Desi Swara: ಭಾರತ ರಾಯಭಾರ ಕಚೇರಿಯಲ್ಲಿ ಧ್ವಜಾರೋಹಣ


Team Udayavani, Aug 24, 2024, 11:34 AM IST

Desi Swara: ಭಾರತ ರಾಯಭಾರ ಕಚೇರಿಯಲ್ಲಿ ಧ್ವಜಾರೋಹಣ

ಐರ್ಲೆಂಡ್‌: ಇಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆ.15ರಂದು ಭಾರತದ ರಾಯಭಾರ ಕಚೇರಿಯಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಸುಮಾರು ಮುನ್ನೂರಕ್ಕೂ ಹೆಚ್ಚು ಜನರು ಈ ಆಚರಣೆಯಲ್ಲಿ ಭಾಗವಹಿಸಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಮಕ್ಕಳು, ಹಿರಿಯರು ವರ್ಣವರ್ಣದ ಉಡುಗೆ ತೊಟ್ಟಿದ್ದರು.

ಭಾರತದ ರಾಯಭಾರಿ ಕಚೇರಿಯಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಐರಿಶ್‌ ಕನ್ನಡಿಗರು ಹಾಗೂ ಐರ್ಲೆಂಡ್‌ನ‌ಲ್ಲಿ ನೆಲೆಸಿರುವ ಇತರ ರಾಜ್ಯದ ಮುಖಂಡರು ನೆರೆದಿದ್ದರು. ಭಾರತದ ರಾಯಭಾರಿಗಳಾದ ಅಖೀಲೇಶ್‌ ಮಿಶ್ರ ಅವರು ಧ್ವಜಾರೋಹಣೆ ಮಾಡಿದ ಅನಂತರ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ ಭಾರತ ಮತ್ತು ಐರ್ಲೆಂಡ್‌ ದೇಶದ ನಡುವಿನ ಬಾಂಧವ್ಯ, ಕೊಡುಗೆ ಬಗ್ಗೆ ಮಾತನಾಡಿದರು.

ಹಬ್ಬದ ಅಂಗವಾಗಿ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಂದು ಸಾಯಂಕಾಲ ಅಖೀಲೇಶ್‌ ಮಿಶ್ರಾ ಅವರು ಐರ್ಲೆಂಡಿನಲ್ಲಿ ನೆಲೆಸಿರುವಂತ ಭಾರತೀಯ ಸಮುದಾಯದ ಗಣ್ಯರು, ಸಂಘಗಳ ಮುಖಂಡರಿಗೆ ಔತಣಕೂಟವನ್ನು ಅವರ ಮನೆಯಲ್ಲಿ ಆಯೋಜಿದ್ದರು. ಇವರ ಜತೆಗೆ ಇತರ ದೇಶದ ರಾಯಭಾರಿಗಳು, ಐರ್ಲೆಂಡ್‌ ಸರಕಾರದ ಮಂತ್ರಿಗಳು, ಬೇರೆಬೇರೆ ಕೌಂಟಿ ಮೇಯರ್‌ಗಳು ಆಗಮಿಸಿದ್ದರು.

ರಾಯಭಾರಿಗಳು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ ಐರ್ಲೆಂಡಿನಲ್ಲಿ ಭಾರತೀಯರ ಕೊಡುಗೆ ವಿಶೇಷವಾಗಿ ಮಹಿಳೆಯರ ಬಗ್ಗೆ ಹೆಚ್ಚು ಒತ್ತು ಕೊಟ್ಟು ವಿವರಿಸಿದರು. ಭಾರತೀಯ ಮಹಿಳೆಯರ ಆದಾಯ ಐರ್ಲೆಂಡಿನಲ್ಲಿ ನಂಬರ್‌ ಒಂದು ಸ್ಥಾನದಲ್ಲಿದೆ ಎಂದು ಹೇಳಿದರು. ನಿರಂಜನ ಆನಂದ್‌ ಅವರ ಭರತನಾಟ್ಯ, ಅಂಜಲಿ ಮತ್ತು ಸತಾಕ್ಷಿ ಅವರ ಕಥಕ್‌ ನೃತ್ಯ ನೋಡುಗರ ಮನ ಗೆದ್ದಿತು
.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಭಾರತದ ಐರ್ಲೆಂಡ್‌ ರಾಯಭಾರಿಯಾಗಿರುವ ಕೆವಿನ್‌ ಕೆಲ್ಲಿ ಅಧ್ಯಕ್ಷತೆ ವಹಿಸಿದ್ದರು. ಭಾರತದ ರಾಯಭಾರಿ ಕಚೇರಿಯಲ್ಲಿ ಮೊದಲನೇ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮುರುಘರಾಜ್‌ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟು ಧನ್ಯವಾದ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಔತಣ ಕೂಟಕ್ಕೆ ಬಂದಿದ್ದ ಗಣ್ಯರಿಗೆ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಊಟವನ್ನು ಆಯೋಜಿಸಲಾಗಿತ್ತು. ಮೈಸೂರ್‌ ರಸಂ ಸೇರಿ ಬಗೆ ಬಗೆಯ ಆಹಾರಗಳನ್ನು ಜನರು ತಿಂದು ಆನಂದಿಸಿದರು.

ವರದಿ: ಸುರೇಶ ಮರಿಯಪ್ಪ, ಐರ್ಲೆಂಡ್‌

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.