Tragic: ಪತ್ನಿ ಸಾವಿನ ಸುದ್ದಿ ಕೇಳಿದ ಪತಿಯೂ ಹೃದಯಘಾತದಿಂದ ನಿಧನ
Team Udayavani, Aug 24, 2024, 9:48 PM IST
ಕೊಳ್ಳೇಗಾಲ(ಚಾಮರಾಜನಗರ): ಪತ್ನಿಯ ಸಾವಿನ ಸುದ್ದಿಯನ್ನು ಕೇಳಿ ಪತಿಯೂ ಹಠಾತ್ ಹೃದಯಘಾತಕ್ಕೆ ಒಳಗಾಗಿ ನಿಧನರಾದ ಹೃದಯವಿದ್ರಾವಕ ಘಟನೆ ಹನೂರು ತಾಲ್ಲೂಕಿನ ಮಂಗಲ ಗ್ರಾಮ ಸಮೀಪದ ರಾಮನಗುಡ್ಡ ಜಲಾಶಯ ತೋಟದ ಮನೆಯಲ್ಲಿ ಶುಕ್ರವಾರ (ಆ.23ರಂದು) ರಾತ್ರಿ ನಡೆದಿದೆ.
ರಾಜಶೇಖರವೀರಣ್ಣರಾಧ್ಯ (68), ಈತನ ಪತ್ನಿ ಸುಮಿತ್ರ (60)ಮೃತ ದುರ್ಧೈವಿಗಳಾಗಿದ್ದಾರೆ.
ಘಟನೆ ವಿವರ: ಶುಕ್ರವಾರ ರಾತ್ರಿ 10.30 ರ ವೇಳೆಗೆ ಸುಮಿತ್ರ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪತ್ನಿ ಸುಮಿತ್ರ ಮೃತಪಟ್ಟಿದ್ದಾರೆ. ಇದನ್ನು ಕೇಳಿ ಪತಿ ರಾಜಶೇಖರವೀರಣ್ಣರಾಧ್ಯ ಅವರಿಗೂ ಹೃದಯಘಾತವಾಗಿದ್ದು, ಅವರೂ ಮೃತಪಟ್ಟಿದ್ದಾರೆ. ಆ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದೆ.
ಮೃತರು ಎರಡು ಹೆಣ್ಣು, ಒಂದು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಲ ಗ್ರಾಮ ಸಮೀಪದ ರಾಮನಗುಡ್ಡ ಜಲಾಶಯ ತೋಟದ ಮನೆಯಲ್ಲಿ ಶನಿವಾರ(ಆ.24ರಂದು) ಸಂಜೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.