UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ
Team Udayavani, Aug 24, 2024, 12:31 PM IST
ಉತ್ತರ ಪ್ರದೇಶ: ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯಳ್ಳಿ ನಡೆದ ಅಭಿವೃದ್ಧಿ ಕೆಲಸಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಗೆ “ತ್ರಿವಳಿ ತಲಾಖ್” ನೀಡಿರುವ ಪ್ರಸಂಗವೊಂದು ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಬೆಳಕಿಗೆ ಬಂದಿದೆ.
ಇದೀಗ ಘಟನೆಗೆ ಸಂಬಂಧಿಸಿ ಮಹಿಳೆ ತನ್ನ ಪತಿ, ಅತ್ತೆ, ಮಾವ ಸೇರಿದಂತೆ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಮಹಿಳೆ ನೀಡಿರುವ ದೂರಿನಲ್ಲಿ “ನಾನು ಬಹ್ರೈಚ್ನ ಥಾನಾ ಜರ್ವಾಲ್ ರಸ್ತೆಯ ಮೊಹಲ್ಲಾ ಸರೈ ನಿವಾಸಿಯಾಗಿದ್ದು. ಕಳೆದ ಡಿಸೆಂಬರ್ 13, 2023 ರಂದು, ನಾನು ಅಯೋಧ್ಯೆಯ ಕೊತ್ವಾಲಿ ನಗರದ ಮೊಹಲ್ಲಾ ದೆಹಲಿ ದರ್ವಾಜಾ ನಿವಾಸಿಯಾಗಿರುವ ಇಸ್ಲಾಂ ಅವರ ಮಗ ಅರ್ಷದ್ ಅವರನ್ನು ವಿವಾಹವಾಗಿದ್ದು. ನನ್ನ ತಂದೆ ಇಬ್ಬರ ಒಪ್ಪಿಗೆಯ ಮೇರೆಗೆ ಹುಡುಗನ ಮನೆಯವರ ಆಸೆಯಂತೆ ಅದ್ದೂರಿಯಾಗಿ ಮದುವೆ ಮಾಡಿಸಿಕೊಟ್ಟಿದ್ದರು. ಇದಾದ ಬಳಿಕ ಊರಿಗೆ ಹೋದಾಗ ಅಯೋಧ್ಯಾ ಧಾಮದ ರಸ್ತೆಗಳು, ಸೌಂದರ್ಯೀಕರಣ, ಅಭಿವೃದ್ಧಿ, ಅಲ್ಲಿನ ವಾತಾವರಣ ಇಷ್ಟವಾಯಿತು. ಈ ಕುರಿತು ನಾನು ನನ್ನ ಪತಿಯ ಮುಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದೇನೆ ಇಷ್ಟಕ್ಕೆ ಕೋಪಗೊಂಡ ಪತಿ ಹಾಗೂ ಮನೆಮಂದಿ ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಅಲ್ಲದೆ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದು ಇದಾದ ಬಳಿಕ ಪತಿ ನನ್ನ ಬಳಿ ಮೂರೂ ಬಾರಿ ತಲಾಖ್ ಹೇಳಿ ನನ್ನನ್ನು ತವರು ಮನೆಗೆ ಕಳುಹಿಸಿಕೊಟ್ಟಿರುವುದಾಗಿ ದೂರು ನೀಡಿದ್ದಾಳೆ.
ಸದ್ಯ ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆಯ ಪತಿ ಅರ್ಷದ್, ಅತ್ತೆ ರೈಶಾ, ಮಾವ ಇಸ್ಲಾಂ, ಅತ್ತಿಗೆ ಕುಲ್ಸುಮ್, ಸೋದರ ಮಾವ ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Kolkata: ಬೈಕ್ ಸವಾರನಿಂದ ಬೆಂಗಾಲಿ ನಟಿ ಪಾಯೆಲ್ ಮುಖರ್ಜಿ ಮೇಲೆ ಹಲ್ಲೆ, ಕಾರು ಧ್ವಂಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.