Upendra: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ʼಕೂಲಿʼ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಉಪ್ಪಿ


Team Udayavani, Aug 24, 2024, 5:54 PM IST

Upendra: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ʼಕೂಲಿʼ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಉಪ್ಪಿ

ಬೆಂಗಳೂರು: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ʼವೆಟ್ಟೈಯನ್‌ʼ ಸಿನಿಮಾ ರಿಲೀಸ್‌ ಗೆ ರೆಡಿಯಾಗಿದೆ. ಈ ಖುಷಿಯಲ್ಲಿರುವ ಅವರ ಅಭಿಮಾನಿಗಳಿಗೆ ಅವರ ಮುಂದಿನ ಸಿನಿಮಾ ʼಕೂಲಿʼ (Coolie) ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ – ಲೋಕೇಶ್‌ ಕನಕರಾಜ್‌ ( Lokesh Kanagaraj) ಅವರ ʼಕೂಲಿʼ ಕಾಲಿವುಡ್‌ ನಲ್ಲಿ ಶೂಟಿಂಗ್‌ ಹಂತದಲ್ಲೇ ಜೋರಾಗಿ ಸದ್ದು ಮಾಡುತ್ತಿದೆ. ಪಾತ್ರ ವರ್ಗದ ಬಗ್ಗೆ ದಿನಕಳೆದಂತೆ  ಲೇಟೆಸ್ಟ್‌ ಅಪ್ಡೇಟ್‌ ಗಳು ಹೊರಬೀಳುತ್ತಿದೆ.

ಇತ್ತೀಚೆಗೆ ಟಾಲಿವುಡ್‌ ಸೂಪರ್‌ ಸ್ಟಾರ್‌ ನಾಗಾರ್ಜುನ ಅಕ್ಕಿನೇನಿ (Nagarjuna Akkineni) ʼಕೂಲಿʼಗೆ ಸಿನಿಮಾದ ಭಾಗವಾಗಲಿದ್ದಾರೆ ಎಂದು ವರದಿ ಆಗಿತ್ತು.

ಇದೀಗ ಸಿನಿಮಾದ ಬಗ್ಗೆ ದೊಡ್ಡ ಅಪ್ಡೇಟ್‌ ವೊಂದು ಹೊರಬಿದ್ದಿದೆ. ಅದು ಪಾತ್ರವರ್ಗದ ಬಗ್ಗೆ ಸ್ಯಾಂಡಲ್‌ ವುಡ್‌ ನಟ, ನಿರ್ದೇಶಕ ಉಪೇಂದ್ರ (Upendra) ಸದ್ಯ ʼಯುಐʼ(UI Movie) ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತರಾಗಿದ್ದಾರೆ. ದಿನಕಳೆದಂತೆ ಸಿನಿಮಾದ ಬಗೆಗಿನ ಒಂದೊಂದೆ ಅಪ್ಡೇಟ್‌ ನೀಡುತ್ತಾ ಉಪ್ಪಿ ಪ್ರಚಾರದ ರೀತಿಯಲ್ಲೇ ಕುತೂಹಲ ಹೆಚ್ಚಾಗಿಸಿದ್ದಾರೆ.

ಈ ನಡುವೆ ಉಪ್ಪಿ ಕಾಲಿವುಡ್‌ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಬಗೆಗಿನ ಸುದ್ದಿ ಹರಿದಾಡಿದೆ. ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಕೂಲಿʼ ಸಿನಿಮಾದಲ್ಲಿ ಉಪೇಂದ್ರ ನೆಗೆಟಿವ್‌ ಲುಕ್‌ನಲ್ಲಿ ಅಬ್ಬರಿಸಲಿದ್ದಾರೆ ಎನ್ನಲಾಗಿದೆ.

