Tulu Cinema; ಕರಾವಳಿಯಾದ್ಯಂತ “ಅನರ್‌ಕಲಿ’ ತುಳು ಸಿನೆಮಾ ತೆರೆಗೆ


Team Udayavani, Aug 24, 2024, 12:18 AM IST

Tulu Cinema; ಕರಾವಳಿಯಾದ್ಯಂತ “ಅನರ್‌ಕಲಿ’ ತುಳು ಸಿನೆಮಾ ತೆರೆಗೆ

ಮಂಗಳೂರು: ತುಳು ಸಿನೆಮಾ ರಂಗಕ್ಕೆ ಹೊಸ ರೂಪ ನೀಡುವ ನೆಲೆಯಲ್ಲಿ ಮೂಡಿಬಂದ ಲಕುಮಿ ಸಿನಿ ಕ್ರಿಯೇಷನ್‌ ಮತ್ತು ಲೋ ಬಜೆಟ್‌ ಪ್ರೊಡಕ್ಷನ್‌ ನಿರ್ಮಾಣದ ಹರ್ಷಿತ್‌ ಸೋಮೇಶ್ವರ ನಿರ್ದೇಶನದ “ಅನರ್‌ಕಲಿ’ ತುಳು ಸಿನೆಮಾ ಶುಕ್ರವಾರ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್‌, ಭಾರತ್‌ ಸಿನೆಮಾಸ್‌, ಸಿನೆಪೊಲಿಸ್‌, ಸುರತ್ಕಲ್‌ನಲ್ಲಿ ನಟರಾಜ್‌, ಸಿನೆಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಭಾರತ್‌ ಸಿನೆಮಾಸ್‌, ಉಡುಪಿಯಲ್ಲಿ ಭಾರತ್‌ ಸಿನೆಮಾಸ್‌, ಮಣಿಪಾಲದಲ್ಲಿ ಭಾರತ್‌ ಸಿನೆಮಾಸ್‌, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್‌, ಪುತ್ತೂರಿನಲ್ಲಿ ಭಾರತ್‌ ಸಿನೆಮಾಸ್‌ನಲ್ಲಿ ಬಿಡುಗಡೆಗೊಂಡಿತು.

ಮಂಗಳೂರಿನ ಭಾರತ್‌ ಸಿನೆಮಾಸ್‌ನಲ್ಲಿ ಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಅವರು, ತುಳು ಭಾಷೆಯ ಉಳಿವಿಗಾಗಿ ತುಳು ನಾಟಕ ಮತ್ತು ಸಿನೆಮಾಗಳ ಪಾತ್ರ ಹೆಚ್ಚಿನದ್ದು. ಅನರ್‌ಕಲಿ ಸಿನೆಮಾ ಚೆನ್ನಾಗಿದೆ ಎಂದು ಪ್ರೇಕ್ಷಕರು ಬೆನ್ನು ತಟ್ಟಿದಾರೆ. ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತ ಬೆಂಬಲಿಸುತ್ತಾರೆ. ಎಲ್ಲರೂ ಸಿನೆಮಾ ನೋಡಿ ಪ್ರೋತ್ಸಾಹಿಸಿ ಎಂದರು.

ಅರವಿಂದ್‌ ಬೋಳಾರ್‌ ಮಾತನಾಡಿ, ತುಳುವರು ಥಿಯೇಟರ್‌ಗೆ ಬಂದು ಸಿನೆಮಾ ನೋಡಿ ಗೆಲ್ಲಿಸಿದಲ್ಲಿ ನಿರ್ಮಾಪಕರ ಶ್ರಮ ಸಾರ್ಥಕವಾಗುತ್ತದೆ ಎಂದರು.

ಪ್ರಮುಖರಾದ ಕಿಶೋರ್‌ ಡಿ.ಶೆಟ್ಟಿ, ಪ್ರಕಾಶ್‌ ಪಾಂಡೇಶ್ವರ್‌, ನವನೀತ್‌ ಶೆಟ್ಟಿ, ಆರ್‌.ಧನರಾಜ್‌, ಭೋಜರಾಜ ವಾಮಂಜೂರು, ಚಂದ್ರಶೇಖರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಲಂಚುಲಾಲ್‌, ವಿಜಯ್‌ ಶೋಭರಾಜ್‌ ಪಾವೂರು, ಮಧುರಾ ಆರ್‌.ಜೆ., ಪುರುಷೋತ್ತಮ ಭಂಡಾರಿ ಅಡ್ಯಾರ್‌, ಪ್ರದೀಪ್‌ ಆಳ್ವ ಕದ್ರಿ, ಗಿರೀಶ್‌ ಎಂ. ಶೆಟ್ಟಿ ಕಟೀಲು, ದಿವಾಕರ ಶೆಟ್ಟಿ, ಮೋಹನ್‌ ಕೊಪ್ಪಲ, ಇಸ್ಮಾಯಿಲ್‌ ಮೂಡುಶೆಡ್ಡೆ, ತಾರಾನಾಥ್‌ ಶೆಟ್ಟಿ ಬೋಳಾರ್‌, ಬಾಳ ಜಗನ್ನಾಥ ಶೆಟ್ಟಿ ಬಾಳ, ಲೋಕಯ್ಯ ಶೆಟ್ಟಿ ಮುಂಚೂರು, ಯಶೋದಾ ಸಂಜೀವ ಕೋಟ್ಯಾನ್‌, ರಜನೀಶ್‌ ಕೋಟ್ಯಾನ್‌ ಮುಂತಾದವರು ಉಪಸ್ಥಿತರಿದ್ದರು. ಮಧುರಾ ಆರ್‌.ಜೆ. ನಿರೂಪಿಸಿದರು.

ಅನರ್‌ಕಲಿ ಸಂಪೂರ್ಣ ಹಾಸ್ಯಭರಿತ ಚಿತ್ರ. ಕಡಿಮೆ ಬಜೆಟ್‌ನಲ್ಲಿ ಮಾಡಿದ ದೊಡ್ಡ ಸಿನಿಮಾ. ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ದೀಪಕ್‌ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್‌ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದು, ನಾಯಕ ನಟನಾಗಿ ವಿಜಯ್‌ ಶೋಭರಾಜ್‌ ಪಾವೂರು, ನಾಯಕಿಯಾಗಿ ಮಧುರಾ ಆರ್‌. ಜೆ. ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

PDO-Arrest

Mangaluru: ನಿವೃತ್ತ ಪಿಡಿಒ ಕೊಲೆ ಆರೋಪಿ ಬಂಧನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.