Gadag; ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದ್ದ ಟಂಟಂ, ಆಟೋ, ದ್ವಿಚಕ್ರ ವಾಹನ ಜಪ್ತಿ


Team Udayavani, Aug 24, 2024, 2:29 PM IST

Gadag; ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದ್ದ ಟಂಟಂ, ಆಟೋ, ದ್ವಿಚಕ್ರ ವಾಹನ ಜಪ್ತಿ

ಗದಗ: ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರ ಸಂಚಾರಿ ಠಾಣೆ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿ 40 ದ್ವಿಚಕ್ರ ವಾಹನ ಹಾಗೂ 20ಕ್ಕೂ ಹೆಚ್ಚು ಟಂಟಂ, ಆಟೋ ಜಪ್ತಿ ಮಾಡಿದ್ದಾರೆ.

ಅವಳಿ ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ದ್ವಿಚಕ್ರ ವಾಹನ, ಟಂಟಂ ಮತ್ತು ಆಟೋಗಳಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿರುವುದು, ನಂಬರ್ ಪ್ಲೇಟ್ ಮರೆಮಾಚಿ ಚಾಲನೆ, ಅತಿ ವೇಗದ ಚಾಲನೆ ಮಾಡುತ್ತಿರುವವರ ವಿರುದ್ಧ ದಂಡ ಹಾಕಿ ವಾಹನಗಳನ್ನು ವಶಕ್ಕೆ ಪಡೆಯಲಾಯಿತು.

ನಗರದೊಳಗೆ ಅತಿ ವೇಗದ ಚಾಲನೆ, ನಂಬರ್ ಪ್ಲೇಟ್ ಮರೆಮಾಚಿ ಓಡಿಸುವುದು ಇವೆಲ್ಲ ಕಾನೂನುಬಾಹಿರ. ವಾಹನ ಚಾಲಕರು ಕಾನೂನಿನ ಪ್ರಕಾರವೇ ನಡೆದುಕೊಳ್ಳಬೇಕು. ಇಲ್ಲವಾದರೆ ಅಂತಹವರನ್ನು ಗುರುತಿಸಿ, ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಎಂದು ವಾಹನ ಚಾಲಕರಿಗೆ ವಾಹನ ಚಾಲನಾ ನಿಯಮಗಳ ಕುರಿತು ವಿವರಿಸಿದರು.

ಅವಳಿ ನಗರದಲ್ಲಿ ಸಂಚರಿಸುತ್ತಿದ್ದ ಡಿಎಲ್, ಇನ್ಸೂರೆನ್ಸ್, ಪರ್ಮಿಟ್ ಇಲ್ಲದ ಹಾಗೂ ನಾನ್ ರೆಜಿಸ್ಟ್ರೇಶನ್ ಆಟೋಗಳನ್ನು ಸೀಜ್ ಮಾಡಲಾಗಿದೆ. ಆಟೋ ಚಾಲಕರು, ಮಾಲೀಕರು ವಾಹನಗಳನ್ನು ಸಾರಿಗೆ ಇಲಾಖೆ ನಿಯಮದಡಿ ಎಲ್ಲ ದಾಖಲಾತಿ ಹೊಂದಿರಬೇಕು. ಚಾಲನಾ ನಿಯಮ ಪಾಲಿಸಬೇಕು. ಇಲ್ಲವಾದಲ್ಲಿ ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ ಅವಳಿ ನಗರದ ವಿವಿಧೆಡೆ ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿ, ವಾಹನ ಸೀಜ್ ಮಾಡಲಾಗಿದೆ ಎಂದು ಸಂಚಾರಿ ಠಾಣೆ ಪಿಎಸ್ಐ ಶಕುಂತಲಾ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.