GSB ಸಮಾಜ ಹಿತರಕ್ಷಣ ವೇದಿಕೆ: ಆ. 25: ಶೈಕ್ಷಣಿಕ ದತ್ತು ಸ್ವೀಕಾರ, ಪ್ರೇರಣ ಕಾರ್ಯಾಗಾರ


Team Udayavani, Aug 24, 2024, 12:25 AM IST

GSB ಸಮಾಜ ಹಿತರಕ್ಷಣ ವೇದಿಕೆ: ಆ. 25: ಶೈಕ್ಷಣಿಕ ದತ್ತು ಸ್ವೀಕಾರ, ಪ್ರೇರಣ ಕಾರ್ಯಾಗಾರ

ಉಡುಪಿ: ಜಿಲ್ಲೆಯ ಜಿಎಸ್‌ಬಿ ಸಮಾಜ ಹಿತರಕ್ಷಣ ವೇದಿಕೆ ಹಾಗೂ ಸಮರ್ಪಣ ಚಾರಿಟೆಬಲ್‌ ಟ್ರಸ್ಟ್‌ ಮುದರಂಗಡಿ ಸಹಭಾಗಿತ್ವದಲ್ಲಿ ಜಿಎಸ್‌ಬಿ ವಿದ್ಯಾರ್ಥಿವೇತನ ವಿತರಣೆ, ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆ, ಶೈಕ್ಷಣಿಕ ಪ್ರೇರಣ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಸಮಾ ರಂಭವು ಆ. 25ರಂದು ಅಂಬಾಗಿಲು ಅಮೃತ್‌ ಗಾರ್ಡನ್‌ ಸಭಾಭವನದಲ್ಲಿ ಜರಗಲಿದೆ.

ವೇ|ಮೂ| ದಿ| ಪಡುಬಿದ್ರಿ ದೇವಿದಾಸ ಶರ್ಮರ ಮಕ್ಕಳು ಸ್ಥಾಪಿ ಸಿರುವ ದತ್ತಿನಿಧಿಯಿಂದ ಸಂಸ್ಕೃತ, ವೇದ, ತರ್ಕ, ಸುಧಾಪಾಠ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಗೌರವ ಪುರಸ್ಕಾರ ನೀಡಲಾಗುವುದು. ಕಾರ್ಕಳ ಭುವನೇಂದ್ರ ಪ್ರೌಢಶಾಲೆಯ 10ನೇ ಪರೀಕ್ಷೆಯಲ್ಲಿ ಸಂಸ್ಕೃತ ಭಾಷೆಯಲ್ಲಿ ಪೂರ್ಣ 125 ಅಂಕ ಗಳಿಸಿದ 10 ಮಂದಿಗೆ ತಲಾ 2 ಸಾ. ರೂ. ಪ್ರೋತ್ಸಾಹಧನ ನೀಡಿ ಗೌರವಿಸಲಾಗುವುದು. ದಾನಿಗಳಾದ ಕಾರ್ಕಳದ ಕೆ. ಕಮಲಾಕ್ಷ ಕಾಮತ್‌, ಬೈಲೂರು ಕಣಜಾರಿನಲ್ಲಿ ಅಶಕ್ತರಿಗೆ “ಹೊಸ ಬೆಳಕು’ ಆಶ್ರಮದ ಮೂಲಕ ಸೇವೆಗೈಯುತ್ತಿರುವ ಸಂಸ್ಥಾಪಕರಿಗೆ ವಿಶೇಷ ಗೌರವ ಪುರಸ್ಕಾರ ನೀಡಲಾಗುವುದು.

