Jog Falls ; ಪ್ರವಾಸಿ ಸೌಲಭ್ಯವಿಲ್ಲದ ಜೋಗ ವೀಕ್ಷಣೆಗೆ ಪ್ರವಾಸಿಗರಿಗೆ ದುಬಾರಿ ಶುಲ್ಕ!

ಸೌಲಭ್ಯ ಕೊಟ್ಟು ಶುಲ್ಕ ಹೆಚ್ಚಿಸಿ; ಪ್ರವಾಸಿಗರ ಕೂಗು

Team Udayavani, Aug 24, 2024, 6:10 PM IST

1-j-a

ಸಾಗರ: ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತ ಅಭಿವೃದ್ಧಿ ಆಮೆಗತಿಯಲ್ಲಿ ಸಾಗುತ್ತಿದೆ. ಜೋಗ ಜಲಪಾತ ಸುತ್ತಲೂ ಕಾಂಕ್ರೀಟ್ ಕಾಡು ನಿರ್ಮಾಣಗೊಳ್ಳುತ್ತಿದ್ದು ಕಳೆದ ಮೂರು ವರ್ಷದಿಂದ ಕಾಮಗಾರಿ ಇನ್ನೂ ಮುಗಿದಿಲ್ಲ. ಸದ್ಯ ರಾಜ್ಯ ಹೊರರಾಜ್ಯ, ಹೊರರಾಷ್ಟ್ರಗಳಿಂದ ಬರುವ ಪ್ರವಾಸಿಗರಿಗೆ ಜೋಗದಲ್ಲಿ ಯಾವುದೇ ಮೂಲಭೂತ ಸೌಲಭ್ಯ ಇಲ್ಲ. ಆದರೆ ಜೋಗ ನಿರ್ವಹಣಾ ಪ್ರಾಧಿಕಾರ ಮಾತ್ರ ಪ್ರವಾಸಿಗರು ಮತ್ತು ಪ್ರವಾಸಿ ವಾಹನಗಳಿಗೆ ವಿಧಿಸುತ್ತಿದ್ದ ಶುಲ್ಕವನ್ನು ದುಪ್ಪಟ್ಟಗೊಳಿಸಿ ಪ್ರವಾಸಿಗರ ಕೆಂಗಣ್ಣಿಗೆ ಗುರಿಯಾಗಿದೆ.

ವಿಶ್ವವಿಖ್ಯಾತ ಜೋಗ ಜಲಪಾತ ಮೈತುಂಬಿಕೊಳ್ಳುವುದು ಮಳೆಗಾಲದಲ್ಲಿ ಮಾತ್ರ. ವರ್ಷದಲ್ಲಿ ಆರು ತಿಂಗಳು ಕಂಗೊಳಿಸುವ ಜೋಗ ಜಲಪಾತ ನಂತರದ ತಿಂಗಳುಗಳಲ್ಲಿ ಬಿಳಿ ಹತ್ತಿ ಹಾರದಂತೆ ಕಂಡೂಕಾಣದಂತೆ ಧುಮುಕುತ್ತದೆ. ಪ್ರವಾಸಿಗರು ಸಹ ಈ ದಿನಗಳಲ್ಲಿ ಜೋಗದತ್ತ ಸುಳಿಯುವುದು ವಿರಳ. ಇದೀಗ ರಾಜ್ಯದ ಯಾವ ಪ್ರವಾಸಿ ತಾಣಗಳಲ್ಲಿ ಇಲ್ಲದ ಪ್ರವೇಶ ಶುಲ್ಕ ಮತ್ತು ವಾಹನ ಶುಲ್ಕ ವಿಧಿಸುವ ಮೂಲಕ ದಾಖಲೆ ನಿರ್ಮಿಸಿದೆ. ಅಭಿವೃದ್ಧಿ ಆದ ಮೇಲೆ ಪ್ರವೇಶ ಶುಲ್ಕ ಹೆಚ್ಚು ಮಾಡಿದ್ದರೆ ಯಾವುದೇ ವಿರೋಧ ಸ್ಥಳೀಯರು ಮತ್ತು ಪ್ರವಾಸಿಗರಿಂದ ಬರುತ್ತಿರಲಿಲ್ಲ. ಆದರೆ ಅಭಿವೃದ್ಧಿಯನ್ನೇ ಮಾಡದೆ ಜೋಗ ವೀಕ್ಷಣೆ ದರ ದುಪ್ಪಟ್ಟುಗೊಳಿಸಿರುವುದು ಸರಿಯಲ್ಲ ಎನ್ನುವುದು ಜನಾಭಿಪ್ರಾಯವಾಗಿದೆ.

