Shikhar Dhawan; ನಿವೃತ್ತಿ ನಿರ್ಧಾರ ಕಷ್ಟವಲ್ಲ.. ಆದರೆ…: ವಿದಾಯದ ಬಳಿಕ ಧವನ್‌ ಮಾತು


Team Udayavani, Aug 24, 2024, 12:05 PM IST

Shikhar Dhawan

ಮುಂಬೈ: ಟೀಂ ಇಂಡಿಯಾ ಕಂಡ ಟ್ಯಾಲೆಂಟೆಡ್‌ ಎಡಗೈ ಬ್ಯಾಟರ್‌ ಶಿಖರ್‌ ಧವನ್‌ (Shikhar Dhawan) ಅವರು ಇಂದು ಅಂತಾರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶದ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ಪ್ರೀತಿ ಮತ್ತು ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು.

ಹಿಂದೂಸ್ತಾನ ಟೈಮ್ಸ್‌ ಗೆ ನೀಡಿದ ಸಂದರ್ಶನದಲ್ಲಿ ತನ್ನ ನಿವೃತ್ತಿಯ ಬಗ್ಗೆ ಹೇಳಿರುವ ಧವನ್, ಇದು ಕಷ್ಟದ ನಿರ್ಧಾರ ಅಲ್ಲದಿದ್ದರೂ, ಭಾವನಾತ್ಮಕವಾಗಿದೆ ಎಂದು ಹೇಳಿದರು.

“ಕಷ್ಟವಲ್ಲ, ಆದರೆ ಭಾವನಾತ್ಮಕವಾಗಿ ಹೌದು. ಆದರೆ ಇದರ ಬಗ್ಗೆ ಬೇಸರವಿಲ್ಲ. ನಾನು ನನ್ನ ಅರ್ಧ ಜೀವನವನ್ನು ಕ್ರಿಕೆಟ್‌ ಗಾಗಿ ನೀಡಿದ್ದೇನೆ. ಈಗ ನಿವೃತ್ತಿಯ ಸಮಯ. ಬಹುಶ ಇದು ವಿರಾಮದ ಸಮಯ. ನಾನು ಮನೆಯಲ್ಲಿ ಸಂತೋಷವಾಗಿ ಕಾಲ ಕಳೆಯುತ್ತಿದ್ದೇನೆ” ಎಂದು ಗಬ್ಬರ್‌ ಹೇಳಿದರು.

“ಕ್ರಿಕೆಟ್ ತ್ಯಜಿಸಿದರೆ ನಾನೇಕೆ ಖ್ಯಾತಿಯನ್ನು ಕಳೆದುಕೊಳ್ಳುತ್ತೇನೆ? ಯಾರಿಗೆ ಗೊತ್ತು, ಖ್ಯಾತಿಯೂ ಹೆಚ್ಚಾಗಬಹುದು. ನಾನು ಜನರ ಹೃದಯದ ಅರಸ. ಕ್ರಿಕೆಟ್ ಮೂಲಕ ಮಾತ್ರವಲ್ಲ … ಕೆಲವೊಮ್ಮೆ ನನ್ನ ಇನ್‌ಸ್ಟಾಗ್ರಾಮ್ ರೀಲ್‌ಗಳ ಮೂಲಕವೂ. ನಾನು ಜನರಿಂದ ಪಡೆಯುವ ಪ್ರೀತಿಯು ಬೆಳೆಯುತ್ತಲೇ ಇರುತ್ತದೆ, ನಾನು ಅದನ್ನು ಖಚಿತವಾಗಿ ಹೇಳುತ್ತೇನೆ” ಎಂದು ಧವನ್ ಹೇಳಿದರು.‌

ದೆಹಲಿಯ ಧವನ್‌ ಅವರು 34 ಟೆಸ್ಟ್‌, 167 ಏಕದಿನ ಪಂದ್ಯಗಳು ಮತ್ತು 68 ಅಂತಾರಾಷ್ಟ್ರೀಯ ಟಿ20ಗಳಲ್ಲಿ ಭಾರತ ತಂಡವನ್ನು ಪ್ರಕಟಿಸಿದ್ದಾರೆ. ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಅವರು 44.11 ರ ಸರಾಸರಿಯಲ್ಲಿ 6793 ರನ್‌ ಗಳಿಸಿದ್ದಾರೆ. ಏಕದಿನ ಮಾದರಿಯಲ್ಲಿ ಅವರು 17 ಶತಕ ಮತ್ತು 39 ಅರ್ಧಶತಕ ಬಾರಿಸಿದ್ದಾರೆ.

ಶಿಖರ್‌ ಧವನ್‌ ಅವರು 2022ರಲ್ಲಿ ಬಾಂಗ್ಲಾದೇಶ ವಿರುದ್ದ ಕೊನೆಯದಾಗಿ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.