Siruguppa: ನಗರದಲ್ಲಿ ಸ್ವಚ್ಛತೆ ಮಾಯ, ಹೆಚ್ಚಿದ ಅನಾರೋಗ್ಯ ಸಮಸ್ಯೆ, ಡೆಂಗಿ ಪ್ರಕರಣ ಪತ್ತೆ


Team Udayavani, Aug 24, 2024, 11:00 AM IST

Siruguppa: ನಗರದಲ್ಲಿ ಸ್ವಚ್ಛತೆ ಮಾಯ, ಹೆಚ್ಚಿದ ಅನಾರೋಗ್ಯ ಸಮಸ್ಯೆ, ಡೆಂಗಿ ಪ್ರಕರಣ ಪತ್ತೆ

ಸಿರುಗುಪ್ಪ: ನಗರದಲ್ಲಿ ಢೆಂಘಿ, ಚಿಕನ್‌ಗುನ್ಯ ಹಾವಳಿ ಜೊತೆಗೆ ವೈರಲ್ ಫೀವರ್ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ ಒಂದು ವಾರದಿಂದ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಇದರ ಚಿಕಿತ್ಸೆಗೆಂದು ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ನಗರಸಭೆಯು ಸ್ವಚ್ಛತೆ ಕಾಪಾಡುವಲ್ಲಿ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ವಿಫಲವಾಗಿರುವುದೇ ಢೆಂಘಿ, ಚಿಕನ್‌ಗುನ್ಯಾ, ವೈರಲ್ ಫೀವರ್, ಜ್ವರ ಹರಡಲು ಕಾರಣವಾಗಿದೆ.

ಮಕ್ಕಳು, ವಯಸ್ಸಾದವರಿಗೆ ಸೊಂಕು ಸುಲಭವಾಗಿ ಹರಡಿ ಆಸ್ಪತ್ರೆಗೆ ಅಲೆಯುವಂತಾಗಿದೆ. ನಗರದ ಸರ್ಕಾರಿ ಆಸ್ಪತ್ರೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಿತ್ಯವೂ ಮಕ್ಕಳು ಮತ್ತು ವೃದ್ಧರು ವೈರಲ್ ಫೀವರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೊರ ರೋಗಿಗಳಿಗೆ ಶೇಕಡ ೫೦ಕ್ಕೂ ಹೆಚ್ಚು ಜನ ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆ. ಕಳೆದ ಕೆಲವುದಿನಗಳ ಹಿಂದೆ ಸುರಿದ ಮಳೆಯಿಂದಾಗಿ ನಗರದಲ್ಲಿ ವ್ಯಾಪಕವಾಗಿ ಸೊಂಕು ಜ್ವರ ಮತ್ತು ಢೆಂಘಿ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರುತ್ತದೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಈ ಜ್ವರ ಒಬ್ಬರಿಗೆ ಬಂದರೆ ಮನೆ ಮಂದಿಗೆಲ್ಲ ಕಾಡುತ್ತದೆ. ನೆಗಡಿ, ಕೆಮ್ಮು, ಮೈಕೈ ನೋವಿನಿಂದ ಪ್ರಾರಂಭವಾಗಿ 5-6 ದಿನ ಬಾದಿಸುತ್ತದೆ. ತಣ್ಣನೆ ವಾತಾವರಣದಿಂದಾಗಿ ಮನುಷ್ಯರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಇದರಿಂದ ಸುಲಭವಾಗಿ ಸೊಂಕು ಹರಡುತ್ತದೆ. ಸೊಂಕು ಕಾರಕ ರೋಗಾಣುಗಳು ಗಾಳಿ ಇತ್ಯಾದಿ ಮಾರ್ಗಗಳಿಗಿಂತಲು ಸೊಳ್ಳೆ ಕಡಿತದ ಮೂಲಕವೇ ಹರಡುವ ಪ್ರಕರಣಗಳು ಹೆಚ್ಚಾಗಿವೆ.

ನಗರದಲ್ಲಿ ೮ಜನರಿಗೆ ಢೆಂಘಿಜ್ವರ ಕಾಣಿಸಿಕೊಂಡಿದ್ದು, ನಗರದ ಸರ್ಕಾರಿ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯದಲ್ಲಿಯೂ ಚೇತರಿಕೆ ಕಂಡುಬಂದಿದೆ ಯಾವುದೇ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇರುವುದಿಲ್ಲವೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ 10ನೇ ವಾರ್ಡ್ ನಲ್ಲಿ ಆಯೇಷ ಸಿದ್ದಿಕಾ (8) ಎನ್ನುವ ಬಾಲಕಿಗೆ ಢೆಂಘಿ ಜ್ವರ ಕಾಣಿಸಿಕೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಇತ್ತೀಚೆಗೆ ಮರಣಹೊಂದಿದ್ದಳು.