ಜೋಗ ನಿರ್ವಹಣಾ ಪ್ರಾಧಿಕಾರಿ ಹೊಸ ದರ ನಿಗದಿಪಡಿಸಿ ಫ್ಲೆಕ್ಸ್ ಅಳವಡಿಕೆಗೆ ಎಲ್ಲ ಸಿದ್ಧತೆ ನಡೆಸಿದೆ. ಪ್ರವಾಸಿ ಬಸ್‌ಗೆ ರೂ. 200 (ಹಳೆ ದರ ರೂ. 150), ಮಿನಿ ಬಸ್‌ಗೆ ರೂ. 150 (ಹಳೆ ದರ ರೂ. 100), ಕಾರು ಮತ್ತು ಜೀಪ್‌ಗೆ ರೂ.80 (ಹಳೆ ದರ ರೂ.50 ), ಆಟೋಗೆ ರೂ. 40), (ಹಳೆದರ ರೂ. 30) ದ್ವಿಚಕ್ರ ವಾಹನ ರೂ. 30 (ಹಳೆ ದರ ರೂ.20), ವಿದೇಶಿ ಪ್ರವಾಸಿಗರಿಗೆ ರೂ. 100 (ಹಳೆ ದರ ರೂ. 50), ಪ್ರವಾಸಿಗರಿಗೆ ರೂ. 20 (ಹಳೆ ದರ ರೂ. 10), ಕಾಲೇಜು ವಿದ್ಯಾರ್ಥಿಗಳಿಗೆ ರೂ. 20, ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೂ. 10 ನಿಗದಿಪಡಿಸಿ ಫ್ಲೆಕ್ಸ್ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ ವಾಹನದಲ್ಲಿ ಕುಳಿತ ಪ್ರವಾಸಿಗರಿಗೂ ಶುಲ್ಕ ನಿಗದಿಪಡಿಸಲಾಗಿದೆ. ಇತರೆ ಪ್ರವಾಸಿ ತಾಣಗಳಲ್ಲಿ ವಾಹನಗಳಿಗೆ ಶುಲ್ಕ ನಿಗದಿ ಮಾಡುತ್ತಾರೆಯೇ ವಿನಾ ವಾಹನದೊಳಗಿನ ಪ್ರಯಾಣಿಕರಿಗೆ ಶುಲ್ಕ ತೆಗೆದುಕೊಳ್ಳುವುದಿಲ್ಲ. ಆದರೆ ಜೋಗ ನಿರ್ವಹಣಾ ಪ್ರಾಧಿಕಾರ ಹೊಸ ಸಂಪ್ರದಾಯ ಪ್ರಾರಂಭಿಸಿದೆ. ಒಮ್ಮೆ ಟಿಕೆಟ್ ಪಡೆದು ಒಳಗೆ ಹೋದವರು ಎರಡು ಗಂಟೆ ಮಾತ್ರ ಜೋಗ್ ಫಾಲ್ಸ್‌ನಲ್ಲಿ ಇರಬೇಕು. ನಂತರವೂ ಜಲಪಾತ ವೀಕ್ಷಣೆ ಮಾಡಬೇಕು ಎಂದರೆ ಮತ್ತೆ ಟಿಕೆಟ್ ಪಡೆಯಬೇಕಾ ಎನ್ನುವುದು ಪ್ರವಾಸಿಗರ ಪ್ರಶ್ನೆಯಾಗಿದೆ. ಕೆಲವೊಮ್ಮೆ ಮಂಜು ಮುಸುಕಿದರೆ ಜೋಗ ಜಲಪಾತ ಸಂಜೆವರೆಗೂ ಪ್ರವಾಸಿಗರಿಗೆ ದರ್ಶನ ನೀಡುವುದಿಲ್ಲ.

