Davanagere: ಕಲುಷಿತ ನೀರು ಕುಡಿದು ಒಂದು ವಾರದಲ್ಲಿ 16 ಮಂದಿ ಅಸ್ವಸ್ಥ
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಘಟನೆ, ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ರವಾನೆ
Team Udayavani, Aug 23, 2024, 9:57 PM IST
ದಾವಣಗೆರೆ: ಕಲುಷಿತ ನೀರು ಕುಡಿದು ಒಂದು ವಾರದಲ್ಲಿ ಒಟ್ಟು 16 ಮಂದಿ ಅಸ್ವಸ್ಥರಾದ ಘಟನೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ವರದಿಯಾಗಿದೆ.
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಕುಡಿಯುವ ನೀರಿನ ಪೈಪ್ ಲೈನ್ ಚರಂಡಿಗಳಲ್ಲೇ ಹಾದು ಹೋಗಿದ್ದು, ಕೆಲವೆಡೆ ಚರಂಡಿ ನೀರು ಕುಡಿಯುವ ನೀರಿನ ಪೈಪ್ ನಲ್ಲಿ ಸೇರಿಕೊಂಡಿದ್ದೇ ಕಲುಷಿತ ನೀರು ಪೂರೈಕೆಗೆ ಕಾರಣ ಎನ್ನಲಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾದವರ ತಕ್ಷಣವೇ ದಾವಣಗೆರೆ, ಶಿವಮೊಗ್ಗ, ಭದ್ರಾವತಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈಗ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮುಂಜಾಗ್ರತೆಯಾಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆಯು ಕೈಗೊಂಡಿದೆ.
ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ರವಾನೆ:
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ತಾಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಸೇರಿ ವೈದ್ಯರು, ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮಕ್ಕೆ ಪೂರೈಕೆಯಾಗುತ್ತಿದ್ದ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಹುಣಸಘಟ್ಟ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಚರಂಡಿಗಳಲ್ಲೇ ಹಾದು ಹೋಗಿದ್ದು, ಅಲ್ಲಲ್ಲಿ ನಲ್ಲಿ ನೀರಿನೊಳಗೆ ಚರಂಡಿ ನೀರು ಸೇರಿಕೊಳ್ಳುತ್ತಿದೆ. ಹೀಗೆ ಕುಡಿಯುವ ನೀರಿನ ಪೈಪ್ ಲೈನ್ಗೆ ಸೇರಿದ ತ್ಯಾಜ್ಯ ನೀರು ಸೇವಿಸಿ, ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.
ಕೆಲವು ಕಡೆ ಪೈಪ್ನಲ್ಲಿ ಸೋರಿಕೆಯಾಗುತ್ತಿದ್ದು, ಮಿನಿ ವಾಟರ್ ಟ್ಯಾಂಕ್ಗೆ ಪೈಪ್ ಅಳವಡಿಸಿ, ಮನೆಗಳಿಗೆ ಗ್ರಾಮಸ್ಥರು ನೀರು ಪೂರೈಸಿಕೊಳ್ಳುತ್ತಿದ್ದು, ಕುಡಿಯುವ ನೀರು ಪೂರೈಸುವ ವೇಳೆ ಸ್ವಚ್ಛತೆಗೆ ಗಮನ ಹರಿಸುವಂತೆ ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿಗೆ ಆರೋಗ್ಯಾಧಿಕಾರಿಗಳು ಸೂಚಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.