Bengaluru: ಯಂತ್ರಕ್ಕೆ 10 ರೂ. ಹಾಕಿದರೆ ಕೈ ಸೇರುತ್ತೆ ಬಟ್ಟೆ ಕೈಚೀಲ!

ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಕೆ | ಜನನಿಬಿಡ ಸ್ಥಳಗಳಲ್ಲಿ ಯಂತ್ರ ಸ್ಥಾಪನೆಗೆ ಚಿಂತನೆ: ಖಂಡ್ರೆ

Team Udayavani, Aug 24, 2024, 3:38 PM IST

19-bng

ಬೆಂಗಳೂರು: ಮಾಲ್‌ ಸೇರಿದಂತೆ ಕೆಲವು ಕಡೆಗಳಲ್ಲಿ ಗ್ರಾಹಕರು ಕಾಯಿನ್‌ ಹಾಕಿದರೆ ಚಾಕೋಲೆಟ್‌ ಸೇರಿದಂತೆ ಭಿನ್ನ ರೀತಿಯ ವಸ್ತುಗಳು ಕ್ಷಣ ಮಾತ್ರದಲ್ಲಿ ಕೈ ಸೇರುವುದನ್ನು ಕಂಡಿದ್ದೇವೆ. ಅದೇ ರೀತಿ ಈಗ ಯಂತ್ರಕ್ಕೆ 10 ರೂ. ಕಾಯಿನ್‌ ಹಾಕಿದರೆ ನಿಮ್ಮ ಕೈಗೆ ಕ್ಷಣ ಮಾತ್ರದಲ್ಲಿ ಬಟ್ಟೆ ಕೈ ಚೀಲ ಕೈಸೇರಲಿದೆ!.

ಎಂ.ಜಿ. ರೋಡ್‌ ಬಳಿ ಇರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಶನಿವಾರ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಕಾಯಿನ್‌ ಹಾಕುವ ಮೂಲಕ ಕೈ ಚೀಲ ಪಡೆದುಕೊಂಡರು. ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್‌ ಬ್ಯಾಗ್‌ಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಗ್ರೀನ್‌ ರಿಸೈಕ್ಲೋಪ್ಲಾಸ್ಟ್‌ ಸಂಸ್ಥೆಯೊಂದಿಗೆ ರಾಜ್ಯ ಪರಿಸರ ನಿಯಂತ್ರಣ ಮಂಡಳಿ ಒಪ್ಪಂದ ಮಾಡಿಕೊಂಡಿದೆ. ಜನನಿಬಿಡ ಸ್ಥಳಗಳಲ್ಲಿ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರ ಇರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಗ್ರಾಹಕರು 10 ರೂ. ಕಾಯಿನ್‌ ಅನ್ನು ಯಂತ್ರದ ಒಳಗೆ ಹಾಕಿದರೆ ತಕ್ಷಣ ಯಂತ್ರದ ಒಳಗಿನ ಬಟ್ಟೆಯ ಕೈಚಿಲ ಗ್ರಾಹಕರು ಕೈಸೇರಲಿದೆ. ಈ ಯೋಜನೆ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಈ ಯಂತ್ರಗಳನ್ನು ಮೆಟ್ರೋ ಮತ್ತು ಬಸ್‌ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಅಳವಡಿಸಲಾಗುವುದು ಎಂದರು.

ಈ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ ಮತ್ತು ಡಾ. ಪ್ರದೀಪ್‌, ಮಂಡಳಿಯ ಅಧ್ಯಕ್ಷ (ಉಸ್ತುವಾರಿ) ವಿಜಯ ಮೋಹನ ರಾಜ್‌, ಸದಸ್ಯ ಕಾರ್ಯದರ್ಶಿ, ಬಾಲಚಂದ್ರ ಇತರರಿದ್ದರು.

ಏಕ ಬಳಕೆ ಪ್ಲಾಸ್ಟಿಕ್‌ ತಡೆಗೆ ಕ್ರಮ

ಏಕ ಬಳಕೆ ಪ್ಲಾಸ್ಟಿಕ್‌ ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹಿಸಲು ಯೋಜನೆ ರೂಪಿಸಲಾ ಗುತ್ತಿದೆ. ಹವಾಮಾನ ಬದಲಾವಣೆಯಿಂದಾಗಿ ಗುಡ್ಡ ಕುಸಿತ ಸೇರಿದಂತೆ ಅನೇಕ ಘಟನೆಗಳು ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಸರ್ಕಾರ ಕಾಳಜಿ ವಹಿಸಲಾಗಿದೆ. ಪರಿಸರ ಸ್ನೇಹಿತ ವಸ್ತುಗಳ ಸಂಶೋಧನೆಗೆ ಉತ್ತೇಜನ ನೀಡುತ್ತಿದೆ ಎಂದು ಸಚಿವರು ತಿಳಿಸಿದರು. ಏಕ ಬಳಕೆ ವಸ್ತುಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ಕೂಡ ನಡೆದಿದೆ. ಪ್ಲಾಸ್ಟಿಕ್‌ ಬ್ಯಾಗ್‌ ಬಳಕೆಯಿಂದ ಹಲವು ರೀತಿಯ ತೊಂದರೆಗಳು ಆಗಲಿವೆ. ನೀರಿನಲ್ಲಿ ಬಿಟ್ಟರೆ ದನಕರುಗಳು, ಜಲಚರಗಳು ನಾಶವಾಗಿದೆ ಎಂದು ಖಂಡ್ರೆ ತಿಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.