ಸದ್ಯ ಜೋಗ ಜಲಪಾತದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಭಾನುವಾರ ಮತ್ತು ರಜೆ ದಿನಗಳಲ್ಲಿ ಪ್ರವಾಸಿಗರು ಕಿಲೋಮೀಟರ್‌ಗಟ್ಟಲೆ ದೂರ ವಾಹನ ನಿಲ್ಲಿಸಿ ಪಾದಾಚಾರಿಗಳಾಗಿ ಫಾಲ್ಸ್‌ಗೆ ಬರಬೇಕು. ಹೀಗೆ ಬರುವ ಪ್ರವಾಸಿಗರಿಗೆ ವಾಹನಕ್ಕೂ ಟ್ಯಾಕ್ಸ್, ತಲೆಗೂ ಟ್ಯಾಕ್ಸ್ ಬೀಳುತ್ತಿದೆ. ಒಂದರ್ಥದಲ್ಲಿ ಅವೈಜ್ಞಾನಿಕ ಶುಲ್ಕ ವಸೂಲಿ ಕ್ರಮ ಜೋಗ ಜಲಪಾತದಲ್ಲಿ ನಡೆಯುತ್ತಿದ್ದು, ಜೋಗ ನಿರ್ವಹಣಾ ಪ್ರಾಧಿಕಾರ ಮಾಡುತ್ತಿರುವ ಹಗಲು ದರೋಡೆ ಎಂದೇ ಹೇಳಲಾಗುತ್ತಿದೆ.

ಫಾಲ್ಸ್ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಸರುಗದ್ದೆಯಾಗಿದೆ. ಇರುವ ಒಂದು ಶೌಚಾಲಯ ಗಬ್ಬು ನಾರುತ್ತಿರುತ್ತದೆ. ಕುಡಿಯುವ ನೀರು ಸಹ ಇಲ್ಲ. ಪ್ರವಾಸಿಗರಿಗೆ ಯಾವ ಸೌಲಭ್ಯವೂ ಕೊಡದೆ ಶುಲ್ಕ ಮಾತ್ರ ದುಬಾರಿ ವಸೂಲಿ ಯಾಕೆ ಎನ್ನುವುದಕ್ಕೆ ಪ್ರಾಧಿಕಾರದ ಅಧಿಕಾರಿಗಳೇ ಉತ್ತರ ಕೊಡಬೇಕು. ಅಭಿವೃದ್ಧಿಗೆ ಅನುದಾನ ತಂದಿರುವ ಶಾಸಕರು ದುಪ್ಪಟ್ಟು ಶುಲ್ಕ ವಿಧಿಸಿರುವುದನ್ನು ಕಡಿಮೆಗೊಳಿಸಿ ಜೋಗ ಜಲಪಾತವನ್ನು ಜನಸ್ನೇಹಿ ಪ್ರವಾಸಿ ತಾಣವಾಗಿಸುವತ್ತ ಗಮನ ಹರಿಸಬೇಕು ಎಂದು ಪ್ರವಾಸಿಗರು ಒತ್ತಾಯಿಸಿದ್ದಾರೆ.

ಯಾರ ಕಾಲದಲ್ಲಿ ಅನುದಾನ; ಗೊಂದಲ
ಜೋಗ ಜಲಪಾತವನ್ನು ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಕೊನೆ ಸಂದರ್ಭದಲ್ಲಿ ಸುಮಾರು 185 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದು ಯಾರು ಎನ್ನುವ ಜಿಜ್ಞಾಸೆ ಇದ್ದು, ಹಾಲಿ ಶಾಸಕರು ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದೆ. ಸಂಸದ ಬಿ.ವೈ.ರಾಘವೇಂದ್ರ, ಹಿಂದಿನ ಶಾಸಕ ಹರತಾಳು ಹಾಲಪ್ಪ ಕೊಡುಗೆ ಏನೂ ಇಲ್ಲ ಎಂದು ಪದೇಪದೇ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.