ಪ್ರತಿಭಾ ಪುರಸ್ಕಾರ
ಎಸೆಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯ ರ್‍ಯಾಂಕ್‌ ವಿಜೇತರು, ಸಿಇಟಿ, ಕಾಮೆಡ್‌ಕೆ, ಜಿಇಇ, ನೀಟ್‌ಗಳಲ್ಲಿ ನೂರರೊಳಗಿನ ರ್‍ಯಾಂಕ್‌ ಗಳಿಸಿದ ಪ್ರತಿಭಾನ್ವಿತರು, ಐಎಎಸ್‌, ಐಪಿಎಸ್‌, ಐಆರ್‌ಎಸ್‌, ಕೆಎಎಸ್‌ ಮೊದಲಾದ ಪರೀಕ್ಷೆಗಳಲ್ಲಿ ತೇರ್ಗಡೆಯಾದವರು, ಪಿಎಚ್‌.ಡಿ., ಸಿಎ ಪದವಿ ಉತ್ತೀರ್ಣರಾದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಸಂಕಷ್ಟದಲ್ಲಿರುವ ಜಿಎಸ್‌ಬಿ ಕುಟುಂಬಗಳ 1ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ 121 ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಶುಲ್ಕದ ಖರ್ಚನ್ನು ಭರಿಸಲಾಗುವುದು. ಎಸೆಸೆಲ್ಸಿ ಮತ್ತು ಅನಂತರದ ತರಗತಿಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಜಿಎಸ್‌ಬಿ ಸಮುದಾಯದ ಅರ್ಹ 444 ಮಂದಿಗೆ ಶೈಕ್ಷಣಿಕ ಶುಲ್ಕ ಭರಿಸಲು ವಿದ್ಯಾರ್ಥಿವೇತನ ಒದಗಿಸಲಾಗುವುದು.

ಸಾಮಾಜಿಕ ಕಾಳಜಿ
ಸಾಣೂರು ಸ.ಪ.ಪೂ. ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಸರ್ವ ಜನಾಂಗದ 20 ಬಡ ಕೌಟುಂಬಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ತಲಾ 2 ಸಾ. ರೂ. ಪ್ರೋತ್ಸಾಹನಿಧಿ ನೀಡಲಾಗುವುದು. ಒಟ್ಟಾರೆ ಸೇವಾ ಚಟುವಟಿಕೆಗಳಿಗೆ ಈ ವರ್ಷ 1,01,81,000 ರೂ. ಮೀಸಲಿಡಲಾಗಿದೆ.

ಕುಟುಂಬ ಚೈತನ್ಯ ನಿಧಿ
ಜಿಎಸ್‌ಬಿ ಸಮಾಜದ 160 ತೀರಾ ದುರ್ಬಲ ಕುಟುಂಬಗಳ ಜೀವನೋಪಾಯಕ್ಕಾಗಿ ನಿರ್ದಿಷ್ಟ ಮೊತ್ತದ ಆರ್ಥಿಕ ನೆರವನ್ನು ಪ್ರತೀ ತಿಂಗಳು ನೇರವಾಗಿ ಬ್ಯಾಂಕ್‌ ಖಾತೆಗೆ ವರ್ಗಾಯಿಸುವ ಯೋಜನೆಗೆ 10 ವರ್ಷ ತುಂಬಿರುವ ನೆಲೆಯಲ್ಲಿ ಪ್ರತೀ ಕುಟುಂಬಕ್ಕೆ ತಲಾ 12 ಸಾ. ರೂ.ಗಳಂತೆ 19.50 ಲಕ್ಷ ರೂ. ನೆರವನ್ನು ಆಪದ್ಧನವಾಗಿ ನೀಡಲಾಗುವುದು. ಈ ಮೊತ್ತವನ್ನು ಡಾ| ಪಿ. ದಯಾನಂದ ಪೈ ನೀಡಿದ್ದಾರೆ. ಸಮಾಜ ಬಾಂಧವರ ನೆರವು ದೊರೆತಲ್ಲಿ 1 ಕುಟುಂಬದ ಎಲ್ಲ ಸದಸ್ಯರೂ ತೀವ್ರ ಅನಾರೋಗ್ಯ ಪೀಡಿತರಾಗಿರುವ ಸಾೖಬ್ರಕಟ್ಟೆಯ ಜಿಎಸ್‌ಬಿ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಡುವ ಚಿಂತನೆಯಿದೆ ಎಂದು ವೇದಿಕೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.