ನಗರದಲ್ಲಿ ಢೆಂಘಿ ಮತ್ತು ವೈರಲ್ ಫೀವರ್ ಜ್ವರ ಹರಡಲು ಸ್ವಚ್ಛತೆ ಇಲ್ಲದೆ ಇರುವುದು ಮುಖ್ಯ ಕಾರಣವಾಗಿದೆ ನಮ್ಮ ಮನೆಯಲ್ಲಿರುವ ಇಬ್ಬರು ಮಕ್ಕಳಿಗೆ ಜ್ವರ ಬಂದಿದ್ದು, ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಕಸ ವಿಲೇವಾರಿ ಮಾಡಲು ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ತೆಗೆದುಕೊಳ್ಳಬೇಕೆಂದು ನಗರಸಭೆ ಅಧಿಕಾರಿಗಳಿಗೆ ಖುದ್ದಾಗಿ ಕಂಡು ಹೇಳಿ ಬಂದರೂ 8 ದಿನಕ್ಕೊಮ್ಮೆ ನಮ್ಮ ವಾರ್ಡ್ ನಲ್ಲಿ ಕಸ ವಿಲೇವಾರಿ ಮಾಡುತ್ತಿರುವುದರಿಂದ ರೋಗಗಳ ಹರಡುತ್ತಿವೆ ಎಂದು 10 ವಾರ್ಡ್ ನ ನಿವಾಸಿ ಕಟುಗರ ಮಾಲಸಾಬ್ ತಿಳಿಸಿದ್ದಾರೆ.

ನಗರದಲ್ಲಿರುವ 31 ವಾರ್ಡ್ ಗಳಲ್ಲಿ ಕಸ ವಿಲೇವಾರಿಯು ಸಮಪರ್ಕವಾಗಿ ನಡೆಯದೇ 8 ದಿನಕ್ಕೊಮ್ಮೆ ವಾರ್ಡ್ಗಳಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದೆ, ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಅಧಿಕಾರಿಗಳು ವಿಫಲರಾಗಿದ್ದು, ರೋಗ ಹರಡಲು ಕಾರಣವಾಗಿದೆ, ಕನಿಷ್ಠ ಫಾಗಿಂಗ್ ಮಾಡಿ ಎಂದು ತಿಳಿಸಿದರು ಮಾಡುತ್ತಿಲ್ಲವೆಂದು ನಗರಸಭೆ ಸದಸ್ಯ ಮಹೇಶ್‌ಗೌಡ ಆರೋಪಿಸಿದ್ದಾರೆ.

ನಗರದಲ್ಲಿ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗಿದ್ದು, ಢೆಂಘಿ ಜ್ವರ ಕಾಣಿಸಿಕೊಂಡಿದ್ದು, ಢೆಂಘಿ ಜ್ವರಕ್ಕೆ ಚಿಕಿತ್ಸೆ ನೀಡಲು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 11 ಬೆಡ್‌ಗಳ ವಾರ್ಡ್ ನ ಸಿದ್ದಪಡಿಸಲಾಗಿದೆ, 8 ಜನ ಢೆಂಘಿ ಜ್ವರದಿಂದ ಬಳಲುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ, ನಗರದಲ್ಲಿ ಸ್ವಚ್ಛತೆ ಕಾಪಾಡುವಂತೆ ನಗರಸಭೆ ಅಧಿಕಾರಿಳಿಗೆ ತಿಳಿಸಲಾಗಿದೆ ಎಂದು ಟಿ.ಹೆಚ್.ಒ. ಡಾ.ಡಿ.ವೀರೇಂದ್ರಕುಮಾರ್ ತಿಳಿಸಿದ್ದಾರೆ.

ಇರುವ ಸಿಬ್ಬಂದಿಯಿಂದಲೇ ನಗರದಲ್ಲಿ ಕಸ ವಿಲೇವಾರಿ ಮತ್ತು ಚರಂಡಿ ಸ್ವಚ್ಛತೆ ಕಾರ್ಯವನ್ನು ಮಾಡುತ್ತಿದ್ದೇವೆ, ಢೆಂಘಿ ಪ್ರಕರಣ ಕಾಣಿಸಿಕೊಂಡ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಸೂಚನೆಯ ಮೇರೆಗೆ ಧೂಮೀಕರಣವನ್ನು ಮಾಡುತ್ತಿದ್ದೇವೆಂದು ನೈರ್ಮಲ್ಯ ಅಧಿಕಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: Thekkatte: ಪ್ರಯಾಣಿಕರ ಬಸ್‌ ತಂಗುದಾಣ ಸ್ಥಳಾಂತರಕ್ಕೆ ಮಹತ್ವದ ನಿರ್ಣಯ ಕೈಗೊಂಡ ಗ್ರಾ.ಪಂ.!

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.