Guttigaru: ಮಸೀದಿ ವಠಾರಕ್ಕೆ ಬಂದ ಇಬ್ಬರಿಂದ ವಿದ್ಯಾರ್ಥಿಗಳಿಗೆ ಬೆದರಿಕೆ
Team Udayavani, Aug 24, 2024, 7:28 PM IST
ಗುತ್ತಿಗಾರು: ಮಸೀದಿ ವಠಾರಕ್ಕೆ ಬಂದು ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡಿ ಹೋಗಿದ್ದಾರೆಂದು ಆರೋಪಿಸಿ ಮಸೀದಿ ಸಮಿತಿಯವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿರುವ ಘಟನೆ ಎಲಿಮಲೆಯಿಂದ ವರದಿಯಾಗಿದೆ.
ಎಲಿಮಲೆ ಜುಮ್ಮಾ ಮಸೀದಿಗೆ ಆ. 22ರ ರಾತ್ರಿ ಸುಮಾರು 11ಕ್ಕೆ ಬಂದ ಸತೀಶ ಗುಡ್ಡನಮನೆ ಹಾಗೂ ತಂಡ ಮಸೀದಿಯ ಆವರಣದಲ್ಲಿ ನಿಂತು ಜೋರಾಗಿ ಬೈದು ಬೆದರಿಕೆ ಹಾಕಿರುವುದಾಗಿ ಪೋಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಎರಡು ದಿನ ಮೊದಲು ಮಸೀದಿಯ ವಿದ್ಯಾರ್ಥಿಗಳು ಶಾಲೆಗೆ ಹೋಗುವ ವೇಳೆ ರಸ್ತೆಯಲ್ಲಿ ಇಬ್ಬರು ಅಡ್ಡಗಟ್ಟಿ ನೀವು ಈ ರೀತಿಯ ಟೋಪಿಗಳನ್ನು ಧರಿಸಿ ಶಾಲೆಗೆ ಹೋಗಬಾರದು ಎಂದು ಹೆದರಿಸಿದ್ದರು ಎಂದೂ ಸುಬ್ರಮಣ್ಯ ಪೋಲೀಸರಿಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿ ಶನಿವಾರ ಸುಬ್ರಮಣ್ಯ ಎಸ್ಐ ಕಾರ್ತಿಕ್, ಪುತ್ತೂರು ಡಿವೈಎಸ್ಪಿ ಹಾಗೂ ಇತರ ಅಧಿಕಾರಿಗಳು ಮಸೀದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.