Madikeri: ವಿವಿಧ ಪ್ರಕರಣಗಳ ಆರೋಪಿಗಳ ಬಂಧನ: 8 ಬೈಕ್ ಸೇರಿ ಹಲವು ಸೊತ್ತುಗಳು ವಶ


Team Udayavani, Aug 24, 2024, 5:00 PM IST

Madikeri: ವಿವಿಧ ಪ್ರಕರಣಗಳ ಆರೋಪಿಗಳ ಬಂಧನ: 8 ಬೈಕ್ ಸೇರಿ ಹಲವು ಸೊತ್ತುಗಳು ವಶ

ಮಡಿಕೇರಿ: ಕಟ್ಟಡ ಕಾಮಗಾರಿಗಾಗಿ ಬಳಸುವ ಯಂತ್ರಗಳನ್ನು ಕಳ್ಳತನ ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ ಯಂತ್ರಗಳು ಸೇರಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಶಾಲನಗರದ ಗೋಪಾಲ ಸರ್ಕಲ್ ನ ಮಹಮ್ಮದ್ ಆಸೀಫ್ (19), ಹೆಚ್.ಆರ್.ಪಿ ಕಾಲೋನಿಯ ಕೀರ್ತನ್ ವಿ.ಬಿ (26), ಚೌಡೇಶ್ವರಿ ಬಡಾವಣೆಯ ವಿಶ್ವತ್ (18) ಹಾಗೂ ಟೌನ್ ಕಾಲೋನಿಯ ಜಯಪ್ರಕಾಶ್ ಹೆಚ್.(22) ಬಂಧಿತ ಆರೋಪಿಗಳು.

ಬಂಧಿತರ ಬಳಿಯಿಂದ ಕಟ್ಟಡ ಕಾಮಗಾರಿಯ ಯಂತ್ರಗಳು ಹಾಗೂ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಹಿನ್ನೆಲೆ:
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಆರ್.ಕೆ ಲೇಔಟ್ ನಲ್ಲಿರುವ ಈಶ್ವರ್ ಎಂಬುವವರ ಹೊಸ ಮನೆ ಕಟ್ಟಡ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಇಡಲಾಗಿದ್ದ ವಿವಿಧ ಮಾದರಿಯ ಕಟ್ಟಿಂಗ್ ಮಿಷನ್, ಡೀಲಿಂಗ್ ಮಿಷನ್, ಏರ್‌ಬೋವರ್, ವ್ಯಾಕ್ಯೂಮ್ ಕ್ಲೀನರ್, ಗ್ರೇಂಡಿಂಗ್ ಮಿಷನ್ ಸೇರಿದಂತೆ ಒಟ್ಟು 11 ಯಂತ್ರಗಳು ಕಳ್ಳತನವಾಗಿರುವ ಕುರಿತು ಆ.20 ರಂದು ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪೊಲೀಸ್ ಠಾಣೆಯ ಸಿಪಿಐ ಪ್ರಕಾಶ್.ಬಿ.ಜೆ, ಪಿಎಸ್‌ಐ ಗೀತಾ ಹೆಚ್.ಟಿ, ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು.

ವಿವಿಧ ಪ್ರಕರಣಗಳ ಆರೋಪ:
ಆರೋಪಿಗಳ ವಿಚಾರಣೆಯ ಸಂದರ್ಭ 2022 ಮತ್ತು 2023 ನೇ ಸಾಲಿನಲ್ಲಿ ಅರಕಲಗೂಡು, ಬೆಟ್ಟದಪುರ, ಪಿರಿಯಾಪಟ್ಟಣ, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿ-ಚಕ್ರ ವಾಹನ ಕಳವು ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಹಮ್ಮದ್ ಆಸೀಪ್, ಕೀರ್ತನ್ ಹಾಗೂ ವಿಶ್ವತ್ ವಿರುದ್ಧ ಈ ಹಿಂದೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸರಬರಾಜು ಮತ್ತು ಕಳವು ಪ್ರಕರಣ ದಾಖಲಾಗಿತ್ತು. ಬಂಧನವಾದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ತನಿಖೆ ಸಂದರ್ಭ ತಿಳಿದುಬಂದಿದೆ. ಆರೋಪಿಗಳಾದ ಕೀರ್ತನ್ ಹಾಗೂ ಜಯಪ್ರಕಾಶ್ ವಿರುದ್ಧ ಈ ಹಿಂದೆ ಸೋಮವಾರಪೇಟೆ, ಕುಶಾಲನಗರ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್, ಕಳವು, ದರೋಡೆ, ಕೊಲೆ ಪ್ರಯತ್ನ ಪ್ರಕರಣ ದಾಖಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Hubli; ಶಾಸಕರ ಪರೇಡ್‌ ಮೂಲಕ ಮುಡಾ ಹಗರಣ ಮರೆಮಾಚಲು ಸಿಎಂ ಯತ್ನ: ಬಸವರಾಜ ಬೊಮ್ಮಾಯಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.