೆ. ಕಾಲುವೆ ದಿಕ್ಕು ಬದಲಿಸಿ ಕೆಲವರು ವೇಶನ ನಿರ್ಮಿಸಿದ್ದಾರೆ. 30 ಅಡಿ ರಸ್ತೆ ಸಮೇತ ಇದ್ದ ಮುಖ್ಯ ಕಾಲುವೆ ಮುಚ್ಚಿ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುವಂತೆ ಮಾಡಿದ್ದರಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ಹರಸಾಹಸ ಪಡುತ್ತಿದ್ದಾರೆ. ಶಾಲಾ ಮಕ್ಕಳು ಎದ್ದು ಬಿದ್ದು ಸಾಗುತ್ತಿದ್ದಾರೆ.
ಗಂಭೀರ ಆರೋಪ: ಕಾಕನೂರ ನೀರಾವರಿ ವ್ಯಾಪ್ತಿಯಲ್ಲಿ ಬರುವ ಮಲಪ್ರಭಾ ಎಡದಂಡೆಯ ಹಲವಾರು ಕಾಲುವೆಗಳು ಸದ್ಯ ಮುಚ್ಚಿ ಹೋಗಿವೆ. ಸಣ್ಣಪುಟ್ಟ ಕಾಲುವೆಗಳು ಸದ್ಯ ಮುಚ್ಚಲಾಗಿದ್ದು ಹಾಗೂ ಮುಖ್ಯ ಕಾಲುವೆಗಳನ್ನು ಅಕ್ರಮವಾಗಿ
ಮುಚ್ಚಲಾಗುತ್ತಿದೆ ಎಂದು ರೈತರು ಆರೋಪ ಮಾಡಿದ್ದಾರೆ.
ಅಧಿಕಾರಿಗಳ ಆಶ್ವಾಸನೆ: ಈ ಕುರಿತು ನೀರಾವರಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ರೈತರು ಲಿಖಿತವಾಗಿ ಮನವಿ ಕೊಟ್ಟಿದ್ದಾರೆ. ನೀರಾವರಿ ಅಧಿಕಾರಿಗಳು ಮಾತ್ರ ನೆಪ ಮಾತ್ರಕ್ಕೆ ಭೇಟಿ ನೀಡುತ್ತಾರೆ. ನಾಲ್ಕೈದು ವರ್ಷಗಳಿಂದ ಜನಪ್ರತಿನಿಧಿಗಳ ಹಾಗೆ ಆಶ್ವಾಸನೆ
ಕೊಡುತ್ತ ಕಾಲ ದೂಡುತ್ತಿದ್ದಾರೆ. ಕಾಲುವೆಗಳನ್ನು ನೆಲಸಮ ಮಾಡಲಾಗಿದೆ.
ನಿವೇಶನಗಳು ನಿರ್ಮಾಣ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು, ರೈತರು ಆರೋಪಿಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದ ಕಾರಣ ರೈತರು ಕಂಗಾಲಾಗಿದ್ದಾರೆ.
■ ಮಹಾಂತಯ್ಯ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.