New pension scheme ಘೋಷಿಸಿದ ಕೇಂದ್ರ: ನೌಕರರಿಗೆ ಖಚಿತವಾದ ಕನಿಷ್ಠ ನಿಧಿ
ಸುಮಾರು 23 ಲಕ್ಷ ಕೇಂದ್ರ ಸರಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ...
Team Udayavani, Aug 24, 2024, 9:02 PM IST
ಹೊಸದಿಲ್ಲಿ: ಕೇಂದ್ರ ಸರಕಾರ ಶನಿವಾರ(ಆ 24) ಏಕೀಕೃತ ಪಿಂಚಣಿ ಯೋಜನೆ ( Unified Pension Scheme) ಎಂಬ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಿದೆ. ಇದರಲ್ಲಿ ಕೇಂದ್ರ ಸರಕಾರಿ ನೌಕರರು ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿಯನ್ನು ಪಡೆಯುತ್ತಾರೆ.ಹೊಸ ಪಿಂಚಣಿ ಯೋಜನೆ 2025 ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.
ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಈ ಯೋಜನೆಯು ಕಳೆದ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇಕಡಾ 50 ರಷ್ಟು ಪಿಂಚಣಿಯನ್ನು ಖಾತರಿಪಡಿಸಲಿದೆ. ಉದ್ಯೋಗಿ ಕನಿಷ್ಠ 25 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ್ದರೆ ಕಡಿಮೆ ಸೇವೆ ಹೊಂದಿರುವವರಿಗೆ, ಪಿಂಚಣಿ ಪ್ರಮಾಣಾನುಗುಣವಾಗಿ ಲಭ್ಯವಾಗುತ್ತದೆ. ನೌಕರನ ಮರಣದ ಮೊದಲು ಪಿಂಚಣಿಯ ಶೇಕಡಾ 60 ರಷ್ಟು ಕುಟುಂಬ ಪಿಂಚಣಿಯನ್ನು ಖಚಿತಪಡಿಸಲಿದೆ.
ಈ ಯೋಜನೆಯು ಕನಿಷ್ಟ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಮೇಲೆ ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಖಾತರಿಪಡಿಸಲಿದೆ.
ಸುಮಾರು 23 ಲಕ್ಷ ಕೇಂದ್ರ ಸರಕಾರಿ ನೌಕರರು UPSನಿಂದ ಪ್ರಯೋಜನ ಪಡೆಯಲಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.”ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಮತ್ತು UPS ನಡುವೆ ಉದ್ಯೋಗಿಗಳಿಗೆ ಆಯ್ಕೆ ಮಾಡಲು ಅವಕಾಶವಿದೆ” ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಈ ಯೋಜನೆಯಡಿಯಲ್ಲಿ, ಗ್ರಾಚ್ಯುಟಿ ಜತೆಗೆ ಹೆಚ್ಚುವರಿ ಮೊತ್ತದ ಪಾವತಿ ಮತ್ತು ಮಾಸಿಕ ವೇತನದ ಹತ್ತನೇ ಒಂದು ಭಾಗ (ಪೇ + ಡಿಎ (Dearness Allowance)) ಪ್ರತಿ ಪೂರ್ಣಗೊಂಡ ಆರು ತಿಂಗಳ ಸೇವೆಗೆ ನಿವೃತ್ತಿಯ ದಿನಾಂಕದಂದು ಸಿಗುತ್ತದೆ. ಈ ಪಾವತಿಯು ಉದ್ಯೋಗಿಗಳಿಗೆ ಖಚಿತವಾದ ಪಿಂಚಣಿ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.
OPS ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಹೊಂದಾಣಿಕೆಗಳೊಂದಿಗೆ ಜೀವನಕ್ಕಾಗಿ ಉದ್ಯೋಗಿ ಪಡೆಯುವ ಕೊನೆಯ ಸಂಬಳದ ಅರ್ಧದಷ್ಟು ಪಿಂಚಣಿ ಖಾತರಿಪಡಿಸುವ ಯೋಜನೆಯಾಗಿದೆ.NPS ನಲ್ಲಿ ಸರಕಾರಿ ನೌಕರರು ತಮ್ಮ ಮೂಲ ವೇತನದ 10% ಅನ್ನು ಕೊಡುಗೆ ನೀಡಿದರೆ ಸರಕಾರವು 14% ಕೊಡುಗೆಯನ್ನು ಹೊಂದಿಸುತ್ತದೆ.
ಪ್ರಧಾನಿ ಮೋದಿ ಅವರು ಕೇಂದ್ರ ಸರಕಾರಿ ನೌಕರರ ಜಂಟಿ ಸಲಹಾ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಿಯೋಗ ಅಭಿನಂದನೆ ಸಲ್ಲಿಸಿತು.
#WATCH | PM Modi meets delegation of staff side of Joint Consultative Machinery for Central Government employees. pic.twitter.com/grqQisHUs4
— ANI (@ANI) August 24, 2024
ಕೇಂದ್ರ ಸರಕಾರವು ಈ ಹಿಂದೆ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತರಲು ಯಾವುದೇ ತತ್ ಕ್ಷಣದ ಯೋಜನೆಗಳಿಲ್ಲ ಎಂದು ಹೇಳಿತ್ತು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆಗಳೂ ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.