Kolkata ರೇ*ಪ್ ಆರೋಪಿಗೆ ಮೃಗೀಯ ಸ್ವಭಾವವಿತ್ತು: ಸಿಬಿಐ
Team Udayavani, Aug 24, 2024, 6:40 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲದ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ “ಮೃಗೀಯ ಸ್ವಭಾವ’ವನ್ನು ಹೊಂದಿದ್ದಾನೆ ಎಂದು ಸಿಬಿಐ ಶುಕ್ರವಾರ ಹೇಳಿದೆ. ಅಲ್ಲದೇ ಅಪರಾಧವನ್ನು ಒಪ್ಪಿಕೊಳ್ಳುವ ಸಮಯ ದಲ್ಲಿ ಯಾವುದೇ ಪಶ್ಚಾತ್ತಾಪ ತೋರಿಸಲಿಲ್ಲ ಎಂದು ಹೇಳಿದೆ.
ಈಗಾಗಲೇ ಆರೋಪಿಯ ಮನೋವಿಶ್ಲೇಷ ಣೆಯ ವರದಿಯನ್ನು ತಯಾರಿಸಲು ಸಿಬಿಐ ಸೂಚಿಸಿದ್ದು, ಇದರ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಪರಾಧ ನಡೆದ ಸಮಯದಲ್ಲಿ ರಾಯ್ ಆ ಸ್ಥಳದಲ್ಲಿದ್ದ ಎಂಬುದಕ್ಕೆ ಸಾಕಷ್ಟು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳಿವೆ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆ ಬಗ್ಗೆ ಪಶ್ಚಾತ್ತಾಪವಿಲ್ಲ: ಆರೋಪಿ ರಾಯ್ಗೆ ಘಟನೆಯ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇಡೀ ಘಟನೆಯ ಇಂಚಿಂಚನ್ನೂ ಸ್ವಲ್ಪವೂ ಹಿಂಜ ರಿಕೆ ಇಲ್ಲದೇ ಆತ ವಿಚಾರಣೆಯ ಸಮಯದಲ್ಲಿ ಹೇಳಿದ್ದಾನೆ. ಆತ ಕಾಮುಕನಾಗಿದ್ದು, ಮೃಗದ ರೀತಿ ಯಲ್ಲಿ ವರ್ತಿಸುತ್ತಿದ್ದ ಎಂದು ಅವರು ಹೇಳಿದ್ದಾರೆ.
ಕೋಲ್ಕತಾ ಆಸ್ಪತ್ರೆಯ ಅವ್ಯವಹಾರ ಕೇಸ್ ಸಿಬಿಐಗೆ
ಕೋಲ್ಕತಾ: ಇಲ್ಲಿನ ಆರ್ಜಿಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿದೆ. ಆಸ್ಪತ್ರೆಯ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಕಾಲದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಬಗ್ಗೆ ತನಿಖೆ ಇ.ಡಿ. ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಸಂಜಯ ರಾಯ್ಗೆ ಸುಳ್ಳುಪತ್ತೆ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ
ಕೋಲ್ಕತಾ ಅತ್ಯಾಚಾರದ ಪ್ರಕರಣದ ಆರೋಪಿ ಸಂಜಯ್ ರಾಯ್ಗೆ ಸುಳ್ಳುಪತ್ತೆ ಪರೀಕ್ಷೆ ನಡೆಸಲು ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಈ ಪರೀಕ್ಷೆ ನಡೆಸಲಿದ್ದಾರೆ. ಆರೋಪಿಯ ಡಿಎನ್ಎ ಮತ್ತು ಮನೋವಿಶ್ಲೇಷಣ ವರದಿಗೆ ಸಿಬಿಐ ಅಧಿಕಾರಿಗಳು ಕಾಯುತ್ತಿದ್ದು, ಇದು ಸಿಕ್ಕಿದ ಬಳಿಕ ವಿಚಾರಣೆಯ ದಿಕ್ಕನ್ನು ನಿರ್ಧರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರ್ಜಿ ಕಾರ್ ಕಾಲೇಜಿನ ಪ್ರಾಂಶುಪಾಲ ಹಾಗೂ ಇತರರಿಗೆ ಸುಳ್ಳುಪತ್ತೆ ಪರೀಕ್ಷೆ ನಡೆಸಲು ಕೋರ್ಟ್ ಈಗಾಗಲೇ ಒಪ್ಪಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.