Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ
Team Udayavani, Aug 24, 2024, 12:07 PM IST
ಕೋಟ: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹಿಂದೂ ಯುವತಿಯ ಮೇಲೆ 4 ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು, ಈ ದುಷ್ಕೃತ್ಯದ ಹಿಂದೆ ಲವ್ ಜಿಹಾದ್ ಸಂಚು ಕೂಡ ಅಡಗಿರುವ ಅನುಮಾನವಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಖಂಡನೆ ವ್ಯಕ್ತಪಡಿಸಿದೆ.
ಇಂತಹ ಘಟನೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವ ರೀತಿಯಲ್ಲಿದ್ದು, ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆ ನೀಡುವುದರೊಂದಿಗೆ 4 ಮಂದಿ ಆರೋಪಿಗಳಿಗೆ ಬೆಂಬಲವಾಗಿ ನಿಂತ ಮತೀಯ ಶಕ್ತಿಗಳಾವು, ವ್ಯವಸ್ಥಿತವಾದ ಲವ್ ಜಿಹಾದ್ ಸಂಚಿಗೆ ಸಹಕರಿಸುತ್ತಿರುವ ವ್ಯವಸ್ಥೆಗಳು ಯಾರು ಎನ್ನುವ ಬಗ್ಗೆ ಸಮಗ್ರ ತನಿಖೆ ಪೊಲೀಸ್ ಇಲಾಖೆಯಿಂದ ನಡೆಯಬೇಕು ಹಾಗೂ ಕಾಂಗ್ರೆಸ್ ಆಡಳಿತದಲ್ಲಿರುವ ಸಂದರ್ಭದಲ್ಲೇ ಇಂತಹ ಘಟನೆಗಳು ಮತ್ತೆ – ಮತ್ತೆ ನಡೆಯುತ್ತಿರುವುದಕ್ಕೆ ಆಡಳಿತ ವ್ಯವಸ್ಥೆಯ ಕೋಮು ಓಲೈಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.
ಒಟ್ಟಾರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಲವ್ ಜಿಹಾದ್ ಹಾಗೂ ಡ್ರಾಗ್ಸ್ ಜಾಲವನ್ನು ಮಟ್ಟ ಹಾಕದಿದ್ದರೆ ಯುವಮೋರ್ಚಾ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.