ಈ ಕುರಿತ ಪೋಸ್ಟರ್‌ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸದ್ಯದ ವರದಿಗಳ ಪ್ರಕಾರ ಉಪ್ಪಿ ವಿಲನ್‌ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಉಪ್ಪಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಂದಿನ ದಿನದಲ್ಲಿ ಅಧಿಕೃತ ಮಾಹಿತಿ ಬರುವ ಸಾಧ್ಯತೆಯಿದೆ.

ಕನ್ನಡದ ಉಪೇಂದ್ರ ಸೂಪರ್‌ ಸ್ಟಾರ್‌  ರಜಿನಿಕಾಂತ್‌ ಜತೆ ಕಾಣಿಸಿಕೊಳ್ಳುತ್ತಿರುವ ಸುದ್ದಿಯನ್ನು ಕೇಳಿ ಫ್ಯಾನ್ಸ್‌ ಗಳು ಸಖತ್‌ ಥ್ರಿಲ್ ಆಗಿದ್ದಾರೆ.

ಈ ಬಗ್ಗೆ ಉಪೇಂದ್ರ ಅವರು ರಜನಿಕಾಂತ್‌ ಅವರೊಂದಿಗಿನ ಫೋಟೋ ಹಂಚಿಕೊಂಡು, ʼಕೂಲಿʼಯಲ್ಲಿ ನಟಿಸುತ್ತಿರುವ ಬಗ್ಗೆ ಅಧಿಕೃತವಾಗಿ ಹೇಳಿದ್ದಾರೆ. “ನಿಮ್ಮ ಆಶೀರ್ವಾದದಿಂದ ನನ್ನ ಸೂಪರ್‌ ಸ್ಟಾರ್ ರಜಿನಿ ಸಾರ್‌ ಜೊತೆ ಕೂಲಿ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Upendra Kumar (@nimmaupendra)

ಕಾಲಿವುಡ್‌ಗೆ ಉಪ್ಪಿ ಎಂಟ್ರಿ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2008ರಲ್ಲಿ ಬಂದ ವಿಶಾಲ್‌ ಅಭಿನಯದ ʼಸತ್ಯಂʼ ಸಿನಿಮಾದಲ್ಲಿ ಉಪ್ಪಿ ನಟಿಸಿದ್ದರು.

ಅಂದಹಾಗೆ  ʼಕೂಲಿʼ ಸಿನಿಮಾದಲ್ಲಿ ಮಲಯಾಳಂ ನಟರಾದ ಶೋಬನಾ ಮತ್ತು ಸೌಬಿನ್ ಶಾಹಿರ್ (Soubin Shahir) ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ʼಕೂಲಿʼಯ ಸಿನಿಮಾದ ಸಂಪೂರ್ಣ ಪಾತ್ರವರ್ಗ ಇನ್ನಷ್ಟೇ ರಿವೀಲ್‌ ಆಗಬೇಕಿದೆ. ಸತ್ಯರಾಜ್ (Satyaraj) ಮತ್ತು ಶ್ರುತಿ ಹಾಸನ್ (Shruti Haasan) ಅವರು ಸಿನಿಮಾದ ಭಾಗವಾಗಲಿದ್ದಾರೆ ಎನ್ನುವುದು ಅಧಿಕೃತವಾಗಿದೆ.

ಇತ್ತ ರಜಿನಿಕಾಂತ್‌ ಅವರ ‌ʼವೆಟ್ಟೈಯನ್‌ ʼ ಅಕ್ಟೋಬರ್ 10ರಂದು ರಿಲೀಸ್‌ ಆಗಲಿದೆ. ಉಪೇಂದ್ರ ʼಯುಐʼ ಸಿನಿಮಾದ ಹಾಡಿನ ಬಗ್ಗೆ ಅಪ್ಡೇಟ್‌ ಕೊಟ್ಟು ಫ್ಯಾನ್ಸ್‌ ಗಳನ್ನು ಖುಷ್‌ ಆಗಿಸಿದ್ದಾರೆ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.