Official language: ತುಳುವಿಗೆ ಅಧಿಕೃತ ಸ್ಥಾನಮಾನಕ್ಕೆ ಯತ್ನ: ಸ್ಪೀಕರ್ ಯು.ಟಿ.ಖಾದರ್
ಹಿರಿಯ ನಟ ನಿರ್ಮಾಪಕ ತೋನ್ಸೆ ವಿಜಯ ಕುಮಾರ್ ಶೆಟ್ಟಿಗೆ ಸಮ್ಮಾನ
Team Udayavani, Aug 24, 2024, 11:59 PM IST
ಮಂಗಳೂರು: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿ ಸುತ್ತಿದ್ದೇನೆ. 2ನೇ ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವ ಇತರ ರಾಜ್ಯಗಳಿಂದ ಮಾಹಿತಿ ತರಿಸಲು ಸಮಿತಿ ರಚಿಸಲಾಗಿದ್ದು, ಅಧಿಕೃತ ಸ್ಥಾನಮಾನಕ್ಕೆ ಶ್ರಮಿಸುವುದಾಗಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಜರಗಿದ ತುಳುನಾಡ “ಜಾನಪದ ಉಚ್ಚಯ 2024’ರ ಸಮಾರೋಪದಲ್ಲಿ ಹಿರಿಯ ನಟ ನಿರ್ಮಾಪಕ ತೋನ್ಸೆ ವಿಜಯ ಕುಮಾರ್ ಶೆಟ್ಟಿಗೆ ಸಮ್ಮಾನ ನೆರವೇರಿಸಿ ಅವರು ಮಾತನಾಡಿದರು. ಶಾಶ್ವತವಾಗಿ ತುಳು ಪರಂಪರೆ, ಜೀವನ ಪದ್ಧತಿಯನ್ನು ದೇಶ ವಿದೇಶದ ಜನ ಕಲಿಯಬೇಕೆನ್ನುವ ಉದ್ದೇಶದಿಂದ ತುಳು ಗ್ರಾಮ ಪರಿಕಲ್ಪನೆಯನ್ನು ಜಾರಿ ಗೊಳಿಸಲಾಗುವುದು ಎಂದರು.
ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ವಿಧಾನಸಭೆಯಲ್ಲಿ ತುಳು ಭಾಷೆಯ ಕಂಪು ಪಸರಿದೆ. ಲೋಕ ಸಭೆಯಲ್ಲೂ ಇದು ಮಾರ್ದನಿಸಬೇಕು. ರಾಜಕೀಯ ಮರೆತು ಒಂದಾಗಿ ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಬೇಕು. ಜಾನಪದ ಭಾಷೆಗೆ ತಾಯಿ ಬೇರು ಇದ್ದಂತೆ, ಇಂತಹ ತುಳು ಬೆಳೆಸಲು ಒಂದಾಗೋಣ ಎಂದರು.
ಹಿರಿಯ ರಂಗಕರ್ಮಿ ತೋನ್ಸೆ ವಿಜಯ ಕುಮಾರ್ ಶೆಟ್ಟಿಗೆ “ಪೆರ್ಮೆದ ತುಳುವೆ 2024′ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂ ಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಡಾ| ಮೂಡಂಬೈಲು ರವಿ ಶೆಟ್ಟಿ ಕತಾರ್, ಶಶಿ ಕಿರಣ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ಕೆ.ಡಿ. ಶೆಟ್ಟಿ, ರವೀಂದ್ರನಾಥ ಎಂ. ಭಂಡಾರಿ, ಕಿಶನ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಗೌರವಾಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ, ಧರ್ಮಪಾಲ ಯು. ದೇವಾಡಿಗ ಮುಂಬಯಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.