Jay Shah ಐಸಿಸಿ ಪಟ್ಟಕ್ಕೇರಿದರೆ ಬಿಸಿಸಿಐ ಕಾರ್ಯದರ್ಶಿ ಯಾರು? ಇಲ್ಲಿದೆ ಕೆಲವು ಹೆಸರುಗಳು
Team Udayavani, Aug 24, 2024, 3:42 PM IST
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ICC) ಮುಂದಿನ ಅಧ್ಯಕ್ಷರಾಗಿ ಜಯ್ ಶಾ (Jay Shah) ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಸದ್ಯ ಬಿಸಿಸಿಐ (BCCI) ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ವಿಶ್ವ ಮಂಡಳಿಗೆ ಸೇರಲು ನಿರ್ಧರಿದ್ದಾರೆಯೋ ಎನ್ನುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಐಸಿಸಿ ಬೋರ್ಡ್ನಲ್ಲಿರುವ 16 ಸದಸ್ಯರಲ್ಲಿ 15 ಸದಸ್ಯರ ಬೆಂಬಲವನ್ನು ಶಾ ಹೊಂದಿರಬೇಕು. ಬಿಸಿಸಿಐ ಕಾರ್ಯದರ್ಶಿಯಾಗಿ ಅವರ ಸತತ ಎರಡನೇ ಅವಧಿಗೆ ಇನ್ನೂ ಒಂದು ವರ್ಷ ಉಳಿದಿದೆ.
ಹೊಸ ಐಸಿಸಿ ಅಧ್ಯಕ್ಷರು ಡಿಸೆಂಬರ್ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧ್ಯಕ್ಷ ಹುದ್ದೆಗೆ ನಾಮನಿರ್ದೇಶನವನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 27 ಆಗಿದೆ.
ಒಂದು ವೇಳೆ ಜಯ್ ಶಾ ಅವರು ಐಸಿಸಿ ಹುದ್ದೆಗೇರಿದರೆ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಯಾರು ಬರಲಿದ್ದಾರೆ ಎಂಬ ಕುತೂಹಲವಿದೆ. ಇದರ ಬಗ್ಗೆ ಇಲ್ಲಿದೆ ಒಂದು ನೋಟ ಇಲ್ಲಿದೆ.
ರಾಜೀವ್ ಶುಕ್ಲಾ: ಬಿಸಿಸಿಐ ಹುದ್ದೆಗಳನ್ನು ಮರುಜೋಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರಾಗಿರುವ ಹಾಲಿ ಉಪಾಧ್ಯಕ್ಷ ಶುಕ್ಲಾ ಅವರನ್ನು ಒಂದು ವರ್ಷದವರೆಗೆ ಕಾರ್ಯದರ್ಶಿ ಕೆಲಸ ಮಾಡಲು ಕೇಳುವ ಸಾಧ್ಯತೆಯಿದೆ. ಬಿಸಿಸಿಐ ಉಪಾಧ್ಯಕ್ಷರು ರಬ್ಬರ್ ಸ್ಟಾಂಪ್ ನಂತೆ ಇರುವುದರಿಂದ ಶುಕ್ಲಾ ಕಾರ್ಯದರ್ಶಿಯಾಗಲು ಖಂಡಿತವಾಗಿಯೂ ಮನಸ್ಸು ಮಾಡಬಹುದು.
ಆಶಿಶ್ ಶೇಲಾರ್: ಮಹಾರಾಷ್ಟ್ರ ಬಿಜೆಪಿ ಹೆವಿವೇಟ್ ಆಶಿಶ್ ಶೇಲಾರ್ ಅವರು ರೇಸ್ ನಲ್ಲಿದ್ದಾರೆ. ಅವರು ಬಿಸಿಸಿಐ ಖಜಾಂಚಿ ಮತ್ತು ಎಂಸಿಎ ಆಡಳಿತದಲ್ಲಿ ದೊಡ್ಡ ಹೆಸರು. ಆದರೆ ಬಿಸಿಸಿಐ ಕಾರ್ಯದರ್ಶಿ ಹುದ್ದೆಯು ಸಮಯ ತೆಗೆದುಕೊಳ್ಳುವ ಕೆಲಸವಾದ ಕಾರಣ ಒಬ್ಬ ಪೂರ್ಣ ಪ್ರಮಾಣದ ರಾಜಕಾರಣಿಯಾಗಿರುವ ಶೆಲಾರ್ ಅವರು ಹುದ್ದೆ ಒಪ್ಪಿಕೊಳ್ಳುವುದು ಕಷ್ಟ ಎನ್ನಲಾಗಿದೆ.
ಅರುಣ್ ಧುಮಾಲ್: ಐಪಿಎಲ್ ಅಧ್ಯಕ್ಷರಾಗಿರುವ ಅರುಣ್ ಧುಮಾಲ್ ಮಂಡಳಿಯನ್ನು ನಡೆಸಲು ಅಗತ್ಯವಾದ ಅನುಭವವನ್ನು ಹೊಂದಿದ್ದಾರೆ. ಅವರು ಈ ಹಿಂದೆ ಬಿಸಿಸಿಐ ಕೋಶಾಧಿಕಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಜಂಟಿ ಕಾರ್ಯದರ್ಶಿ ದೇವಜಿತ್ ಲೋನ್ ಸೈಕಿಯಾ ಅವರ ಹೆಸರು ಕೂಡಾ ಈ ರೇಸ್ ನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.